AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್

ಕೊರೊನಾ ಮೂರನೇ ಅಲೆಯ ಕುರಿತಂತೆ ಎನ್​ಸಿಡಿಸಿಯ ಸುಜೀತ್ ಸಿಂಗ್ ಮಾತನಾಡಿದ್ದಾರೆ. ಇನ್ನು ಆರು ತಿಂಗಳಲ್ಲಿ ಕೊರೊನಾ ಸ್ಥಳೀಯವಾಗಿ ಕಾಣಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: shivaprasad.hs

Updated on:Sep 17, 2021 | 12:42 PM

ಕೊರೊನಾವೈರಸ್‌ನ ಹೊಸ ರೂಪಾಂತರವೊಂದೇ ಮೂರನೇ ಅಲೆಗೆ ಕಾರಣವಾಗುವುದಿಲ್ಲ. ಸೋಂಕು ಮುಂದಿನ ಆರು ತಿಂಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಕಾಣಿಸಿಕೊಳ್ಳಬಹುದು  ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ನಿರ್ದೇಶಕ ಸುಜೀತ್ ಸಿಂಗ್ ಹೇಳಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಕಾಣಿಸಿಕೊಳ್ಳುವುದರಿಂದ ಸೋಂಕನ್ನು ನಿರ್ವಹಿಸಬಹುದಾಗಿದೆ ಮತ್ತು ಆರೋಗ್ಯ ಮೂಲಸೌಕರ್ಯದ ಮೇಲೆ ಹೆಚ್ಚು ಒತ್ತಡ ಬೀಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ಎನ್​ಡಿಟಿವಿ ವರದಿ ಮಾಡಿದೆ.

ಸಾವು ಮತ್ತು ಸೋಂಕು ಹರಡುವುದು ನಿಯಂತ್ರಣದಲ್ಲಿದ್ದರೆ, ನಂತರ ರೋಗವನ್ನು ನಿರ್ವಹಿಸಬಹುದಾಗಿದೆ ಎಂದು ಸುಜೀತ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ವಾರಗಳಿಂದ ಕೋವಿಡ್‌ನೊಂದಿಗಿನ ತೀವ್ರ ಸೆಣಸಾಡುತ್ತಿರುವ ಕೇರಳವೂ ನಿಧಾನವಾಗಿ ಅದರಿಂದ ಹೊರಬರುತ್ತಿದೆ ಎಂದು ಸಿಂಗ್ ಹೇಳಿದ್ದಾರೆ. ವೈರಸ್ ವಿರುದ್ಧ ಹೋರಾಡುವಲ್ಲಿ ಲಸಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಸಿಂಗ್, ಜನರು ಕೊರೊನಾ ಕುರಿತ ಸೂಕ್ತ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. 20 ರಿಂದ 30 ಪ್ರತಿಶತದಷ್ಟು ಪ್ರಕರಣಗಳಲ್ಲಿ ಸಂಪೂರ್ಣ ಲಸಿಕೆ ಪಡೆದ ಜನರು ಸೋಂಕಿಗೆ ಒಳಗಾಗುತ್ತಾರೆ. ಆದ್ದರಿಂದ ಎಚ್ಚರಿಕೆ ಅಗತ್ಯ ಎಂದು ಅವರು ನುಡಿದಿದ್ದಾರೆ.

ಹೊಸ ರೂಪಾಂತರಿ ತಳಿಗಳು ಸುಧಾರಿತ ಸೋಂಕಿಗೆ ಕಾರಣವಾಗಬಹುದು ಎಂದು ಸಿಂಗ್ ತಿಳಿಸಿದ್ದಾರೆ. “ವ್ಯಾಕ್ಸಿನೇಷನ್ ಮಾಡಿದ 70 ರಿಂದ 100 ದಿನಗಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಲು ಆರಂಭವಾಗುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ” ಎಂದು ಅವರು ಹೇಳಿದ್ದಾರೆ. ದೇಶದಲ್ಲಿ 70 ಕೋಟಿ ಲಸಿಕೆಯನ್ನು ನೀಡಲಾಗಿದೆ. ಲಸಿಕೆಯು ಕೊರೊನಾ ವಿರುದ್ಧ 70 ಪ್ರತಿಶತ ಪರಿಣಾಮಕಾರಿ ಎಂಬ ನೆಲೆಯಲ್ಲಿ ಗಮನಿಸಿದರೆ, ಸುಮಾರು 50 ಕೋಟಿ ಜನರು ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಕೇವಲ ಒಂದು ಡೋಸ್ ಲಸಿಕೆ ಪಡೆದಿದ್ದವರು ಸುಮಾರು 30 ಪ್ರತಿಶತದಷ್ಟು ರೋಗನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ,ಅವರಿಗೂ ಸಹ ರೋಗನಿರೋಧಕ ಶಕ್ತಿ ಇದೆ ಎಂದು ಪರಿಗಣಿಸಲಾಗುತ್ತದೆ ಎಂದು ಸಿಂಗ್ ಹೇಳಿದ್ದಾರೆ.

ವರದಿಯಲ್ಲಿ ಸಿಂಗ್ ಮತ್ತೊಂದು ಅಚ್ಚರಿಯ ವಿಚಾರ ಹೊರಹಾಕಿದ್ದಾರೆ. C1.2 ಮತ್ತು Mu ತಳಿಗಳು ದೇಶದಲ್ಲಿ ಇನ್ನೂ ಕಂಡುಬಂದಿಲ್ಲ. “ಕೇವಲ ಒಂದು ಹೊಸ ರೂಪಾಂತರವು ಮೂರನೇ ತರಂಗವನ್ನು ಉಂಟುಮಾಡುವುದಿಲ್ಲ”ಎಂದು ಸಿಂಗ್ ಹೇಳಿದ್ದಾರೆ. ಆದರೂ ಮುಂಬರುವ ಹಬ್ಬದ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

Narendra Modi Birthday: ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ, ಗೃಹ ಸಚಿವ ಸೇರಿ ಗಣ್ಯರ ಶುಭಾಶಯ, ದಿಟ್ಟ ನಾಯಕನೆಂದು ಬಣ್ಣನೆ

ಕೊರೊನಾದಿಂದ ಮೃತಪಟ್ಟ ಚಿನ್ನದ ಅಂಗಡಿ ಮಾಲೀಕ: ತಮ್ಮ ನಿಂದಲೇ ಕುಟುಂಬಕ್ಕೆ 4 ಕೋಟಿ ರೂ. ಮೋಸ; ಗ್ರಾಹಕರು ಕಂಗಾಲು

(Corona will become endemic in six months and 3rd wave not possible by a single variant says NCDC Chief)

Published On - 9:24 am, Fri, 17 September 21

ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ