AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ರಾಜಧಾನಿಯಲ್ಲೂ ಕೊರೊನಾ ವೈರಸ್ ಪತ್ತೆ! ನೋಯ್ಡಾದ 2 ಶಾಲೆಗಳಿಗೆ ರಜೆ

ದೆಹಲಿ: ಕಳೆದ ಹಲವು ದಿನಗಳಿಂದ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಮಾರಣಾಂತಿಕ ಕೊರೊನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ತೆಲಂಗಾಣದ ಟೆಕ್ಕಿಯಲ್ಲಿ ಕೊರೊನಾ​ ಸೋಂಕು ಪತ್ತೆಯಾಗಿದ್ದು, ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಮತ್ತೊಂದು ಆತಂಕಕಾರಿ ವಿಷಯವೆಂದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢವಾಗಿದೆ. ದೆಹಲಿಯ ಮಯೂರ್ ವಿಹಾರ್ ನಿವಾಸಿಗೆ ಕೊರೊನಾ ಅಟ್ಯಾಕ್ ಆಗಿದೆ. ಇವರು ಕಳೆದ ಬುಧವಾರವಷ್ಟೇ ಇಟಲಿಯಿಂದ ದೆಹಲಿಗೆ ಆಗಮಿಸಿದ್ದರು. ಬಳಿಕ ಶುಕ್ರವಾರ ಮಗನ ಬರ್ತ್​ಡೇ ಪಾರ್ಟಿ […]

ರಾಷ್ಟ್ರ ರಾಜಧಾನಿಯಲ್ಲೂ ಕೊರೊನಾ ವೈರಸ್ ಪತ್ತೆ! ನೋಯ್ಡಾದ 2 ಶಾಲೆಗಳಿಗೆ ರಜೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 03, 2020 | 4:53 PM

Share

ದೆಹಲಿ: ಕಳೆದ ಹಲವು ದಿನಗಳಿಂದ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಮಾರಣಾಂತಿಕ ಕೊರೊನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ತೆಲಂಗಾಣದ ಟೆಕ್ಕಿಯಲ್ಲಿ ಕೊರೊನಾ​ ಸೋಂಕು ಪತ್ತೆಯಾಗಿದ್ದು, ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಮತ್ತೊಂದು ಆತಂಕಕಾರಿ ವಿಷಯವೆಂದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢವಾಗಿದೆ.

ದೆಹಲಿಯ ಮಯೂರ್ ವಿಹಾರ್ ನಿವಾಸಿಗೆ ಕೊರೊನಾ ಅಟ್ಯಾಕ್ ಆಗಿದೆ. ಇವರು ಕಳೆದ ಬುಧವಾರವಷ್ಟೇ ಇಟಲಿಯಿಂದ ದೆಹಲಿಗೆ ಆಗಮಿಸಿದ್ದರು. ಬಳಿಕ ಶುಕ್ರವಾರ ಮಗನ ಬರ್ತ್​ಡೇ ಪಾರ್ಟಿ ಸಹ ಮಾಡಿದ್ದರು. ಹೀಗಾಗಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದವರಿಗೆ ಏಕಾಂತದಲ್ಲಿ ಇರಿಸಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.

ನೋಯ್ಡಾದ ಎರಡು ಶಾಲೆಗಳಿಗೆ ರಜೆ: ಅಲ್ಲದೆ, ಸೋಂಕಿತ ವ್ಯಕ್ತಿಯ ಕುಟುಂಬದ ನಾಲ್ವರಲ್ಲೂ ಕೊರೊನಾ ವೈರಸ್ ಲಕ್ಷಣ ಪತ್ತೆಯಾಗಿದೆ. ನೋಯ್ಡಾದ ಶಾಲೆಯೊಂದರಲ್ಲಿ ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯ ಮಗ ಓದುತ್ತಿರುವ ಕಾರಣ ನೋಯ್ಡಾದ ಎರಡು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ವೈರಸ್ ಭೀತಿ ಹಿನ್ನೆಲೆಯಲ್ಲಿ ಸಿಬ್ಬಂದಿ ಶಾಲೆಯಲ್ಲಿ ಸ್ಪ್ರೇ ಸಿಂಪಡಿಸಿದ್ದಾರೆ.

ಕೊರೊನಾ ಸೋಂಕಿತ ವ್ಯಕ್ತಿಗೆ ದೆಹಲಿ ಆರ್​ಎಂಎಲ್​ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಏಕಾಂಗಿಯಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕು ಹರಡದಂತೆ ವೈದ್ಯರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅಲ್ಲದೆ, ಅಂದಿನ ಬರ್ತ್​ ಡೆ ಪಾರ್ಟಿಯಲ್ಲಿ ಶಾಲೆಯ ಸಾಕಷ್ಟು ಮಕ್ಕಳು ಕೂಡ ಭಾಗಿಯಾಗಿದ್ರು‌ ಎನ್ನಲಾಗಿದೆ. ಹೀಗಾಗಿ ಶಾಲೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಆಗ್ರಾದ 6 ಮಂದಿಗೆ ಕೊರೊನಾ ವೈರಸ್​!? ಮಹಾಮಾರಿ ಕೊರೊನಾ ವೈರಸ್ ಇದೀಗ ಉತ್ತರ ಪ್ರದೇಶಕ್ಕೂ ವಕ್ಕರಿಸಿಕೊಂಡಿದೆ. ಆಗ್ರಾದಲ್ಲಿ 6 ಮಂದಿಯ ರಕ್ತದಲ್ಲಿ ಕೊರೊನಾ ವೈರಸ್​ನ ಲಕ್ಷಣಗಳು ಪತ್ತೆಯಾಗಿದೆ. ಇವರು ದೆಹಲಿಯ ಕೋವಿಡ್-19 ರೋಗಿಯ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಹೀಗಾಗಿ 6 ಮಂದಿಯ ರಕ್ತದಲ್ಲಿ ಭಾರಿ ಪ್ರಮಾಣದಲ್ಲಿ ವೈರಸ್ ಲಕ್ಷಣಗಳು ಪತ್ತೆಯಾಗಿದ್ದು, ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Published On - 4:08 pm, Tue, 3 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ