AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ ಅಹಮದಾಬಾದ್​ನ ಸಬರಮತಿ ನದಿ ನೀರಿನಲ್ಲಿ ಕೊರೊನಾ ವೈರಸ್ ಪತ್ತೆ!

ಕೊರೊನಾ ವೈರಾಣು ಪತ್ತೆ ಕೇವಲ ಅಷ್ಟಕ್ಕೇ ನಿಂತಿಲ್ಲ. ಕನಕಾರಿಯಾ, ಚಾಂದೋಲ ಕೆರೆಯ ನೀರಿನ ಮಾದರಿಯಲ್ಲಿ ಕೂಡ ಕೊರೊನಾ ವೈರಾಣು ಪತ್ತೆಯಾಗಿದೆ. ಈ ಬಗ್ಗೆ ಐಐಟಿ ಗಾಂಧಿ ನಗರ ಸೇರಿದಂತೆ ಎಂಟು ಸಂಸ್ಥೆಗಳಿಂದ ಸಂಶೋಧನೆ ನಡೆಸಲಾಗಿದೆ.

ಗುಜರಾತ್​ ಅಹಮದಾಬಾದ್​ನ ಸಬರಮತಿ ನದಿ ನೀರಿನಲ್ಲಿ ಕೊರೊನಾ ವೈರಸ್ ಪತ್ತೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 18, 2021 | 8:41 PM

Share

ಗಾಂಧಿನಗರ: ಕೊರೊನಾ ಮೊದಲನೇ ಅಲೆ ಬಳಿಕ, ಎರಡನೇ ಅಲೆಯೇ ಭಾರತಕ್ಕೆ ಬಂದೊದಗಿದ್ದೇ ಬಹಳ ಚಿಂತಾಜನಕ ಸ್ಥಿತಿ ಉಂಟುಮಾಡಿತ್ತು. ಅದರಿಂದ ದೇಶದಲ್ಲಿ ತುಂಬಾ ಕಷ್ಟನಷ್ಟ ಉಂಟಾಗಿತ್ತು. ಆ ಬಳಿಕ, ಪ್ರಾಣಿಗಳಲ್ಲಿ ಕೂಡ ಕೊರೊನಾ ವೈರಾಣು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಮತ್ತೊಂದು ಅಚ್ಚರಿಯ ಮಾಹಿತಿ ತಿಳಿದುಬಂದಿದೆ. ಗುಜರಾತ್​ ಅಹಮದಾಬಾದ್ನ‌ ಸಬರಮತಿ ನದಿ ನೀರಿನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ನೀರಿನಲ್ಲೂ ಕೊರೊನಾ ವೈರಾಣು ಕಂಡುಬಂದಿದೆ. ನದಿಯಲ್ಲಿ ಪಡೆದ ಎಲ್ಲಾ ನೀರಿನ ಸ್ಯಾಂಪಲ್​ಗಳಲ್ಲೂ ಕೊರೊನಾ ವೈರಸ್ ಪತ್ತೆಯಾಗಿದೆ.

ಕೊರೊನಾ ವೈರಾಣು ಪತ್ತೆ ಕೇವಲ ಅಷ್ಟಕ್ಕೇ ನಿಂತಿಲ್ಲ. ಕನಕಾರಿಯಾ, ಚಾಂದೋಲ ಕೆರೆಯ ನೀರಿನ ಮಾದರಿಯಲ್ಲಿ ಕೂಡ ಕೊರೊನಾ ವೈರಾಣು ಪತ್ತೆಯಾಗಿದೆ. ಈ ಬಗ್ಗೆ ಐಐಟಿ ಗಾಂಧಿ ನಗರ ಸೇರಿದಂತೆ ಎಂಟು ಸಂಸ್ಥೆಗಳಿಂದ ಸಂಶೋಧನೆ ನಡೆಸಲಾಗಿದೆ. ದೆಹಲಿಯ ಜೆಎನ್​ಯು ಪರಿಸರ ವಿಜ್ಞಾನದ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಭಾಗಿಯಾಗಿದ್ದಾರೆ. ಅಸ್ಸಾಂನ ಭರೂ ನದಿಯ ನೀರಿನ ಸ್ಯಾಂಪಲ್​ನಲ್ಲಿಯೂ ಕೊರೊನಾ ವೈರಸ್ ಕಂಡುಬಂದಿದೆ.

ಗಾಂಧಿನಗರದ ಐಐಟಿ ಭೂ ವಿಜ್ಞಾನ ವಿಭಾಗದ ಮನೀಶ್ ಕುಮಾರ್​ರಿಂದ ಸಂಶೋಧನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಮ್ಮ‌ ತಂಡ ಪರೀಕ್ಷಿಸಿದ ಎಲ್ಲ ನೀರಿನ ಸ್ಯಾಂಪಲ್​ಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಸೆಪ್ಟೆಂಬರ್ 3 ರಿಂದ ಡಿಸೆಂಬರ್ 29 ರವರೆಗೆ ಸಬರಮತಿ ನದಿ ನೀರಿನ 694 ನೀರಿನ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಲಾಗಿದೆ. ಸ್ವಚ್ಚ ನೀರಿನಲ್ಲೂ ಕೊರೊನಾ ವೈರಸ್ ಉಳಿಯುತ್ತೆ ಎಂದು ಮನೀಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಶಾಲೆ ಪುನಾರಂಭ ಯಾವಾಗ? ಈ ಬಗ್ಗೆ ಕೇಂದ್ರದ ಅಧಿಕಾರಿಗಳು ಏನು ಹೇಳುತ್ತಾರೆ? ಇಲ್ಲಿದೆ ವಿವರ

ಕೊರೊನಾದಿಂದ ಮಕ್ಕಳ ಮೇಲೆ ಹೆಚ್ಚಿನ ಅಪಾಯ ಇರುವುದಿಲ್ಲ; ಆದರೆ ಜನರು ಎಚ್ಚರಿಕೆಯಿಂದ ಇರಲೇಬೇಕು: ವಿ ಕೆ ಪೌಲ್

Published On - 8:37 pm, Fri, 18 June 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ