AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣದ ಆಸ್ಪತ್ರೆಯಿಂದ ಕೊರೊನಾ ಲಸಿಕೆಯನ್ನೇ ಎಗರಿಸಿದ ಕಳ್ಳರು; 1,710 ಡೋಸ್ ಲಸಿಕೆ ಹಾಗೂ ಕಡತಗಳು ಕಣ್ಮರೆ

ಜಿಂದ್​ನ ಸಿವಿಲ್ ಆಸ್ಪತ್ರೆಯ ಪಿಪಿಸಿ ಸೆಂಟರ್‌ನಿಂದ ಲಸಿಕೆ ಕಳ್ಳತನವಾಗಿದ್ದು, ಕೊವಿಶೀಲ್ಡ್​ ಹಾಗೂ ಕೊವ್ಯಾಕ್ಸಿನ್ ಎರಡೂ ಲಸಿಕೆಗಳನ್ನು ಖದೀಮರು ಹೊತ್ತೊಯ್ದಿರುವುದು ಗಮನಕ್ಕೆ ಬಂದಿದೆ.

ಹರಿಯಾಣದ ಆಸ್ಪತ್ರೆಯಿಂದ ಕೊರೊನಾ ಲಸಿಕೆಯನ್ನೇ ಎಗರಿಸಿದ ಕಳ್ಳರು; 1,710 ಡೋಸ್ ಲಸಿಕೆ ಹಾಗೂ ಕಡತಗಳು ಕಣ್ಮರೆ
ಆಸ್ಟ್ರಾಜೆನೆಕಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Skanda
| Edited By: |

Updated on:Apr 22, 2021 | 3:17 PM

Share

ಹರಿಯಾಣ: ದೇಶದಲ್ಲಿ ಕೊರೊನಾ ನಿಯಂತ್ರಿಸಲು ಪರದಾಡುತ್ತಿರುವ ಆರೋಗ್ಯ ಸಿಬ್ಬಂದಿಗೆ ಒಂದೆಡೆ ಸೋಂಕಿತರನ್ನು ರಕ್ಷಿಸುವುದು ಸವಾಲಾಗಿದ್ದರೆ, ಇನ್ನೊಂದೆಡೆ ಕಳ್ಳರಿಂದ ಕೊರೊನಾ ಲಸಿಕೆಯನ್ನು ಕಾಪಾಡಿಕೊಳ್ಳುವುದೂ ದೊಡ್ಡ ತಲೆನೋವಾಗಿದೆ. ದೇಶದಲ್ಲಿ ಕೊರೊನಾ ಲಸಿಕೆಯ ಕೊರತೆ ತಲೆದೋರಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ಹರಿಯಾಣದ ಜಿಂದ್​ನಲ್ಲಿರುವ ಸಿವಿಲ್​ ಆಸ್ಪತ್ರೆಯ ಪಿಪಿಸಿ ಸೆಂಟರ್​ನಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಬರೋಬ್ಬರಿ 1,710 ಡೋಸ್ ಕೊರೊನಾ ಲಸಿಕೆ ಹಾಗೂ ಕೆಲ ಕಡತಗಳು ಕಣ್ಮರೆಯಾಗಿದೆ.

ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡಿದ್ದು ಹಲವೆಡೆ ಪರಿಸ್ಥಿತಿ ಗಂಭೀರ ಸ್ವರೂಪಕ್ಕೆ ತಿರುಗಿರುವುದರಿಂದ ಸೋಂಕಿನ ತೀವ್ರತೆಗೆ ಆರೋಗ್ಯ ವ್ಯವಸ್ಥೆ ಅಕ್ಷರಶಃ ನಲುಗಿ ಹೋಗಿದೆ. ಮೊದಲ ಅಲೆಗಿಂತಲೂ ಹೆಚ್ಚಿನ ಕಠಿಣತೆ ಈಗ ಎದುರಾಗಿದೆ. ಸದ್ಯದ ಸಂದರ್ಭದಲ್ಲಿ ಸೋಂಕು ತಡೆಗಟ್ಟಲು ಕೊರೊನಾ ಲಸಿಕೆಗೆ ಸರ್ಕಾರ ಹೆಚ್ಚು ಮಹತ್ವ ನೀಡುತ್ತಿದ್ದು, ಲಸಿಕೆ ಉತ್ಪಾದನೆಯನ್ನೂ ಹೆಚ್ಚಿಸಲಾಗುತ್ತಿದೆ. ಆದರೆ, ಇಂತಹ ಸಂಕಷ್ಟದ ಸಂದರ್ಭದಲ್ಲೇ ಆಸ್ಪತ್ರೆಗಳ ಮೇಲೆ ಕಣ್ಣಿಟ್ಟಿರುವ ಕಳ್ಳರು ಲಸಿಕೆಯನ್ನೇ ಎಗರಿಸಿದ್ದಾರೆ.

ಜಿಂದ್​ನ ಸಿವಿಲ್ ಆಸ್ಪತ್ರೆಯ ಪಿಪಿಸಿ ಸೆಂಟರ್‌ನಿಂದ ಲಸಿಕೆ ಕಳ್ಳತನವಾಗಿದ್ದು, ಕೊವಿಶೀಲ್ಡ್​ ಹಾಗೂ ಕೊವ್ಯಾಕ್ಸಿನ್ ಎರಡೂ ಲಸಿಕೆಗಳನ್ನು ಖದೀಮರು ಹೊತ್ತೊಯ್ದಿರುವುದು ಗಮನಕ್ಕೆ ಬಂದಿದೆ. ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಬಂಧಿಸಿದ ಕೆಲ ಕಡತಗಳು ಸಹ ಕಣ್ಮರೆಯಾಗಿದ್ದು, ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕೆಲವೆಡೆ ಕೊರೊನಾ ಲಸಿಕೆ ಕೊರತೆ; ಎರಡನೇ ಡೋಸ್ ಪಡೆಯಲು ಬಂದವರಿಗೆ ಲಸಿಕೆಯೇ ಸಿಗುತ್ತಿಲ್ಲ

Chiranjeevi Free Vaccine : ಸಿನಿರಂಗದಲ್ಲಿ ಕೆಲಸ ಮಾಡುವವರಿಗೆ, ಸಿನಿ ಪತ್ರಕರ್ತರಿಗೆ ಮೆಗಾಸ್ಟಾರ್‌ ಚಿರಂಜೀವಿಯಿಂದ ಉಚಿತ ಕೊರೊನಾ ಲಸಿಕೆ.!

Published On - 12:36 pm, Thu, 22 April 21

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?