AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣದ ಆಸ್ಪತ್ರೆಯಿಂದ ಕೊರೊನಾ ಲಸಿಕೆಯನ್ನೇ ಎಗರಿಸಿದ ಕಳ್ಳರು; 1,710 ಡೋಸ್ ಲಸಿಕೆ ಹಾಗೂ ಕಡತಗಳು ಕಣ್ಮರೆ

ಜಿಂದ್​ನ ಸಿವಿಲ್ ಆಸ್ಪತ್ರೆಯ ಪಿಪಿಸಿ ಸೆಂಟರ್‌ನಿಂದ ಲಸಿಕೆ ಕಳ್ಳತನವಾಗಿದ್ದು, ಕೊವಿಶೀಲ್ಡ್​ ಹಾಗೂ ಕೊವ್ಯಾಕ್ಸಿನ್ ಎರಡೂ ಲಸಿಕೆಗಳನ್ನು ಖದೀಮರು ಹೊತ್ತೊಯ್ದಿರುವುದು ಗಮನಕ್ಕೆ ಬಂದಿದೆ.

ಹರಿಯಾಣದ ಆಸ್ಪತ್ರೆಯಿಂದ ಕೊರೊನಾ ಲಸಿಕೆಯನ್ನೇ ಎಗರಿಸಿದ ಕಳ್ಳರು; 1,710 ಡೋಸ್ ಲಸಿಕೆ ಹಾಗೂ ಕಡತಗಳು ಕಣ್ಮರೆ
ಆಸ್ಟ್ರಾಜೆನೆಕಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Skanda
| Edited By: |

Updated on:Apr 22, 2021 | 3:17 PM

Share

ಹರಿಯಾಣ: ದೇಶದಲ್ಲಿ ಕೊರೊನಾ ನಿಯಂತ್ರಿಸಲು ಪರದಾಡುತ್ತಿರುವ ಆರೋಗ್ಯ ಸಿಬ್ಬಂದಿಗೆ ಒಂದೆಡೆ ಸೋಂಕಿತರನ್ನು ರಕ್ಷಿಸುವುದು ಸವಾಲಾಗಿದ್ದರೆ, ಇನ್ನೊಂದೆಡೆ ಕಳ್ಳರಿಂದ ಕೊರೊನಾ ಲಸಿಕೆಯನ್ನು ಕಾಪಾಡಿಕೊಳ್ಳುವುದೂ ದೊಡ್ಡ ತಲೆನೋವಾಗಿದೆ. ದೇಶದಲ್ಲಿ ಕೊರೊನಾ ಲಸಿಕೆಯ ಕೊರತೆ ತಲೆದೋರಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ಹರಿಯಾಣದ ಜಿಂದ್​ನಲ್ಲಿರುವ ಸಿವಿಲ್​ ಆಸ್ಪತ್ರೆಯ ಪಿಪಿಸಿ ಸೆಂಟರ್​ನಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಬರೋಬ್ಬರಿ 1,710 ಡೋಸ್ ಕೊರೊನಾ ಲಸಿಕೆ ಹಾಗೂ ಕೆಲ ಕಡತಗಳು ಕಣ್ಮರೆಯಾಗಿದೆ.

ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡಿದ್ದು ಹಲವೆಡೆ ಪರಿಸ್ಥಿತಿ ಗಂಭೀರ ಸ್ವರೂಪಕ್ಕೆ ತಿರುಗಿರುವುದರಿಂದ ಸೋಂಕಿನ ತೀವ್ರತೆಗೆ ಆರೋಗ್ಯ ವ್ಯವಸ್ಥೆ ಅಕ್ಷರಶಃ ನಲುಗಿ ಹೋಗಿದೆ. ಮೊದಲ ಅಲೆಗಿಂತಲೂ ಹೆಚ್ಚಿನ ಕಠಿಣತೆ ಈಗ ಎದುರಾಗಿದೆ. ಸದ್ಯದ ಸಂದರ್ಭದಲ್ಲಿ ಸೋಂಕು ತಡೆಗಟ್ಟಲು ಕೊರೊನಾ ಲಸಿಕೆಗೆ ಸರ್ಕಾರ ಹೆಚ್ಚು ಮಹತ್ವ ನೀಡುತ್ತಿದ್ದು, ಲಸಿಕೆ ಉತ್ಪಾದನೆಯನ್ನೂ ಹೆಚ್ಚಿಸಲಾಗುತ್ತಿದೆ. ಆದರೆ, ಇಂತಹ ಸಂಕಷ್ಟದ ಸಂದರ್ಭದಲ್ಲೇ ಆಸ್ಪತ್ರೆಗಳ ಮೇಲೆ ಕಣ್ಣಿಟ್ಟಿರುವ ಕಳ್ಳರು ಲಸಿಕೆಯನ್ನೇ ಎಗರಿಸಿದ್ದಾರೆ.

ಜಿಂದ್​ನ ಸಿವಿಲ್ ಆಸ್ಪತ್ರೆಯ ಪಿಪಿಸಿ ಸೆಂಟರ್‌ನಿಂದ ಲಸಿಕೆ ಕಳ್ಳತನವಾಗಿದ್ದು, ಕೊವಿಶೀಲ್ಡ್​ ಹಾಗೂ ಕೊವ್ಯಾಕ್ಸಿನ್ ಎರಡೂ ಲಸಿಕೆಗಳನ್ನು ಖದೀಮರು ಹೊತ್ತೊಯ್ದಿರುವುದು ಗಮನಕ್ಕೆ ಬಂದಿದೆ. ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಬಂಧಿಸಿದ ಕೆಲ ಕಡತಗಳು ಸಹ ಕಣ್ಮರೆಯಾಗಿದ್ದು, ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕೆಲವೆಡೆ ಕೊರೊನಾ ಲಸಿಕೆ ಕೊರತೆ; ಎರಡನೇ ಡೋಸ್ ಪಡೆಯಲು ಬಂದವರಿಗೆ ಲಸಿಕೆಯೇ ಸಿಗುತ್ತಿಲ್ಲ

Chiranjeevi Free Vaccine : ಸಿನಿರಂಗದಲ್ಲಿ ಕೆಲಸ ಮಾಡುವವರಿಗೆ, ಸಿನಿ ಪತ್ರಕರ್ತರಿಗೆ ಮೆಗಾಸ್ಟಾರ್‌ ಚಿರಂಜೀವಿಯಿಂದ ಉಚಿತ ಕೊರೊನಾ ಲಸಿಕೆ.!

Published On - 12:36 pm, Thu, 22 April 21

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ