AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಮೀಟರ್​ ದೂರ ಚಲಿಸುತ್ತಂತೆ ಕೊರೊನಾ.. ಸೋಂಕಿತರಿದ್ದ ಕೊಠಡಿಯಲ್ಲಿ ವೈರಸ್ ಚಲನೆ ಪತ್ತೆ

CCMB ಹಾಗೂ CSIR IMTech ನಡೆಸಿದ ಅಧ್ಯಯನದಲ್ಲಿ ಆಸ್ಪತ್ರೆಗಳ ಕೊಠಡಿಗಳಲ್ಲಿ ಕೊರೊನಾ ವೈರಾಣು ಇರುವ ವಿಚಾರ ಪತ್ತೆಯಾಗಿದೆ. ಈ ಮೂಲಕ ಕೊರೊನಾ ವೈರಾಣು ಗಾಳಿಯ ಮೂಲಕ ಹರಡುವ ಸಾಧ್ಯತೆ ಇದೆಯೇ ಎಂಬ ಸಂದೇಹಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

2 ಮೀಟರ್​ ದೂರ ಚಲಿಸುತ್ತಂತೆ ಕೊರೊನಾ.. ಸೋಂಕಿತರಿದ್ದ ಕೊಠಡಿಯಲ್ಲಿ ವೈರಸ್ ಚಲನೆ ಪತ್ತೆ
ಸಾಂದರ್ಭಿಕ ಚಿತ್ರ
Skanda
|

Updated on:Jan 06, 2021 | 11:20 AM

Share

ಹೈದರಾಬಾದ್​: ಕೊರೊನಾ ವೈರಾಣು ರೂಪಾಂತರ ಹೊಂದಿ ವಿಶ್ವದೆಲ್ಲೆಡೆ ಗದ್ದಲ ಎಬ್ಬಿಸುತ್ತಿರುವ ಹೊತ್ತಿನಲ್ಲಿ ವೈರಾಣು ಹರಡುವಿಕೆಗೆ ಸಂಬಂಧಿಸಿದ ಇನ್ನೊಂದು ವಿಷಯ ಮುನ್ನೆಲೆಗೆ ಬಂದಿದೆ. ಜೀವಕೋಶೀಯ ಮತ್ತು ಆಣ್ವಿಕ ಜೀವಶಾಸ್ತ್ರ ಕೇಂದ್ರ (CCMB) ಹಾಗೂ CSIR-ಸೂಕ್ಷ್ಮಜೀವಿ ತಂತ್ರಜ್ಞಾನ ಸಂಸ್ಥೆ (IMTech) ನಡೆಸಿದ ಅಧ್ಯಯನದಲ್ಲಿ ಆಸ್ಪತ್ರೆಗಳ ಕೊಠಡಿಗಳಲ್ಲಿ ಕೊರೊನಾ ವೈರಾಣು ಇರುವ ವಿಚಾರ ಪತ್ತೆಯಾಗಿದೆ.

ಈ ಮೂಲಕ ಕೊರೊನಾ ವೈರಾಣು ಗಾಳಿಯ ಮೂಲಕ ಹರಡುವ ಸಾಧ್ಯತೆ ಇದೆಯೇ ಎಂಬ ಸಂದೇಹಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಅಧ್ಯಯನಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲ ವಿಚಾರಗಳು ಸ್ಪಷ್ಟಗೊಂಡಿಲ್ಲವಾದರೂ ಕೊವಿಡ್​ ಕೊಠಡಿಗಳಲ್ಲಿಯೇ ಕೊರೊನಾ ವೈರಾಣು ಹೆಚ್ಚಾಗಿ ಕಂಡುಬಂದಿರುವುದು ತಳಮಳಕ್ಕೆ ಕಾರಣವಾಗಿದೆ.

ವೈರಾಣುಗಳು ಸುಮಾರು 2 ಗಂಟೆಗೂ ಅಧಿಕ ಕಾಲ ಗಾಳಿಯಲ್ಲಿ ಕಾಣಿಸಿಕೊಂಡಿವೆ. ಕೊಠಡಿಯಲ್ಲಿದ್ದ ಸೋಂಕಿತರ ಸಂಖ್ಯೆಗೂ ಗಾಳಿಯಲ್ಲಿದ್ದ ಕೊರೊನಾ ವೈರಾಣುಗಳ ಪ್ರಮಾಣಕ್ಕೂ ನೇರ ಸಂಬಂಧ ಇರುವಂತೆ ಕಂಡುಬಂದಿದೆ. ವೈರಾಣುಗಳು 2 ಮೀಟರ್​ಗಿಂತ ಜಾಸ್ತಿ ದೂರಕ್ಕೆ ಹೋಗಿ ಅಂಟಿಕೊಂಡಿರುವುದೂ ಪತ್ತೆಯಾಗಿದೆ ಎಂದು CCMB ಮಾಹಿತಿ ನೀಡಿದೆ.

ಆದರೆ, ಯಾವುದೇ ಲಕ್ಷಣಗಳಿಲ್ಲದ ಸೋಂಕಿತರಿದ್ದ ಕೊಠಡಿಯಲ್ಲಿ ವೈರಾಣುಗಳು ಅವರು ಕುಳಿತ ಸ್ಥಾನದಿಂದ ಹೆಚ್ಚು ದೂರಕ್ಕೆ ಚಲಿಸಿರುವುದು ಕಂಡುಬಂದಿಲ್ಲ ಎನ್ನುವ ಅಂಶವೂ ಅಧ್ಯಯನದಿಂದ ತಿಳಿದು ಬಂದಿದೆ. ಕೊರೊನಾ ವೈರಾಣುಗಳು ಗಾಳಿಯಲ್ಲಿದೆಯೇ ಎಂದು ಪತ್ತೆಹಚ್ಚಲು RT-PCR ತಂತ್ರಜ್ಞಾನದ ಮೊರೆಹೋದ ವಿಜ್ಞಾನಿಗಳು ಹೈದರಾಬಾದ್ ಮತ್ತು ಚಂಡೀಗಢದ 3 ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಔಷಧಿಯಲ್ಲಿ ಹಂದಿ ಕೊಬ್ಬು ಬಳಸಲು ಅವಕಾಶವಿದೆ.. ಮುಸ್ಲಿಮರು ಲಸಿಕೆ ಸ್ವೀಕರಿಸಿ: ಅಬ್ದುಲ್ ಅಜೀಮ್

Published On - 11:00 am, Wed, 6 January 21

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ