AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ

ಕೊರೊನಾ ವೈರಸ್ ನಿಯಂತ್ರಣಕ್ಕೆ ಈ ಮೊದಲು ಡಿಸೆಂಬರ್ 15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 11, 2020 | 7:36 PM

Share

ಚಂಡೀಗಢ: ಪಂಜಾಬ್​​ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಜ.1ರವರೆಗೆ ರಾಜ್ಯ​ ಸರ್ಕಾರ ವಿಸ್ತರಣೆ ಮಾಡಿದೆ. ಇದರಿಂದ ಹೊಸ ವರ್ಷದ ಸಂಭ್ರಮಾಚರಣೆಗೂ ಬ್ರೇಕ್​ ಬಿದ್ದಂತಾಗಿದೆ.

ಕೊರೊನಾ ವೈರಸ್ ಸೋಂಕು ನಿಯಂತ್ರಣ ಮಾಡಲು ಈ ಮೊದಲು ಡಿ.15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ. ಹೀಗಾಗಿ, ಜನರು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಾತ್ರ ಓಡಾಟ ನಡೆಸಬಹುದಾಗಿದೆ.

ಮದುವೆ ಮನೆಯ ಮೇಲೆ ಕಣ್ಣು: ಮನೆ ಅಥವಾ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆದರೆ 100 ಜನ ಹಾಗೂ ತೆರೆದ ಪ್ರದೇಶದಲ್ಲಿ ಮದುವೆ ಮಾಡಿದರೆ 250 ಜನರು ಸೇರಬಹುದು ಎಂದು ಪಂಜಾಬ್ ಸರ್ಕಾರ ಹೇಳಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ ಸೂಚಿಸಿದ್ದಾರೆ. ನಿಯಮ ಮೀರುವವರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ಪಂಜಾಬ್​ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಪಂಜಾಬ್​ನಲ್ಲಿ ಗುರುವಾರ 28 ಸಾವು ಸಂಭವಿಸಿದೆ. ಈವರೆಗೆ ಸತ್ತವರ ಸಂಖ್ಯೆ 5 ಸಾವಿರಕ್ಕೆ ಏರಿಕೆ ಆಗಿದೆ. 635 ಹೊಸ ಪ್ರಕರಣ ದಾಖಲಾಗಿದೆ. ಸೋಂಕಿತರ ಒಟ್ಟು ಸಂಖ್ಯೆ  1,58,556 ಆಗಿದೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್