AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ ಅಲ್ಲ: ರಾಹುಲ್​

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೊರೊನಾ ಸೋಂಕು ಕಾಲದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಪ್ರಧಾನಿ ಮೋದಿ ಆಡಳಿತವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ಕಂಟ್ರೋಲ್ ಮಾಡೊಕೆ ಸಾಧ್ಯವಿಲ್ಲ.. ಆದ್ರೆ ಮ್ಯಾನೇಜ್ ಮಾಡಬಹುದು ದೇಶದಲ್ಲಿ ಸಂದ್ಗಿಗ್ನ ಪರಿಸ್ಥಿತಿ ಎದುರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಒಂದಾಗಿ ಕೆಲಸ ಮಾಡಬೇಕು. ಲಾಕ್ ಡೌನ್ ಹೊರತು ಇನ್ಯಾವುದೇ ಉಪಾಯ ಇಲ್ಲ. ವೈರಸ್ ತಡೆಯಲು ಲಾಕ್ ಡೌನ್ ಸೂಕ್ತ. ಆದ್ರೆ ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ […]

ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ ಅಲ್ಲ: ರಾಹುಲ್​
ಸಾಧು ಶ್ರೀನಾಥ್​
|

Updated on:Apr 16, 2020 | 2:23 PM

Share

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೊರೊನಾ ಸೋಂಕು ಕಾಲದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಪ್ರಧಾನಿ ಮೋದಿ ಆಡಳಿತವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರೊನಾ ಕಂಟ್ರೋಲ್ ಮಾಡೊಕೆ ಸಾಧ್ಯವಿಲ್ಲ.. ಆದ್ರೆ ಮ್ಯಾನೇಜ್ ಮಾಡಬಹುದು ದೇಶದಲ್ಲಿ ಸಂದ್ಗಿಗ್ನ ಪರಿಸ್ಥಿತಿ ಎದುರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಒಂದಾಗಿ ಕೆಲಸ ಮಾಡಬೇಕು. ಲಾಕ್ ಡೌನ್ ಹೊರತು ಇನ್ಯಾವುದೇ ಉಪಾಯ ಇಲ್ಲ. ವೈರಸ್ ತಡೆಯಲು ಲಾಕ್ ಡೌನ್ ಸೂಕ್ತ. ಆದ್ರೆ ಲಾಕ್ ಡೌನ್ ಮಾತ್ರವೇ ಕೊರೊನಾ ನಿಯಂತ್ರಣಕ್ಕೆ ಪರಿಹಾರ ಅಲ್ಲ ಎಂದು ಹೇಳಿದ್ದಾರೆ.

ಲಾಕ್ ಡೌನ್ ಜೊತೆ ಜೊತೆಗೆ ಪರೀಕ್ಷೆಗಳು ಹೆಚ್ಚಾಗಬೇಕು. ಹೆಚ್ಚು ಟೆಸ್ಟ್ ಮಾಡುವ ಗುರಿ ಹೊಂದಬೇಕಿದೆ. ಅಂದಾಜು 350 ಟೆಸ್ಟ್ ಗಳು ಪ್ರತಿ ಜಿಲ್ಲೆಯಲ್ಲಿಯೂ ಆಗುತ್ತಿದೆ. ಇದು ಸಾಕಾಗಲ್ಲ, ಮತ್ತಷ್ಟು ವೇಗವಾಗಿ ಪರೀಕ್ಷೆ ನಡೆಸಬೇಕು. ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಇಡೀ ದೇಶ ಒಂದಾಗಿ ಕೊರೊನಾ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ರಾಹುಲ್ ಗಾಂಧಿ ಆಶಿಸಿದರು.

ರಾಜ್ಯಗಳಿಗೆ ಬಾಕಿ GST ಹಣ ನೀಡಬೇಕು. ರಾಜ್ಯಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಸ್ವಾತಂತ್ರ್ಯ ನೀಡಬೇಕು. ಆಹಾರ ಕೊರತೆ ಉಂಟಾಗಲಿದೆ. ಬಡವರಿಗೆ ಆಹಾರ ನೀಡಿ, ರೇಷನ್ ಕಾರ್ಡ್ ಇಲ್ಲದವರಿಗೂ ರೇಷನ್ ಪಡಿತರ ನೀಡಬೇಕು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಸರಕಾರದ ಬಳಿ ಇರುವ ಆಹಾರ ಬಡವರಿಗೆ ಸಿಗುತ್ತಿಲ್ಲ. ಇದು ನನಗೆ ಬೇಸರ ತರಿಸಿದೆ. ನಿರುದ್ಯೋಗದ ಬಗ್ಗೆಯೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಣ್ಣ ಉದ್ಯಮಗಳಿಗೆ ಪ್ಯಾಕೇಜ್ ತಯಾರು ಮಾಡಬೇಕು. ಸಣ್ಣ ಉದ್ಯಮದಾರರಿಗೆ ಸರ್ಕಾರ ಏನ್ ಮಾಡಲು ಹೊರಟಿದೆ ಎನ್ನುವುದನ್ದುನ ಬಹಿರಂಗಗೊಳಿಸಿ ಎಂದು ಅವರು ಕೇಂದ್ರವನ್ನು ಆಗ್ರಹಿಸಿದರು.

Published On - 1:53 pm, Thu, 16 April 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ