AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಮೀಟರ್​ ದೂರ ಚಲಿಸುತ್ತಂತೆ ಕೊರೊನಾ.. ಸೋಂಕಿತರಿದ್ದ ಕೊಠಡಿಯಲ್ಲಿ ವೈರಸ್ ಚಲನೆ ಪತ್ತೆ

CCMB ಹಾಗೂ CSIR IMTech ನಡೆಸಿದ ಅಧ್ಯಯನದಲ್ಲಿ ಆಸ್ಪತ್ರೆಗಳ ಕೊಠಡಿಗಳಲ್ಲಿ ಕೊರೊನಾ ವೈರಾಣು ಇರುವ ವಿಚಾರ ಪತ್ತೆಯಾಗಿದೆ. ಈ ಮೂಲಕ ಕೊರೊನಾ ವೈರಾಣು ಗಾಳಿಯ ಮೂಲಕ ಹರಡುವ ಸಾಧ್ಯತೆ ಇದೆಯೇ ಎಂಬ ಸಂದೇಹಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

2 ಮೀಟರ್​ ದೂರ ಚಲಿಸುತ್ತಂತೆ ಕೊರೊನಾ.. ಸೋಂಕಿತರಿದ್ದ ಕೊಠಡಿಯಲ್ಲಿ ವೈರಸ್ ಚಲನೆ ಪತ್ತೆ
ಸಾಂದರ್ಭಿಕ ಚಿತ್ರ
Follow us
Skanda
|

Updated on:Jan 06, 2021 | 11:20 AM

ಹೈದರಾಬಾದ್​: ಕೊರೊನಾ ವೈರಾಣು ರೂಪಾಂತರ ಹೊಂದಿ ವಿಶ್ವದೆಲ್ಲೆಡೆ ಗದ್ದಲ ಎಬ್ಬಿಸುತ್ತಿರುವ ಹೊತ್ತಿನಲ್ಲಿ ವೈರಾಣು ಹರಡುವಿಕೆಗೆ ಸಂಬಂಧಿಸಿದ ಇನ್ನೊಂದು ವಿಷಯ ಮುನ್ನೆಲೆಗೆ ಬಂದಿದೆ. ಜೀವಕೋಶೀಯ ಮತ್ತು ಆಣ್ವಿಕ ಜೀವಶಾಸ್ತ್ರ ಕೇಂದ್ರ (CCMB) ಹಾಗೂ CSIR-ಸೂಕ್ಷ್ಮಜೀವಿ ತಂತ್ರಜ್ಞಾನ ಸಂಸ್ಥೆ (IMTech) ನಡೆಸಿದ ಅಧ್ಯಯನದಲ್ಲಿ ಆಸ್ಪತ್ರೆಗಳ ಕೊಠಡಿಗಳಲ್ಲಿ ಕೊರೊನಾ ವೈರಾಣು ಇರುವ ವಿಚಾರ ಪತ್ತೆಯಾಗಿದೆ.

ಈ ಮೂಲಕ ಕೊರೊನಾ ವೈರಾಣು ಗಾಳಿಯ ಮೂಲಕ ಹರಡುವ ಸಾಧ್ಯತೆ ಇದೆಯೇ ಎಂಬ ಸಂದೇಹಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಅಧ್ಯಯನಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲ ವಿಚಾರಗಳು ಸ್ಪಷ್ಟಗೊಂಡಿಲ್ಲವಾದರೂ ಕೊವಿಡ್​ ಕೊಠಡಿಗಳಲ್ಲಿಯೇ ಕೊರೊನಾ ವೈರಾಣು ಹೆಚ್ಚಾಗಿ ಕಂಡುಬಂದಿರುವುದು ತಳಮಳಕ್ಕೆ ಕಾರಣವಾಗಿದೆ.

ವೈರಾಣುಗಳು ಸುಮಾರು 2 ಗಂಟೆಗೂ ಅಧಿಕ ಕಾಲ ಗಾಳಿಯಲ್ಲಿ ಕಾಣಿಸಿಕೊಂಡಿವೆ. ಕೊಠಡಿಯಲ್ಲಿದ್ದ ಸೋಂಕಿತರ ಸಂಖ್ಯೆಗೂ ಗಾಳಿಯಲ್ಲಿದ್ದ ಕೊರೊನಾ ವೈರಾಣುಗಳ ಪ್ರಮಾಣಕ್ಕೂ ನೇರ ಸಂಬಂಧ ಇರುವಂತೆ ಕಂಡುಬಂದಿದೆ. ವೈರಾಣುಗಳು 2 ಮೀಟರ್​ಗಿಂತ ಜಾಸ್ತಿ ದೂರಕ್ಕೆ ಹೋಗಿ ಅಂಟಿಕೊಂಡಿರುವುದೂ ಪತ್ತೆಯಾಗಿದೆ ಎಂದು CCMB ಮಾಹಿತಿ ನೀಡಿದೆ.

ಆದರೆ, ಯಾವುದೇ ಲಕ್ಷಣಗಳಿಲ್ಲದ ಸೋಂಕಿತರಿದ್ದ ಕೊಠಡಿಯಲ್ಲಿ ವೈರಾಣುಗಳು ಅವರು ಕುಳಿತ ಸ್ಥಾನದಿಂದ ಹೆಚ್ಚು ದೂರಕ್ಕೆ ಚಲಿಸಿರುವುದು ಕಂಡುಬಂದಿಲ್ಲ ಎನ್ನುವ ಅಂಶವೂ ಅಧ್ಯಯನದಿಂದ ತಿಳಿದು ಬಂದಿದೆ. ಕೊರೊನಾ ವೈರಾಣುಗಳು ಗಾಳಿಯಲ್ಲಿದೆಯೇ ಎಂದು ಪತ್ತೆಹಚ್ಚಲು RT-PCR ತಂತ್ರಜ್ಞಾನದ ಮೊರೆಹೋದ ವಿಜ್ಞಾನಿಗಳು ಹೈದರಾಬಾದ್ ಮತ್ತು ಚಂಡೀಗಢದ 3 ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಔಷಧಿಯಲ್ಲಿ ಹಂದಿ ಕೊಬ್ಬು ಬಳಸಲು ಅವಕಾಶವಿದೆ.. ಮುಸ್ಲಿಮರು ಲಸಿಕೆ ಸ್ವೀಕರಿಸಿ: ಅಬ್ದುಲ್ ಅಜೀಮ್

Published On - 11:00 am, Wed, 6 January 21

ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ