Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಕೊರೊನಾ ಲಸಿಕೆ ಪಡೆದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ತುತ್ತು

ಬುಧವಾರ, ದೇಬಂಜನ್ ದೇಬ್ ಎಂಬ ವ್ಯಕ್ತಿಯೊಬ್ಬ ತಾನು ಐಎಎಸ್ ಅಧಿಕಾರಿ, ಸಾವಿರಾರು ಲಸಿಕಾ ಕೇಂದ್ರಗಳನ್ನು ಮೇಲ್ವಿಚಾರಣೆ ನಡೆಸಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದ. ಆತನ ಲಸಿಕಾ ಕೇಂದ್ರದಲ್ಲಿ ಮಿಮಿ ಚಕ್ರವರ್ತಿ ಲಸಿಕೆ ಪಡೆದು ವಿಷಯ ತಿಳಿದಬಳಿಕ ಆತನನ್ನು ಬಂಧಿಸಲಾಗಿದೆ.

ನಕಲಿ ಕೊರೊನಾ ಲಸಿಕೆ ಪಡೆದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ತುತ್ತು
ಮಿಮಿ ಚಕ್ರವರ್ತಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Jun 26, 2021 | 9:36 PM

ಕೋಲ್ಕತ್ತಾ: ನಕಲಿ ಕೊರೊನಾ ಲಸಿಕೆಯ ಜಾಲದ ಮೋಸಕ್ಕೆ ಒಳಗಾಗಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಮಿಮಿ ಚಕ್ರವರ್ತಿ ಶನಿವಾರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಪಶ್ಚಿಮ ಬಂಗಾಳದ ಜಾದವ್​ಪುರದ ಲೋಕಸಭಾ ಸದಸ್ಯೆಯ ಈ ಅನಾರೋಗ್ಯವು ನಕಲಿ ಲಸಿಕೆಯಿಂದ ಆಗಿದೆ ಎಂದು ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮೂಲಗಳ ಮಾಹಿತಿ ಪ್ರಕಾರ, ಮಿಮಿ ಚಕ್ರವರ್ತಿಗೆ ನಿರ್ಜಲೀಕರಣ, ನಿಶ್ಶಕ್ತಿ ಉಂಟಾಗಿದೆ. ಹೊಟ್ಟೆ ನೋವು ಕಂಡುಬಂದಿದ್ದು, ರಕ್ತದೊತ್ತಡ ಕೂಡ ಇಳಿಕೆಯಾಗಿದೆ. ಆದರೆ, ಆಕೆಯ ಆರೋಗ್ಯ ಈಗ ಸುಸ್ಥಿತಿಯಲ್ಲಿದೆ ಎಂದು ಕುಟುಂಬದವರು ಹೇಳಿದ್ದಾರೆ. ನಟಿ ಹಾಗೂ ರಾಜಕಾರಣಿ ಆಗಿರುವ ಮಿಮಿ ಚಕ್ರವರ್ತಿ ಲಿವರ್ ಸಂಬಂಧಿ ಆರೋಗ್ಯ ಸಮಸ್ಯೆಗೆ ಕೆಲವು ದಿನಗಳ ಹಿಂದೆ ತುತ್ತಾಗಿದ್ದರು.

ಬುಧವಾರ, ದೇಬಂಜನ್ ದೇಬ್ ಎಂಬ ವ್ಯಕ್ತಿಯೊಬ್ಬ ತಾನು ಐಎಎಸ್ ಅಧಿಕಾರಿ, ಸಾವಿರಾರು ಲಸಿಕಾ ಕೇಂದ್ರಗಳನ್ನು ಮೇಲ್ವಿಚಾರಣೆ ನಡೆಸಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದ. ಆತನ ಲಸಿಕಾ ಕೇಂದ್ರದಲ್ಲಿ ಮಿಮಿ ಚಕ್ರವರ್ತಿ ಲಸಿಕೆ ಪಡೆದು ವಿಷಯ ತಿಳಿದಬಳಿಕ ಆತನನ್ನು ಬಂಧಿಸಲಾಗಿದೆ.

ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಮತ್ತು ಇತರರು ಕಾಸ್ಬಾ ಪ್ರದೇಶದಲ್ಲಿ ಮಂಗಳವಾರ ನಡೆದ ನಕಲಿ ಕೊವಿಡ್ ವ್ಯಾಕ್ಸಿನೇಷನ್ ಶಿಬಿರದಿಂದ ಮೋಸ ಹೋಗಿದ್ದರು . ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ ಜಂಟಿ ಆಯುಕ್ತರಾಗಿ ಸೋಗು ಹಾಕಿ ಶಿಬಿರವನ್ನು ಆಯೋಜಿಸಿದ ಹೊಸೆನ್‌ಪುರದ ದೇಬಂಜನ್ ದೇಬ್ ಎಂಬ 28 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.

ಶಿಬಿರದಲ್ಲಿದ್ದ ಜನರಿಗೆ ನಿಜವಾದ ಅಥವಾ ನಕಲಿ ಲಸಿಕೆಗಳನ್ನು ನೀಡಲಾಗಿದೆಯೇ ಎಂದು ಕಂಡುಹಿಡಿಯಲು ಪೊಲೀಸರು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದರು. ಸ್ವಸ್ತ ಭವನ ಮತ್ತು ಬಾಗ್ರಿ ಮಾರುಕಟ್ಟೆಯಿಂದ ಹೊರಗಿನಿಂದ ಲಸಿಕೆಗಳನ್ನು ಖರೀದಿಸಿದ್ದೇನೆ ಎಂದು ಆರೋಪಿ ಹೇಳಿಕೊಂಡಿದ್ದ. ಅವುಗಳು ನಿಜವಾದ ಲಸಿಕೆಗಳೋ ಅಥವಾ ಇಲ್ಲವೋ ಎಂದು ಪರೀಕ್ಷಿಸಲು ನಾವು ಮಾದರಿಗಳನ್ನು ಕಳುಹಿಸುತ್ತಿದ್ದೇವೆ ”ಎಂದು ಡಿಸಿ (ದಕ್ಷಿಣ ಉಪನಗರ ವಿಭಾಗ) ರಶೀದ್ ಮುನೀರ್ ಖಾನ್ ಹೇಳಿದ್ದರು.

ಟಿಎಂಸಿ ಸಂಸದೆಯ ಪ್ರಕಾರ, ಕೋಲ್ಕತಾ ಮುನ್ಸಿಪಲ್ ಕಾರ್ಪೊರೇಶನ್‌ನ ಜಂಟಿ ಆಯುಕ್ತರು ಟ್ರಾನ್ಸ್ಜೆಂಡರ್ ಮತ್ತು ವಿಶೇಷ ಸಾಮರ್ಥ್ಯ ಹೊಂದಿರುವ ಜನರಿಗೆ ಲಸಿಕೆ ಶಿಬಿರವನ್ನು ಆಯೋಜಿಸುತ್ತಿದ್ದಾರೆ ಎಂದು ಅವರು ಆಹ್ವಾನವನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ: ನಕಲಿ ವ್ಯಾಕ್ಸಿನೇಷನ್ ಶಿಬಿರದಲ್ಲಿ ಮೋಸ ಹೋದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ; ಓರ್ವ ವ್ಯಕ್ತಿಯ ಬಂಧನ

ಲಸಿಕೆ ಹೆಚ್ಚು ಹೆಚ್ಚು ಜನಕ್ಕೆ ನೀಡಿದಷ್ಟೂ ಕೊರೊನಾ ಮೂರನೆ ಅಲೆಯಿಂದ ಬಚಾವಾಗಬಹುದು ಅನ್ನುತ್ತಿದೆ ಅಧ್ಯಯನ ವರದಿ

Published On - 9:32 pm, Sat, 26 June 21

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ