AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹೇಗಿರಲಿದೆ ಕೊರೊನಾ 2ನೇ ಅಲೆ? ಆರೋಗ್ಯ ತಜ್ಞರು ಹೇಳಿದ್ದಾರೊಂದು ಗುಡ್​ನ್ಯೂಸ್

ದೇಶದಲ್ಲಿ ಕೊರೊನಾ ಅಲೆ ಮತ್ತೊಮ್ಮೆ ಉತ್ತುಂಗಕ್ಕೆ ಏರಲಾರದು. ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾದರೂ ಮೊದಲಿನಷ್ಟು ಹೆಚ್ಚಾಗಲಾರದು ಎಂದು ವೈರಾಲಜಿಸ್ಟ್ (ಸೂಕ್ಷ್ಮರೋಗಾಣುತಜ್ಞ) ಡಾ.ಶಾಹೀದ್ ಜಮೀಲ್​ ತಿಳಿಸಿದ್ದಾರೆ.

ದೇಶದಲ್ಲಿ ಹೇಗಿರಲಿದೆ ಕೊರೊನಾ 2ನೇ ಅಲೆ? ಆರೋಗ್ಯ ತಜ್ಞರು ಹೇಳಿದ್ದಾರೊಂದು ಗುಡ್​ನ್ಯೂಸ್
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 20, 2020 | 12:11 PM

Share

ದೆಹಲಿ: ದೇಶದಲ್ಲಿ ಕೊರೊನಾ ವೈರಸ್​ ಸೋಂಕಿನ ಪ್ರಮಾಣ ತಗ್ಗಿದ್ದರೂ, ಎರಡನೇ ಅಲೆಯ ಭಯವಿನ್ನೂ ಹೋಗಿಲ್ಲ. ಇನ್ನೊಮ್ಮೆ ಕೊರೊನಾ ಸೋಂಕಿತರ ಸಂಖ್ಯೆ ಉತ್ತುಂಗಕ್ಕೇರಬಹುದಾ? ವೈರಸ್​ ಪ್ರಸರಣದ ಪ್ರಮಾಣ ಹೆಚ್ಚಾಗಬಹುದಾ ಎಂಬ ಆತಂಕ ಕಾಡುತ್ತಲೇ ಇದೆ. ಹೀಗಿರುವಾಗ ಆರೋಗ್ಯ ತಜ್ಞರು ಒಂದು ಸಮಾಧಾನಕರ ಸಂಗತಿಯನ್ನು ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಕೋಟಿ ದಾಟಿದೆ. ಆದರೆ ಒಂದು ದಿನ ಪತ್ತೆಯಾಗುವ ಸೋಂಕಿನ ಪ್ರಮಾಣ ಮತ್ತು ಸಾವಿನ ಪ್ರಮಾಣ ನಿರಂತರವಾಗಿ ಕುಸಿಯುತ್ತಲೇ ಇದೆ. ಇತ್ತೀಚೆಗೆ ಜನಜೀವನದ ಬಹುತೇಕ ಮೊದಲಿನಂತೇ ಆಗಿಬಿಟ್ಟಿದೆ. ಗುಂಪುಗೂಡುವುದು, ಶುಭ ಸಮಾರಂಭಗಳೆಲ್ಲ ನಡೆಯುತ್ತಿವೆ. ಆದರೂ ಕೊರೊನಾ ಅಲೆ ಮತ್ತೊಮ್ಮೆ ಉತ್ತುಂಗಕ್ಕೆ ಏರಲಾರದು, ಒಮ್ಮೆ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾದರೂ ಮೊದಲಿನಷ್ಟು ಹೆಚ್ಚಾಗಲಾರದು ಎಂದು ವೈರಾಲಜಿಸ್ಟ್ (ಸೂಕ್ಷ್ಮರೋಗಾಣುತಜ್ಞ) ಡಾ.ಶಾಹೀದ್ ಜಮೀಲ್​ ತಿಳಿಸಿದ್ದಾರೆ.

ಸೆಪ್ಟೆಂಬರ್​ ಮಧ್ಯ ಅವಧಿಯವರೆಗೆ ಪ್ರತಿದಿನ ಏನಿಲ್ಲವೆಂದರೂ 93,000ಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗುತ್ತಿದ್ದವು. ಆದರೆ ನಂತರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿ ಒಂದು ದಿನಕ್ಕೆ 25,500 ಪ್ರಕರಣಗಳಷ್ಟೇ ಪತ್ತೆಯಾಗಲು ಪ್ರಾರಂಭವಾಯಿತು. ಅದೇ ನವೆಂಬರ್​ ಕೊನೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮತ್ತೆ ಏರಿಕೆಯಾಯಿತು. ಆದರೆ ಮತ್ತೆ ಇಳಿಕೆಯಾಗುತ್ತ ಬಂತು. ನನಗನ್ನಿಸುವ ಪ್ರಕಾರ ಕೊರೊನಾದ ಕೆಟ್ಟ ಭಾಗ ಮುಕ್ತಾಯವಾಯಿತು. ಹಾಗಂತ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಭವಿಷ್ಯದಲ್ಲಿ ಸೋಂಕು ತುಸು ಹೆಚ್ಚಾಗಬಹುದು. ಆದರೆ ದಿಗಿಲು ಉಂಟುಮಾಡುವಷ್ಟು ಉತ್ತುಂಗಕ್ಕೆ ಏರಲಾರದು ಎಂದು ತಿಳಿಸಿದ್ದಾರೆ.

ದಸರಾ, ದೀಪಾವಳಿ, ಚುನಾವಣೆಗಳೆಲ್ಲ ನಡೆದವು. ಜನರು ಗುಂಪುಗೂಡುವ ಕಾರಣ ಕೊರೊನಾ ಅತಿಯಾಗಿ ಬಾಧಿಸಬಹುದು ಎಂದುಕೊಳ್ಳಲಾಗಿತ್ತು. ಆದರೆ ಹಾಗೇನೂ ಆಗಲಿಲ್ಲ. ರೋಗನಿರೋಧಕ ಶಕ್ತಿ ಕಡಿಮೆ ಇರುವ ಜನರು ಅತಿ ಬೇಗನೇ ಸೋಂಕಿಗೆ ಒಳಗಾಗುತ್ತಾರೆ. ಈಗ ವ್ಯಾಕ್ಸಿನ್​ಗಳು ಹೊರಬರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಖ್ಯಾತ ಕ್ಲಿನಿಕಲ್ ವಿಜ್ಞಾನಿ ಡಾ.ಗಗನ್‌ದೀಪ್ ಕಾಂಗ್ ಅವರೂ ಸಹ ಇದೇ ಅಭಿಪ್ರಾಯ ಹೊರಹಾಕಿದ್ದಾರೆ. ಕೊರೊನಾ ಎರಡನೇ ಅಲೆ ಶುರುವಾದರೂ ಮೊದಲಿನಷ್ಟು ಅಬ್ಬರ ಇರುವುದಿಲ್ಲ. ಎರಡನೇ ಬಾರಿಗೆ ಯಾರಿಗೂ ಕೊರೊನಾ ತಗುಲುವುದಿಲ್ಲ, ನಮ್ಮೊಳಗಿನ ಇಮ್ಯೂನಿಟಿ ಅದನ್ನು ತಡೆಯುತ್ತದೆ ಎಂದು ನಾನು ಹೇಳುವುದಿಲ್ಲ. ಆದರೆ ಎರಡನೇ ಬಾರಿ ಪ್ರಸರಣ ಆಗುವ ವೇಗ ಮೊದಲಿನಷ್ಟು ಇರುವುದಿಲ್ಲ. ಹಾಗಾಗಿ ಮತ್ತೊಮ್ಮೆ ಕೊರೊನಾ ಉತ್ತುಂಗಕ್ಕೇರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಬಲ್ಲೆ ಎಂದು ತಿಳಿಸಿದ್ದಾರೆ.

ಹಾಗೇ, ಇನ್ನುಳಿದ ಹಲವು ಆರೋಗ್ಯ ತಜ್ಞರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರೋಗನಿರೋಧಕ ಶಕ್ತಿ ಇದೆ ಎಂದು ನಿರ್ಲಕ್ಷ್ಯ ಬೇಡ. ಕೊವಿಡ್-19 ನಿಯಂತ್ರಣಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸೋಣೆ ಎಂಬ ಕರೆಯನ್ನೂ ಕೊಟ್ಟಿದ್ದಾರೆ.

ರಾಜ್ಯಕ್ಕೆ ಕಾದಿದೆಯಂತೆ 12 ದಿನಗಳ ಗಂಡಾಂತರ.. ಕೊರೊನಾ ಬಗ್ಗೆ ತಜ್ಞರಿಂದ ಎಚ್ಚರಿಕೆ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!