AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಾಪುರದಲ್ಲಿ ಪತ್ತೆಯಾದ ಕೊರೊನಾ ವೈರಾಣು ಭಾರತದಲ್ಲಿ ಮೂರನೇ ಅಲೆಗೆ ಕಾರಣವಾಗಬಹುದು: ಅರವಿಂದ್ ಕೇಜ್ರಿವಾಲ್

ಸಿಂಗಾಪುರದಲ್ಲಿ ಸದ್ಯ ರೆಸ್ಟೋರೆಂಟ್​ಗಳು ಬಂದ್ ಆಗಿದೆ. ವರ್ಕ್ ಫ್ರಮ್ ಹೋಮ್ ವ್ಯವಸ್ಥೆ ಮುಂದುವರಿದಿದೆ. 16 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಯೋಜನೆ ರೂಪಗೊಳ್ಳುತ್ತಿದ್ದು, ಶಾಲೆಗಳು ಮನೆಯಲ್ಲೇ ಕಲಿಕೆ ವಿಧಾನವನ್ನು ಬಳಸಿಕೊಳ್ಳುತ್ತಿದೆ.

ಸಿಂಗಾಪುರದಲ್ಲಿ ಪತ್ತೆಯಾದ ಕೊರೊನಾ ವೈರಾಣು ಭಾರತದಲ್ಲಿ ಮೂರನೇ ಅಲೆಗೆ ಕಾರಣವಾಗಬಹುದು: ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
TV9 Web
| Edited By: |

Updated on:Aug 21, 2021 | 10:14 AM

Share

ದೆಹಲಿ: ಸಿಂಗಾಪುರದಲ್ಲಿ ಪತ್ತೆಯಾಗಿರುವ ರೂಪಾಂತರಿ ಕೊರೊನಾ ವೈರಾಣು ಭಾರತದ ಮೂರನೇ ಅಲೆಗೆ ಕಾರಣವಾಗಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಮೇ 18) ತಿಳಿಸಿದ್ದಾರೆ. ಹೊಸ ಸ್ವರೂಪದ ಕೊವಿಡ್-19 ವೈರಾಣು ಮಕ್ಕಳಿಗೆ ಅತಿ ಕೆಟ್ಟ ಪರಿಣಾಮವನ್ನು ಉಂಟುಮಾಡಬಹುದು ಎಂದು ಕೇಜ್ರಿವಾಲ್ ಅಂದಾಜಿಸಿದ್ದಾರೆ. ಹಾಗಾಗಿ, ಸಿಂಗಾಪುರದೊಂದಿಗಿನ ಸೇವೆಗಳನ್ನು ಕೂಡಲೇ ಸ್ಥಗಿತಗೊಳಿಸಿ, ಮಕ್ಕಳಿಗೆ ಲಸಿಕೆ ನೀಡುವಂತೆ ಮೋದಿ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಸಿಂಗಾಪುರದ ಕಂಡುಬಂದಿರುವ ಕೊರೊನಾ ವೈರಾಣು ಮಕ್ಕಳಿಗೆ ಅಪಾರ ಹಾನಿ ಉಂಟುಮಾಡಬಹುದು ಎನ್ನಲಾಗುತ್ತಿದೆ. ಅದೇ ವೈರಾಣು ಕೊರೊನಾ ಮೂರನೇ ಅಲೆಯಾಗಿ ಕಂಡುಬರಬಹುದು. ಸಿಂಗಾಪುರದೊಂದಿಗಿನ ವಿಮಾನಯಾನವನ್ನು ಸ್ಥಗಿತಗೊಳಿಸಬೇಕು. ಮಕ್ಕಳಿಗೆ ಲಸಿಕೆ ಅಭಿಯಾನವನ್ನು ಆರಂಭಿಸಬೇಕು ಎಂದು ಕೇಜ್ರಿವಾಲ್ ಟ್ವೀಟ್ ಮಾಡಿ ಕೇಳಿಕೊಂಡಿದ್ದಾರೆ.

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಇಳಿಕೆಯಾಗಿದೆ. ಕಳೆದ ತಿಂಗಳು ಪ್ರತಿನಿತ್ಯ ದಾಖಲಾಗುತ್ತಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ 28,000ದ ವರೆಗೆ ಸಾಗಿತ್ತು. ಈಗ ಪ್ರತಿನಿತ್ಯ ಕಂಡುಬರುತ್ತಿರುವ ಪ್ರಕರಣಗಳ ಸಂಖ್ಯೆ 5,000ದಷ್ಟು ಮಾತ್ರ ಇದೆ.

ಸಿಂಗಾಪುರದಲ್ಲಿ ಸದ್ಯ ರೆಸ್ಟೋರೆಂಟ್​ಗಳು ಬಂದ್ ಆಗಿದೆ. ವರ್ಕ್ ಫ್ರಮ್ ಹೋಮ್ ವ್ಯವಸ್ಥೆ ಮುಂದುವರಿದಿದೆ. 16 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಯೋಜನೆ ರೂಪಗೊಳ್ಳುತ್ತಿದ್ದು, ಶಾಲೆಗಳು ಮನೆಯಲ್ಲೇ ಕಲಿಕೆ ವಿಧಾನವನ್ನು ಬಳಸಿಕೊಳ್ಳುತ್ತಿದೆ.

ಸಿಂಗಾಪುರದಲ್ಲಿ ಜನರು ಮಾಸ್ಕ್ ಧರಿಸುವಂತೆ ಸರ್ಕಾರ ಕೇಳಿಕೊಂಡಿದೆ. ಮಾಸ್ಕ್ ತೆಗೆದು ಮಾಡಬೇಕಾದ ಕೆಲಸಗಳನ್ನು ಆದಷ್ಟು ಕಡಿಮೆ ಮಾಡುವಂತೆಯೂ ಸರ್ಕಾರ ತಿಳಿಸಿದೆ. ಮುಂದಿನ 3ರಿಂದ 6 ತಿಂಗಳ ಕಾಲ ಇದೇ ನಿಯಮವನ್ನು ಅನುಸರಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಕೊರೊನಾದ ಎರಡನೇ ಅಲೆ ಅಂತ್ಯ ಯಾವಾಗ?

ಕೊರೊನಾ ಮೂರನೇ ಅಲೆ ಎದುರಿಸಲು ಟಾಸ್ಕ್ ಫೋರ್ಸ್ ಸಮಿತಿ ರಚಿಸುವಂತೆ ಬಿ.ಎಸ್. ಯಡಿಯೂರಪ್ಪ ಆದೇಶ

Published On - 6:32 pm, Tue, 18 May 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ