AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕ್ರಿಮಿಯನ್ನ ಕಟ್ಟಿಹಾಕಿದ ಧಾರಾವಿ ಸ್ಲಂ, ಶಹಬ್ಬಾಸ್ ಅಂದಿದ್ದು WHO

ಭಾರತದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಏರುತ್ತಲೆ ಇದ್ದು ದೇಶ ವ್ಯಾಪಿ ತನ್ನ ಕಬಂದ ಬಾಹುಗಳನ್ನ ಚಾಚುತ್ತಲೆ ಇದೆ. ದೇಶದ ಮಹಾನ್ ನಗರಗಳಾದ ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ ಇನ್ನಿತರ ರಾಜ್ಯಗಳಲ್ಲಿ ರೋಗಕ್ಕೆ ತುತ್ತಾಗುವವರ ಸಂಖ್ಯೆ ವಿಪರೀತ ಹೆಚ್ಚಾಗುತ್ತಲೆ ಇದ್ದು ಆಡಳಿತ ವರ್ಗದ ನಿದ್ದೆಗೆಡಿಸಿದೆ. ಆದರೆ ಸಮಧಾನಕರ ಸಂಗತಿಯೆಂದರೆ ದೇಶದ ಅತಿ ದೊಡ್ಡ ಕೊಳೆಗೇರಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿರುವುದು. ದೇಶದ ಬೇರೆ ಕಡೆಗಳಲ್ಲಿ  ಕೊರೊನಾ ನಿಯಂತ್ರಣಕ್ಕೆ ಸಿಗದಷ್ಟು ವೇಗವಾಗಿ ಹರಡುತ್ತಿದ್ದರೆ ಮುಂಬೈ ನ ಧಾರಾವಿ ಸ್ಲಂ ನಲ್ಲಿ […]

ಕೊರೊನಾ ಕ್ರಿಮಿಯನ್ನ ಕಟ್ಟಿಹಾಕಿದ ಧಾರಾವಿ ಸ್ಲಂ, ಶಹಬ್ಬಾಸ್ ಅಂದಿದ್ದು WHO
ಸಾಧು ಶ್ರೀನಾಥ್​
| Edited By: |

Updated on:Jul 11, 2020 | 4:53 PM

Share

ಭಾರತದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಏರುತ್ತಲೆ ಇದ್ದು ದೇಶ ವ್ಯಾಪಿ ತನ್ನ ಕಬಂದ ಬಾಹುಗಳನ್ನ ಚಾಚುತ್ತಲೆ ಇದೆ. ದೇಶದ ಮಹಾನ್ ನಗರಗಳಾದ ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ ಇನ್ನಿತರ ರಾಜ್ಯಗಳಲ್ಲಿ ರೋಗಕ್ಕೆ ತುತ್ತಾಗುವವರ ಸಂಖ್ಯೆ ವಿಪರೀತ ಹೆಚ್ಚಾಗುತ್ತಲೆ ಇದ್ದು ಆಡಳಿತ ವರ್ಗದ ನಿದ್ದೆಗೆಡಿಸಿದೆ.

ಆದರೆ ಸಮಧಾನಕರ ಸಂಗತಿಯೆಂದರೆ ದೇಶದ ಅತಿ ದೊಡ್ಡ ಕೊಳೆಗೇರಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿರುವುದು. ದೇಶದ ಬೇರೆ ಕಡೆಗಳಲ್ಲಿ  ಕೊರೊನಾ ನಿಯಂತ್ರಣಕ್ಕೆ ಸಿಗದಷ್ಟು ವೇಗವಾಗಿ ಹರಡುತ್ತಿದ್ದರೆ ಮುಂಬೈ ನ ಧಾರಾವಿ ಸ್ಲಂ ನಲ್ಲಿ ಮಾತ್ರ  ಆ ಕ್ರಿಮಿ ಸಂಪೂರ್ಣ ಹತೋಟಿಗೆ ಬಂದಿದೆ.

ಹೌದು, ಏಷ್ಯಾದಲ್ಲೇ ಅತಿ ದೊಡ್ಡ ಸ್ಲಂ ಎನಿಸಿಕೊಂಡಿರುವ ಧಾರಾವಿಯಲ್ಲಿ ಸುಮಾರು 6.5 ಲಕ್ಷ ಮಂದಿ ವಾಸವಿದ್ದು ಮೂಲ ಸೌಕರ್ಯದ ಕೊರತೆಯಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಕೊರೊನಾ ಕಾಣಿಸಿಕೊಂಡ ಪ್ರಾರಂಭದ ದಿನಗಳಲ್ಲಿ ಕೊರೊನಾಗೆ ಅತಿ ಹೆಚ್ಚು ತುತ್ತಾದ ಪ್ರದೇಶಗಳಲ್ಲಿ ಧಾರಾವಿ ಮೊದಲನೇ ಸಾಲಿನಲ್ಲಿ ನಿಲ್ಲುತ್ತದೆ. ಆದರೆ ಈಗ ಕೊರೊನಾವನ್ನು ನಿಯಂತ್ರಣಕ್ಕೆ ತಂದ ವಿಚಾರದಲ್ಲಿಯೂ ಸಹ ಇದೀಗ ಧಾರಾವಿ ಮೊದಲ ಪಂಕ್ತಿಯಲ್ಲಿದೆ.

ಸ್ವತಃ ಈ ವಿಚಾರವನ್ನು ವಿಶ್ವ ಆರೋಗ್ಯ ಸಂಸ್ಥೆಯು (WHO) ಬಹಿರಂಗ ಪಡಿಸುವುದರ ಜೊತೆಗೆ ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಸಹಕರಿಸಿದ ಧಾರಾವಿಯ ನಿವಾಸಿಗಳು ಹಾಗು ಮುಂಬೈ ಸ್ಥಳೀಯ ಆಡಳಿತದ ಕಾರ್ಯ ವೈಖರಿಯನ್ನು ಶ್ಲಾಘಿಸಿದೆ.

ಜೊತೆಗೆ ಮಹಾರಾಷ್ಟ್ರದ ಪ್ರವಾಸೋದ್ಯಮ ಸಚಿವಾರದ ಆದಿತ್ಯ ಠಾಕ್ರೆ ಅವರು ವಿಶ್ವ ಆರೋಗ್ಯ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದ್ದಲ್ಲದೆ, ಈ ಯಶಸ್ಸಿಗೆ ಕಾರಣರಾದ ಮಹಾರಾಷ್ಟ್ರದ ಚುನಾಯಿತ ಪ್ರತಿನಿಧಿಗಳು, ವಿವಿಧ ಸರ್ಕಾರೇತರ ಸಂಸ್ಥೆಗಳು (NGO) ಹಾಗೂ ಧಾರಾವಿಯ ನಿವಾಸಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

Published On - 4:23 pm, Sat, 11 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!