AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Third Wave: ಜಾಗತಿಕ ಮಟ್ಟದಲ್ಲಿ ಶೇ.16ರಷ್ಟು ಏರಿಕೆ ಕಂಡ ಕೊರೊನಾ ಪ್ರಕರಣಗಳ ಸಂಖ್ಯೆ; ಭಾರತಕ್ಕೆ ನಾಲ್ಕನೇ ಸ್ಥಾನ

ಭಾರತದಲ್ಲಿ ಒಂದು ವಾರದ ಅವಧಿಯಲ್ಲಿ 2.69 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಅದರ ಹಿಂದಿನ ವಾರಕ್ಕೆ ಹೋಲಿಸಿದರೆ ಸೋಂಕಿತರ ಸಂಖ್ಯೆಯಲ್ಲಿ ಶೇ.8ರಷ್ಟು ಇಳಿಮುಖವಾಗಿದೆ. ಆದರೆ, ನಿನ್ನೆ ದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 40 ಸಾವಿರಕ್ಕಿಂತ ಹೆಚ್ಚಾಗಿದ್ದು, ವಾರದಲ್ಲಿ 2ನೇ ಬಾರಿಗೆ ಈ ಪ್ರಮಾಣದ ಸೋಂಕು ಕಾಣಿಸಿಕೊಂಡಿದೆ.

Corona Third Wave: ಜಾಗತಿಕ ಮಟ್ಟದಲ್ಲಿ ಶೇ.16ರಷ್ಟು ಏರಿಕೆ ಕಂಡ ಕೊರೊನಾ ಪ್ರಕರಣಗಳ ಸಂಖ್ಯೆ; ಭಾರತಕ್ಕೆ ನಾಲ್ಕನೇ ಸ್ಥಾನ
ಸಾಂಕೇತಿಕ ಚಿತ್ರ
TV9 Web
| Updated By: Skanda|

Updated on: Jul 18, 2021 | 12:15 PM

Share

ದೆಹಲಿ: ಭಾರತದಲ್ಲಿ ಗಂಭೀರ ಸ್ವರೂಪಕ್ಕೆ ತಲುಪಿದ್ದ ಕೊರೊನಾ ಎರಡನೇ ಅಲೆ (Corona Second Wave) ಗಣನೀಯವಾಗಿ ನಿಯಂತ್ರಣಕ್ಕೆ ಬಂದಿದೆಯಾದರೂ ಭೀತಿ ಇನ್ನೂ ಶಮನವಾಗಿಲ್ಲ. ಡೆಲ್ಟಾ ರೂಪಾಂತರಿಯ (Delta Variant) ಅಪಾಯಕಾರಿ ವರ್ತನೆ ಹಾಗೂ ಮೂರನೇ ಅಲೆ (Corona Third Wave) ಉದ್ಭವಿಸುವ ಸಾಧ್ಯತೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವುದರಿಂದ ಈ ಹಂತದಲ್ಲಿ ಮೈಮರೆಯುವುದು ಬಲು ಅಪಾಯಕಾರಿ. ಸದ್ಯ ಹೆಚ್ಚು ಸಕ್ರಿಯ ಸೋಂಕಿತರನ್ನು ಒಳಗೊಂಡ ದೇಶಗಳ ಪೈಕಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿರುವ ಭಾರತದಲ್ಲಿ (India) ನಿನ್ನೆ (ಜುಲೈ 17, ಶನಿವಾರ) 40 ಸಾವಿರಕ್ಕೂ ಅಧಿಕ ಸೋಂಕಿತರು ಹೊಸದಾಗಿ ಕಾಣಿಸಿಕೊಂಡಿದ್ದಾರೆ. ಕಳೆದೊಂದು ವಾರದಲ್ಲಿ ಎರಡನೇ ಬಾರಿಗೆ ಸೋಂಕಿತರ ಪ್ರಮಾಣ 40 ಸಾವಿರದ ಗಡಿ ದಾಟಿದ್ದು, ಕೇರಳ ಮತ್ತು ಮಣಿಪುರ ರಾಜ್ಯಗಳಲ್ಲಿ ಸೋಂಕು ಉಲ್ಬಣಿಸುತ್ತಿರುವುದು ಕಂಡುಬಂದಿದೆ.

ಬ್ರೆಜಿಲ್​ ದೇಶವನ್ನು ಹಿಂದಿಕ್ಕಿರುವ ಇಂಡೋನೇಶ್ಯಾ ಜಾಗತಿಕ ಮಟ್ಟದಲ್ಲಿ ಅತ್ಯಧಿಕ ಸೋಂಕಿತರು ಪತ್ತೆಯಾಗುತ್ತಿರುವ ನಂ.1ದೇಶ ಎಂದು ಗುರುತಿಸಿಕೊಂಡಿದೆ. ಇಂಡೋನೇಶ್ಯಾದಲ್ಲಿ ಕಳೆದೊಂದು ವಾರದಿಂದ 3.24ಲಕ್ಷಕ್ಕೂ ಹೆಚ್ಚು ಸೋಂಕಿತರು ಕಂಡುಬಂದಿದ್ದು, ಸೋಂಕಿತರ ಪ್ರಮಾಣ ಹಿಂದಿನ ವಾರಕ್ಕಿಂತಲೂ ಶೇ.43ರಷ್ಟು ಹೆಚ್ಚಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​ನಲ್ಲಿ ಒಂದು ವಾರದ ಅವಧಿಯಲ್ಲಿ 2.87 ಲಕ್ಷ ಸೋಂಕಿತರು ಕಂಡುಬಂದಿದ್ದರೆ, ಮೂರನೇ ಸ್ಥಾನದಲ್ಲಿರುವ ಬ್ರಿಟನ್​ನಲ್ಲಿ 2.75 ಲಕ್ಷ ಸೋಂಕಿತರು ಪತ್ತೆಯಾಗಿದ್ದಾರೆ.

ಇತ್ತ ಭಾರತದಲ್ಲಿ ಒಂದು ವಾರದ ಅವಧಿಯಲ್ಲಿ 2.69 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಅದರ ಹಿಂದಿನ ವಾರಕ್ಕೆ ಹೋಲಿಸಿದರೆ ಸೋಂಕಿತರ ಸಂಖ್ಯೆಯಲ್ಲಿ ಶೇ.8ರಷ್ಟು ಇಳಿಮುಖವಾಗಿದೆ. ಆದರೆ, ನಿನ್ನೆ ದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 40 ಸಾವಿರಕ್ಕಿಂತ ಹೆಚ್ಚಾಗಿದ್ದು, ವಾರದಲ್ಲಿ 2ನೇ ಬಾರಿಗೆ ಈ ಪ್ರಮಾಣದ ಸೋಂಕು ಕಾಣಿಸಿಕೊಂಡಿದೆ. ಶುಕ್ರವಾರ ದೇಶದಲ್ಲಿ 38,019 ಸೋಂಕು ಪತ್ತೆಯಾಗಿದ್ದರೆ ಶನಿವಾರದಂದು ಪ್ರಕರಣಗಳ ಸಂಖ್ಯೆ 41,246 ಕ್ಕೆ ಏರಿದೆ. ಈ ಪೈಕಿ ಕೇರಳದಲ್ಲಿ ಸುಮಾರು 38 ದಿನಗಳ ನಂತರ ಅತ್ಯಧಿಕ ಪ್ರಮಾಣದ ಸೋಂಕು ದಾಖಲಾಗಿದ್ದು ಒಟ್ಟು 16,148 ಹೊಸ ಪ್ರಕರಣಗಳನ್ನು ಗುರುತಿಸಲಾಗಿದೆ. ಇದೆಲ್ಲದರ ಜತೆಜತೆಗೆ ಸಾವಿನ ಪ್ರಮಾಣ ಗಮನಾರ್ಹವಾಗಿ ಇಳಿಕೆಯಾಗುತ್ತಿರುವುದು ಕೊಂಚ ಸಮಾಧಾನ ಮೂಡಿಸಿದೆ.

ಆದರೆ, ಜಾಗತಿಕ ಮಟ್ಟದ ಲೆಕ್ಕಾಚಾರ ತೆಗೆದುಕೊಂಡಾಗ ಕಳೆದೊಂದು ವಾರದಲ್ಲಿ ಸೋಂಕಿತರ ಸಂಖ್ಯೆ ಶೇ.16ರಷ್ಟು ಏರಿಕೆಯಾಗಿದೆ. ಇದು ವಿಶ್ವ ಮಟ್ಟದಲ್ಲಿ ಮೂರನೇ ಅಲೆ ಭೀತಿಯನ್ನು ಮತ್ತೆ ಹೆಚ್ಚಿಸಿದ್ದು ಆಗ್ನೇಯ ಏಷ್ಯಾ ಹಾಗೂ ಯರೋಪ್​ ಪ್ರಾಂತ್ಯದ ಕೆಲ ದೇಶಗಳಲ್ಲಿ ವೇಗವಾಗಿ ಸೋಂಕು ಹಬ್ಬುತ್ತಿರುವುದು ಆತಂಕ ಮೂಡಿಸಿದೆ. ಇಂಡೋನೇಶ್ಯಾದಲ್ಲಿ ಶೇ.43ರಷ್ಟು, ಮಲೇಶಿಯಾದಲ್ಲಿ ಶೇ.45ರಷ್ಟು, ಥೈಲ್ಯಾಂಡ್​ನಲ್ಲಿ ಶೇ.38ರಷ್ಟು, ಮಯನ್ಮಾರ್​ನಲ್ಲಿ ಶೇ.48ರಷ್ಟು ಏರಿಕೆ ಕಂಡಿದೆ. ಈ ಬೆಳವಣಿಗೆಯನ್ನು ನೋಡಿದಾಗ ಕೊರೊನಾ ಮೂರನೇ ಅಲೆ ನಿರೀಕ್ಷೆಗಿಂತ ವೇಗವಾಗಿ ವ್ಯಾಪಿಸಲಿದೆಯಾ ಎಂಬ ಅನುಮಾನವನ್ನೂ ಕೆಲ ತಜ್ಞರು ಹೊರಹಾಕಿದ್ದಾರೆ.

ಇದನ್ನೂ ಓದಿ: Delta Variant: ಕೊರೊನಾ ಲಸಿಕೆ ಪಡೆದ ನಂತರವೂ ಹಬ್ಬಿದ ಸೋಂಕಿನಲ್ಲಿ ಶೇ.86.09 ಪಾಲು ಡೆಲ್ಟಾ ತಳಿಯದ್ದು – ಐಸಿಎಂಆರ್ 

Corona third Wave: ಆಗಸ್ಟ್​ ಅಂತ್ಯಕ್ಕೆ ಕೊರೊನಾ ಮೂರನೇ ಅಲೆ ನಿಶ್ಚಿತ: ಐಸಿಎಂಆರ್​ ಹಿರಿಯ ವೈದ್ಯ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!