AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಾಮ್’ ಅಂಶಗಳಿದ್ದರೂ ತುರ್ತು ಪರಿಸ್ಥಿತಿಯಲ್ಲಿ ಕೊರೊನಾ ಲಸಿಕೆ ಪಡೆದುಕೊಳ್ಳಬಹುದು: ಜಮಾತ್​-ಎ-ಇಸ್ಲಾಮಿ ಸ್ಪಷ್ಟನೆ

ಕೊವಿಡ್-19 ವಿರುದ್ಧದ ಲಸಿಕೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹರಾಮ್ ಆದ ಪದಾರ್ಥಗಳಿವೆ, ಹಾಗಾಗಿ ಲಸಿಕೆ ಪಡೆಯಬಾರದು ಎಂದು ಕೆಲವು ಮುಸ್ಲಿಂ ವಿದ್ವಾಂಸರು ಅಭಿಪ್ರಾಯಪಟ್ಟಿದ್ದರು.

‘ಹರಾಮ್’ ಅಂಶಗಳಿದ್ದರೂ ತುರ್ತು ಪರಿಸ್ಥಿತಿಯಲ್ಲಿ ಕೊರೊನಾ ಲಸಿಕೆ ಪಡೆದುಕೊಳ್ಳಬಹುದು: ಜಮಾತ್​-ಎ-ಇಸ್ಲಾಮಿ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 11:05 PM

Share

ದೆಹಲಿ: ಕೊರೊನಾ ಲಸಿಕೆಯಲ್ಲಿ ಹರಾಮ್ (ಧರ್ಮ ಬಾಹಿರವಾದ) ಅಂಶಗಳಿದ್ದರೂ ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ ಲಸಿಕೆಯನ್ನು ಪಡೆದುಕೊಳ್ಳಬಹುದು ಎಂದು ಜಮಾತ್-ಎ-ಇಸ್ಲಾಮಿ (ಹಿಂದ್) ಸಂಘಟನೆ ಶನಿವಾರ ಸ್ಪಷ್ಟನೆ ನೀಡಿದೆ.

ಕೊವಿಡ್-19 ವಿರುದ್ಧದ ಲಸಿಕೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹರಾಮ್ ಆದ ಪದಾರ್ಥಗಳಿವೆ, ಹಾಗಾಗಿ ಲಸಿಕೆ ಪಡೆಯಬಾರದು ಎಂದು ಕೆಲವು ಮುಸ್ಲಿಂ ವಿದ್ವಾಂಸರು ಅಭಿಪ್ರಾಯಪಟ್ಟಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಮಾತ್-ಎ-ಇಸ್ಲಾಮಿ (ಹಿಂದ್), ಹರಾಮಿ ಅಂಶಗಳಿರದ ಲಸಿಕೆ ಅಲಭ್ಯವಾದರೆ ಯಾವುದೇ ಲಸಿಕೆ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

ಜಮಾತ್-ಎ-ಇಸ್ಲಾಮಿ, ಶರಯಾ ಕೌನ್ಸಿಲ್ ಕಾರ್ಯದರ್ಶಿ ಡಾ. ರಾಝಿ-ಉಲ್-ಇಸ್ಲಾಂ ನದ್ವಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹರಾಮಿ ಅಂಶಗಳು ಮತ್ತೊಂದು ವಸ್ತುವಿನಲ್ಲಿ ಸಂಪೂರ್ಣ ಭಿನ್ನವಾಗಿ ಸೇರಿಕೊಂಡರೆ. ಹರಾಮಿ ಅಂಶಗಳ ಗುಣಲಕ್ಷಣಗಳು ಅದರಲ್ಲಿ ಇಲ್ಲದಿದ್ದರೆ ಅಂಥಾ ವಸ್ತುವನ್ನು ಬಳಸಬಹುದು. ಈ ನೀತಿಯ ಅನ್ವಯ, ಕೊರೊನಾ ಲಸಿಕೆ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಒಂದುವೇಳೆ ಈ ನಿಯಮವನ್ನು ತಿರಸ್ಕರಿಸುವವರಿದ್ದರೆ ಅಂಥವರು ಆಪತ್ಕಾಲದ ಅಥವಾ ತುರ್ತು ಸಂದರ್ಭದ ಕಾರಣದಿಂದ, ಹರಾಮಿ ಅಂಶಗಳಿದ್ದರೂ ಲಸಿಕೆ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಲಸಿಕೆಯಲ್ಲಿ ಬಳಸಿಕೊಂಡಿರುವ ವಸ್ತುಗಳ ಬಗ್ಗೆ ಈವರೆಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ, ಲಸಿಕೆಯ ಬಗ್ಗೆ ಸದ್ಯ ಗೊಂದಲ ಬೇಡ. ಮುಂದೆ, ಲಸಿಕೆಗೆ ಬಳಸಿರುವ ಅಂಶಗಳ ಬಗ್ಗೆ ವಿವರ ಸಿಕ್ಕಿದರೆ ನಂತರ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಡಾ. ರಾಝಿ-ಉಲ್-ಇಸ್ಲಾಂ ನದ್ವಿ ಮಾಹಿತಿ ನೀಡಿದ್ದಾರೆ.

ಭಾರತ, ಇಂಡೊನೇಷ್ಯಾ ಹಾಗೂ ಯುಎಇ ದೇಶಗಳಲ್ಲಿ ಕೆಲವು ಮುಸ್ಲಿಂ ಸಂಘಟನೆಯ ವಿದ್ವಾಂಸರು, ಕೊರೊನಾ ಲಸಿಕೆಯಲ್ಲಿ ಹಂದಿ ಜೆಲೆಟಿನ್ ಇರುವುದರಿಂದ ಅವುಗಳನ್ನು ಸ್ವೀಕರಿಸಬಾರದು ಎಂದು ಹೇಳಿದ್ದರು. ಭಾರತದ ಸುನ್ನಿ ಜಮಿಯಾತ್-ಉಲ್-ಉಲೆಮಾ ಕೌನ್ಸಿಲ್ ಮತ್ತು ರಾಝಾ ಅಕಾಡೆಮಿ ಕೊವಿಡ್-19 ವಿರುದ್ಧದ ಲಸಿಕೆಯನ್ನು ಹರಾಮ್ ಎಂದು ಹೇಳಿತ್ತು. ಮುಸ್ಲಿಂ ಸಮುದಾಯದ ಜನರು ಲಸಿಕೆ ಪಡೆಯದಂತೆಯೂ ಸೂಚಿಸಿತ್ತು.

Explainer | ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗೆ ಅನುಮೋದನೆ ಸಿಕ್ಕಿದ್ದಾಯ್ತು; ಮುಂದೇನು?

Published On - 7:22 pm, Sun, 3 January 21

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್