Coronavirus India Update: ಒಂದೇ ದಿನ 1 ಲಕ್ಷಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣ

Covid 19 India Cases : ಭಾರತದಲ್ಲಿ ಈವರೆಗೆ ಒಟ್ಟು 103,558 ಸೋಂಕು ಪ್ರಕರಣಗಳು ದಾಖಲಾಗಿದ್ದು, 57,700ಕ್ಕಿಂತಲೂ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿ ವರದಿಯಾಗಿವೆ.

Coronavirus India Update: ಒಂದೇ ದಿನ 1 ಲಕ್ಷಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣ
ಪ್ರಾತಿನಿಧಿಕ ಚಿತ್ರ
Follow us
|

Updated on:Apr 05, 2021 | 12:33 PM

ದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿದ್ದು ಕಳೆದ 24ಗಂಟೆಗಳಲ್ಲಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಪಿಡುಗು ದೇಶದಲ್ಲಿ ಕಾಣಿಸಿಕೊಂಡ ನಂತರ ಗರಿಷ್ಠ ಪ್ರಕರಣ ಭಾನುವಾರ ದಾಖಲಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ 16ರಂದು 97,894 ಪ್ರಕರಣಗಳು ಪತ್ತೆಯಾಗಿತ್ತು. ದೇಶದಲ್ಲಿ ಈವರೆಗೆ ಒಟ್ಟು 103,558 ಸೋಂಕು ಪ್ರಕರಣಗಳು ದಾಖಲಾಗಿದ್ದು, 57,700ಕ್ಕಿಂತಲೂ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿ ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಸೋಂಕು ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ, ವಾರಾಂತ್ಯ ಲಾಕ್​ಡೌನ್ ಮತ್ತು ನಿರ್ಬಂಧಗಳನ್ನು ಹೇರಲಾಗಿದೆ. ಪುಣೆ ಮತ್ತು ಮುಂಬೈನಲ್ಲಿ ಅತ್ಯಧಿಕ ಸೋಂಕು ಪ್ರಕರಣಗಳು ಕಂಡು ಬಂದಿದ್ದು ಭಾನುವಾರ ಕ್ರಮವಾಗಿ 12,472 ಮತ್ತು 11,206 ಪ್ರಕರಣಗಳು ದಾಖಲಾಗಿವೆ.

ದೆಹಲಿ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ 4,000ಕ್ಕಿಂತಲೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಛತ್ತೀಸ್​ಗಢದಲ್ಲಿ ಎರಡನೇ ದಿನ 5,000ಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ 7.4 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು 478 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಸಾವಿಗೀಡಾದವರ ಸಂಖ್ಯೆ 222 ಆಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 26 ನೇ ದಿನವೂ ಏರಿಕೆಯಾಗಿದ್ದು 741,830ಕ್ಕೆ ತಲುಪಿದೆ. ಫೆಬ್ರವರಿ 12ರಂದು ಸಕ್ರಿಯ ಪ್ರಕರಣಗಳ ಸಂಖ್ಯೆ 135,926 ಆಗಿತ್ತು. ಕಳೆದ 24ಗಂಟೆಗಳಲ್ಲಿ 52,847 ಮಂದಿ ಚೇತರಿಸಿಕೊಂಡಿದ್ದು ಈವರೆಗೆ ಒಟ್ಟು 11,682,136 ಮಂದಿ ಚೇತರಿಸಿಕೊಂಡಿದ್ದು, ಚೇತರಿಕೆಯ ಪ್ರಮಾಣ 92.79 ಆಗಿದೆ.

ಕಳೆದ ಎರಡು ವಾರಗಳಲ್ಲಿ ಮಹಾರಾಷ್ಟ್ರದಲ್ಲಿ 426,108 ಪ್ರಕರಣಗಳು ಪತ್ತೆಯಾಗಿದ್ದು ಪಂಜಾಬ್​ನಲ್ಲಿ 35,754 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಮಾರ್ಚ್ 23ರವರೆಗೆ ಹೊಸ ಸೋಂಕು ಪ್ರಕರಣಗಳ ಏರಿಕೆ ಪ್ರಮಾಣ ಮಹಾರಾಷ್ಟ್ರದಲ್ಲಿ ಶೇ.3.6ಆಗಿದ್ದು ಪಂಜಾಬ್ ನಲ್ಲಿ ಶೇಕಡಾ3.2 ಆಗಿದೆ.ಎರಡು ವಾರಗಳಲ್ಲಿ ದೇಶದಲ್ಲಿ ಸಂಭವಿಸಿದ ಸಾವಿನ ಪ್ರಮಾಣದ ಶೇಕಡಾ 60ರಷ್ಟು ಸಾವು ಪಂಜಾಬ್ ಮತ್ತು ಮಹಾರಾಷ್ಟ್ರದಲ್ಲಿ ಸಂಭವಿಸಿದೆ.

ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಕೇರಳ, ಛತ್ತೀಸ್​ಗಢ, ಚಂಡೀಗಢ , ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ದೆಹಲಿ, ಹರ್ಯಾಣ ಈ ರಾಜ್ಯಗಳಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಸಾವಿನ ಸಂಖ್ಯೆ ಯೂ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಏಪ್ರಿಲ್ 05ರವರೆಗಿನ ಅಂಕಿ ಅಂಶಗಳ ಪ್ರಕಾರ  ಕೊವಿಡ್ ಚೇತರಿಕೆ ಪ್ರಮಾಣ  ಶೇ92.80 ಆಗಿದೆ.

ಇಲ್ಲಿಯವರೆಗೆ ದೇಶದಲ್ಲಿ  8 ಕೋಟಿ ಜನರಿಗೆ ಕೊವಿಡ್ ಲಸಿಕೆ ವಿತರಿಸಲಾಗಿದೆ. ಕಳೆದ 24ಗಂಟೆಗಳಲ್ಲಿ 16,38,464 ಲಸಿಕೆ ನೀಡಲಾಗಿದೆ.  ಎಂಟು ರಾಜ್ಯಗಳಲ್ಲಿ ಶೇ.60 ರಷ್ಟು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸಚಿವಾಲಯ ಹೇಳಿದೆ.

ದೆಹಲಿಯಲ್ಲಿ ಪ್ಲಾಸ್ಮಾಗೆ ಹೆಚ್ಚಿದ ಬೇಡಿಕೆ

ದೆಹಲಿಯಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಪ್ಲಾಸ್ಮಾಗೆ ಬೇಡಿಕೆ ಹೆಚ್ಚಾಗಿದೆ. ಪ್ಲಾಸ್ಮಾ ದಾನಿಗಳ ಸಂಖ್ಯೆಯೂ ಕಡಿಮೆಯಾಗಿದ್ದು, ಪ್ಲಾಸ್ಮಾ ಬ್ಯಾಂಕ್​ಗಳ ಮುಂದೆ ಜನರು ಸಾಲುಗಟ್ಟಿ ನಿಂತಿದ್ದಾರೆ. ಸದ್ಯ ಸಾಕಷ್ಟು ಪ್ಲಾಸ್ಮಾ ಸಂಗ್ರಹ ಇದೆ ಎಂದು ಪ್ಲಾಸ್ಮಾ ಬ್ಯಾಂಕ್ ಹೇಳಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ 1-2 ಮಂದಿ ಮಾತ್ರ ಪ್ಲಾಸ್ಮಾ ದಾನ ನೀಡಲು ಬಂದಿದ್ದು, ದಿನವೊಂದಕ್ಕೆ ಸುಮಾರು 10 ರೋಗಿಗಳಿಗೆ ಪ್ಲಾಸ್ಮಾದ ಅಗತ್ಯವಿದೆ.

ಇದನ್ನೂ ಓದಿ: Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ

(Coronavirus India detected more than one lakh cases over 57700 infections reported from Maharashtra)

Published On - 10:39 am, Mon, 5 April 21

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​