AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 16 ಸಾವಿರದ ಗಡಿ ದಾಟಿದ ಕೊರೊನಾ

ದೆಹಲಿ: ಅದ್ಯಾಕೋ ಮಹಾಮಾರಿ ಕೊರೊನಾ ದೇಶಾದ್ಯಂತ ತನ್ನ ಆಟಾಟೋಪ ನಿಲ್ಲಿಸುತ್ತಲೇ ಇಲ್ಲ. ನಿನ್ನೆ ಕೂಡ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ನೂತನವಾಗಿ ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಕನ್ಫರ್ಮ್ ಆಗಿವೆ. ಲಾಕ್​ಡೌನ್ ಪಾರ್ಟ್ ಒನ್ ಮುಗಿದು, ಪಾರ್ಟ್ 2 ಶುರುವಾದರೂ ದೇಶದಲ್ಲಿ ಕೊರೊನಾ ಕಂಟ್ರೋಲ್​ಗೇ ಬರ್ತಿಲ್ಲ. ಅದರಲ್ಲೂ ಕೆಲದಿನಗಳಿಂದ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಬೆಳೆಯುತ್ತಿರೋದು ದೇಶದ ಜನರ ನಿದ್ದೆಗೆ ಭಂಗವನ್ನುಂಟು ಮಾಡಿದೆ. ನಿನ್ನೆ ಕೂಡ ಬರೋಬ್ಬರಿ 1324 ಹೊಸ ಕೊರೊನಾ ಪ್ರಕರಣಗಳು ದೃಢವಾಗಿವೆ. ಹಾಗೂ ನಿನ್ನೆ ಒಂದೇ […]

ಭಾರತದಲ್ಲಿ 16 ಸಾವಿರದ ಗಡಿ ದಾಟಿದ ಕೊರೊನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 20, 2020 | 7:25 AM

Share

ದೆಹಲಿ: ಅದ್ಯಾಕೋ ಮಹಾಮಾರಿ ಕೊರೊನಾ ದೇಶಾದ್ಯಂತ ತನ್ನ ಆಟಾಟೋಪ ನಿಲ್ಲಿಸುತ್ತಲೇ ಇಲ್ಲ. ನಿನ್ನೆ ಕೂಡ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ನೂತನವಾಗಿ ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಕನ್ಫರ್ಮ್ ಆಗಿವೆ.

ಲಾಕ್​ಡೌನ್ ಪಾರ್ಟ್ ಒನ್ ಮುಗಿದು, ಪಾರ್ಟ್ 2 ಶುರುವಾದರೂ ದೇಶದಲ್ಲಿ ಕೊರೊನಾ ಕಂಟ್ರೋಲ್​ಗೇ ಬರ್ತಿಲ್ಲ. ಅದರಲ್ಲೂ ಕೆಲದಿನಗಳಿಂದ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಬೆಳೆಯುತ್ತಿರೋದು ದೇಶದ ಜನರ ನಿದ್ದೆಗೆ ಭಂಗವನ್ನುಂಟು ಮಾಡಿದೆ. ನಿನ್ನೆ ಕೂಡ ಬರೋಬ್ಬರಿ 1324 ಹೊಸ ಕೊರೊನಾ ಪ್ರಕರಣಗಳು ದೃಢವಾಗಿವೆ. ಹಾಗೂ ನಿನ್ನೆ ಒಂದೇ ದಿನಕ್ಕೆ 31 ಮಂದಿ ಮೃತಪಟ್ಟಿರೋದು ಕೇಂದ್ರ ಸರ್ಕಾರವನ್ನ ಚಿಂತೆಗೀಡು ಮಾಡಿದೆ.

ಭಾರತದಲ್ಲಿ 16 ಸಾವಿರದ ಗಡಿ ದಾಟಿದ ಕೊರೊನಾ: ದೇಶದಲ್ಲಿ ಕೊರೊನಾ ಹಬ್ಬುವ ಭೀತಿ ಹಿನ್ನೆಲೆಯಲ್ಲಿ ಕಳೆದ ತಿಂಗಳಿಂದಲೇ ಲಾಕ್​ಡೌನ್ ಜಾರಿಗೆ ತರಲಾಗಿದೆ. ಆದ್ರೆ ಇಲ್ಲಿಯವರೆಗೂ ಕೊರೊನಾ ಸೋಂಕನ್ನು ದೇಶದಿಂದ ಒದ್ದು ಓಡಿಸಲು ಸಾಧ್ಯವಾಗುತ್ತಿಲ್ಲ. ಒಂದ್ಕಡೆ ಮಾತನ್ನು ಕೇಳದ ಕೆಲವರು ಸೋಂಕಿನ ಭೀತಿ ಹೆಚ್ಚಿಸಿದ್ರೆ ಮತ್ತೊಂದ್ಕಡೆ ಸೋಂಕು ತಡೆಗೆ ಸಮಸ್ಯೆಗಳಿರೋದು ಆತಂಕ ಸೃಷ್ಟಿಸಿದೆ. ಇಷ್ಟೆಲ್ಲದರ ಮಧ್ಯೆ ದೇಶಾದ್ಯಂತ ಸೋಂಕಿತರ ಸಂಖ್ಯೆ 16 ಸಾವಿರದ ಗಡಿ ದಾಟಿರೋದು ಬೆಚ್ಚಿ ಬೀಳುವಂತೆ ಮಾಡಿದೆ. ಹಾಗಾದ್ರೆ ಸದ್ಯದ ಪರಿಸ್ಥಿತಿಯಲ್ಲಿ ಯಾವ, ಯಾವ ರಾಜ್ಯದಲ್ಲಿ ಎಷ್ಟೆಷ್ಟು ಕೇಸ್‌ಗಳಿವೆ ಅನ್ನೋದಾದ್ರೆ.

ತೆಲಂಗಾಣದಲ್ಲಿ ಮೇ 7ರವರೆಗೂ ಕಟ್ಟುನಿಟ್ಟಿನ ಲಾಕ್​ಡೌನ್ ಜಾರಿ! ಇನ್ನು ನೆರೆಯ ತೆಲಂಗಾಣದಲ್ಲಿ ಕೊರೊನಾ ವೈರಸ್ ಹಬ್ಬದಂತೆ ನಾನಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 7ರವರೆಗೂ ಲಾಕ್​ಡೌನ್ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಹಾಗೇ ಸದ್ಯದ ಮಟ್ಟಿಗೆ ‘ಸ್ವಿಗ್ಗೀ’ ಹಾಗೂ ‘ಜೊಮ್ಯಾಟೋ’ದಂತಹ ಸಂಸ್ಥೆಗಳ ಮೇಲೂ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಈ ಮೂಲಕ ತೆಲಂಗಾಣ ಸಿಎಂ ಕೆಸಿಆರ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಪಂಜಾಬ್​ನಲ್ಲಿ ಸಡಿಲಿಕೆ ಸಾಧ್ಯವೇ ಇಲ್ಲ! ಇನ್ನು ಕೊರೊನಾ ಕಾಟಕ್ಕೆ ತತ್ತರಿಸಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಹೀಗಾಗಿ ಪಂಜಾಬ್​ನಲ್ಲಿ ಮೇ 3ರವರೆಗೂ ರಿಯಾಯಿತಿ ಇರದೆ ಲಾಕ್​ಡೌನ್ ಅನ್ವಯಿಸಲು ಪಂಜಾಬ್ ಸಿಎಂ ಆದೇಶವನ್ನ ಹೊರಡಿಸಿದ್ದಾರೆ.

ಒಟ್ನಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಕೊಂಚ ರಿಲ್ಯಾಕ್ಸ್ ಆಗಿದ್ದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ 2ನೇ ಹಂತದ ಲಾಕ್​ಡೌನ್​ನ ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರ ಹಾಗೂ ಭದ್ರತಾ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ. ಇನ್ನು ಸರ್ಕಾರದ ಆದೇಶವನ್ನ ಕಟ್ಟುನಿಟ್ಟಾಗಿ ಪಾಲನೆ ಮಾಡಿದರೆ ಮಾತ್ರ, ಪರಿಸ್ಥಿತಿ ಸುಧಾರಿಸಲು ಸಾಧ್ಯ. ಇಲ್ಲವಾದರೆ ಮತ್ತಷ್ಟು ದಿನ ಲಾಕ್​ಡೌನ್ ಮುಂದುವರಿಸುವ ಅನಿವಾರ್ಯತೆ ಎದುರಾದರೂ ಆಗಬಹುದು. ಈ ಹಿನ್ನೆಲೆಯಲ್ಲಿ ಜನರು ಕೂಡ ಅಲರ್ಟ್ ಆಗಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರಕ್ಕೆ ಸಾಥ್ ನೀಡಬೇಕಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!