AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ ಅಹಮದಾಬಾದ್​ನ ಸಬರಮತಿ ನದಿ ನೀರಿನಲ್ಲಿ ಕೊರೊನಾ ವೈರಸ್ ಪತ್ತೆ!

ಕೊರೊನಾ ವೈರಾಣು ಪತ್ತೆ ಕೇವಲ ಅಷ್ಟಕ್ಕೇ ನಿಂತಿಲ್ಲ. ಕನಕಾರಿಯಾ, ಚಾಂದೋಲ ಕೆರೆಯ ನೀರಿನ ಮಾದರಿಯಲ್ಲಿ ಕೂಡ ಕೊರೊನಾ ವೈರಾಣು ಪತ್ತೆಯಾಗಿದೆ. ಈ ಬಗ್ಗೆ ಐಐಟಿ ಗಾಂಧಿ ನಗರ ಸೇರಿದಂತೆ ಎಂಟು ಸಂಸ್ಥೆಗಳಿಂದ ಸಂಶೋಧನೆ ನಡೆಸಲಾಗಿದೆ.

ಗುಜರಾತ್​ ಅಹಮದಾಬಾದ್​ನ ಸಬರಮತಿ ನದಿ ನೀರಿನಲ್ಲಿ ಕೊರೊನಾ ವೈರಸ್ ಪತ್ತೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 18, 2021 | 8:41 PM

Share

ಗಾಂಧಿನಗರ: ಕೊರೊನಾ ಮೊದಲನೇ ಅಲೆ ಬಳಿಕ, ಎರಡನೇ ಅಲೆಯೇ ಭಾರತಕ್ಕೆ ಬಂದೊದಗಿದ್ದೇ ಬಹಳ ಚಿಂತಾಜನಕ ಸ್ಥಿತಿ ಉಂಟುಮಾಡಿತ್ತು. ಅದರಿಂದ ದೇಶದಲ್ಲಿ ತುಂಬಾ ಕಷ್ಟನಷ್ಟ ಉಂಟಾಗಿತ್ತು. ಆ ಬಳಿಕ, ಪ್ರಾಣಿಗಳಲ್ಲಿ ಕೂಡ ಕೊರೊನಾ ವೈರಾಣು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಮತ್ತೊಂದು ಅಚ್ಚರಿಯ ಮಾಹಿತಿ ತಿಳಿದುಬಂದಿದೆ. ಗುಜರಾತ್​ ಅಹಮದಾಬಾದ್ನ‌ ಸಬರಮತಿ ನದಿ ನೀರಿನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ನೀರಿನಲ್ಲೂ ಕೊರೊನಾ ವೈರಾಣು ಕಂಡುಬಂದಿದೆ. ನದಿಯಲ್ಲಿ ಪಡೆದ ಎಲ್ಲಾ ನೀರಿನ ಸ್ಯಾಂಪಲ್​ಗಳಲ್ಲೂ ಕೊರೊನಾ ವೈರಸ್ ಪತ್ತೆಯಾಗಿದೆ.

ಕೊರೊನಾ ವೈರಾಣು ಪತ್ತೆ ಕೇವಲ ಅಷ್ಟಕ್ಕೇ ನಿಂತಿಲ್ಲ. ಕನಕಾರಿಯಾ, ಚಾಂದೋಲ ಕೆರೆಯ ನೀರಿನ ಮಾದರಿಯಲ್ಲಿ ಕೂಡ ಕೊರೊನಾ ವೈರಾಣು ಪತ್ತೆಯಾಗಿದೆ. ಈ ಬಗ್ಗೆ ಐಐಟಿ ಗಾಂಧಿ ನಗರ ಸೇರಿದಂತೆ ಎಂಟು ಸಂಸ್ಥೆಗಳಿಂದ ಸಂಶೋಧನೆ ನಡೆಸಲಾಗಿದೆ. ದೆಹಲಿಯ ಜೆಎನ್​ಯು ಪರಿಸರ ವಿಜ್ಞಾನದ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಭಾಗಿಯಾಗಿದ್ದಾರೆ. ಅಸ್ಸಾಂನ ಭರೂ ನದಿಯ ನೀರಿನ ಸ್ಯಾಂಪಲ್​ನಲ್ಲಿಯೂ ಕೊರೊನಾ ವೈರಸ್ ಕಂಡುಬಂದಿದೆ.

ಗಾಂಧಿನಗರದ ಐಐಟಿ ಭೂ ವಿಜ್ಞಾನ ವಿಭಾಗದ ಮನೀಶ್ ಕುಮಾರ್​ರಿಂದ ಸಂಶೋಧನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಮ್ಮ‌ ತಂಡ ಪರೀಕ್ಷಿಸಿದ ಎಲ್ಲ ನೀರಿನ ಸ್ಯಾಂಪಲ್​ಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಸೆಪ್ಟೆಂಬರ್ 3 ರಿಂದ ಡಿಸೆಂಬರ್ 29 ರವರೆಗೆ ಸಬರಮತಿ ನದಿ ನೀರಿನ 694 ನೀರಿನ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಲಾಗಿದೆ. ಸ್ವಚ್ಚ ನೀರಿನಲ್ಲೂ ಕೊರೊನಾ ವೈರಸ್ ಉಳಿಯುತ್ತೆ ಎಂದು ಮನೀಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಶಾಲೆ ಪುನಾರಂಭ ಯಾವಾಗ? ಈ ಬಗ್ಗೆ ಕೇಂದ್ರದ ಅಧಿಕಾರಿಗಳು ಏನು ಹೇಳುತ್ತಾರೆ? ಇಲ್ಲಿದೆ ವಿವರ

ಕೊರೊನಾದಿಂದ ಮಕ್ಕಳ ಮೇಲೆ ಹೆಚ್ಚಿನ ಅಪಾಯ ಇರುವುದಿಲ್ಲ; ಆದರೆ ಜನರು ಎಚ್ಚರಿಕೆಯಿಂದ ಇರಲೇಬೇಕು: ವಿ ಕೆ ಪೌಲ್

Published On - 8:37 pm, Fri, 18 June 21

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು