AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ

ಕೊರೊನಾ ವೈರಸ್ ನಿಯಂತ್ರಣಕ್ಕೆ ಈ ಮೊದಲು ಡಿಸೆಂಬರ್ 15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 11, 2020 | 7:36 PM

Share

ಚಂಡೀಗಢ: ಪಂಜಾಬ್​​ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಜ.1ರವರೆಗೆ ರಾಜ್ಯ​ ಸರ್ಕಾರ ವಿಸ್ತರಣೆ ಮಾಡಿದೆ. ಇದರಿಂದ ಹೊಸ ವರ್ಷದ ಸಂಭ್ರಮಾಚರಣೆಗೂ ಬ್ರೇಕ್​ ಬಿದ್ದಂತಾಗಿದೆ.

ಕೊರೊನಾ ವೈರಸ್ ಸೋಂಕು ನಿಯಂತ್ರಣ ಮಾಡಲು ಈ ಮೊದಲು ಡಿ.15ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ, ಈಗ ಕೊರೊನಾ ಕಡಿಮೆ ಆಗದ ಕಾರಣ ಹೊಸ ವರ್ಷದವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ ಆಗಿದೆ. ಹೀಗಾಗಿ, ಜನರು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಾತ್ರ ಓಡಾಟ ನಡೆಸಬಹುದಾಗಿದೆ.

ಮದುವೆ ಮನೆಯ ಮೇಲೆ ಕಣ್ಣು: ಮನೆ ಅಥವಾ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆದರೆ 100 ಜನ ಹಾಗೂ ತೆರೆದ ಪ್ರದೇಶದಲ್ಲಿ ಮದುವೆ ಮಾಡಿದರೆ 250 ಜನರು ಸೇರಬಹುದು ಎಂದು ಪಂಜಾಬ್ ಸರ್ಕಾರ ಹೇಳಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​ ಸೂಚಿಸಿದ್ದಾರೆ. ನಿಯಮ ಮೀರುವವರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ಪಂಜಾಬ್​ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಪಂಜಾಬ್​ನಲ್ಲಿ ಗುರುವಾರ 28 ಸಾವು ಸಂಭವಿಸಿದೆ. ಈವರೆಗೆ ಸತ್ತವರ ಸಂಖ್ಯೆ 5 ಸಾವಿರಕ್ಕೆ ಏರಿಕೆ ಆಗಿದೆ. 635 ಹೊಸ ಪ್ರಕರಣ ದಾಖಲಾಗಿದೆ. ಸೋಂಕಿತರ ಒಟ್ಟು ಸಂಖ್ಯೆ  1,58,556 ಆಗಿದೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ