AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ

ಕೊರೊನಾ ವೈರಸ್ ನಿಯಂತ್ರಣಕ್ಕೆ ಈ ಮೊದಲು ಡಿಸೆಂಬರ್ 15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 11, 2020 | 7:36 PM

Share

ಚಂಡೀಗಢ: ಪಂಜಾಬ್​​ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಜ.1ರವರೆಗೆ ರಾಜ್ಯ​ ಸರ್ಕಾರ ವಿಸ್ತರಣೆ ಮಾಡಿದೆ. ಇದರಿಂದ ಹೊಸ ವರ್ಷದ ಸಂಭ್ರಮಾಚರಣೆಗೂ ಬ್ರೇಕ್​ ಬಿದ್ದಂತಾಗಿದೆ.

ಕೊರೊನಾ ವೈರಸ್ ಸೋಂಕು ನಿಯಂತ್ರಣ ಮಾಡಲು ಈ ಮೊದಲು ಡಿ.15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ. ಹೀಗಾಗಿ, ಜನರು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಾತ್ರ ಓಡಾಟ ನಡೆಸಬಹುದಾಗಿದೆ.

ಮದುವೆ ಮನೆಯ ಮೇಲೆ ಕಣ್ಣು: ಮನೆ ಅಥವಾ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆದರೆ 100 ಜನ ಹಾಗೂ ತೆರೆದ ಪ್ರದೇಶದಲ್ಲಿ ಮದುವೆ ಮಾಡಿದರೆ 250 ಜನರು ಸೇರಬಹುದು ಎಂದು ಪಂಜಾಬ್ ಸರ್ಕಾರ ಹೇಳಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ ಸೂಚಿಸಿದ್ದಾರೆ. ನಿಯಮ ಮೀರುವವರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ಪಂಜಾಬ್​ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಪಂಜಾಬ್​ನಲ್ಲಿ ಗುರುವಾರ 28 ಸಾವು ಸಂಭವಿಸಿದೆ. ಈವರೆಗೆ ಸತ್ತವರ ಸಂಖ್ಯೆ 5 ಸಾವಿರಕ್ಕೆ ಏರಿಕೆ ಆಗಿದೆ. 635 ಹೊಸ ಪ್ರಕರಣ ದಾಖಲಾಗಿದೆ. ಸೋಂಕಿತರ ಒಟ್ಟು ಸಂಖ್ಯೆ  1,58,556 ಆಗಿದೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ