AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus India Update: ಭಾರತದಲ್ಲಿ ಒಂದೇ ದಿನ 3.57 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ, 3,449 ಮಂದಿ ಸಾವು

Covid-19 India: ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಇದೀಗ ದೇಶದಲ್ಲಿರುವ ಕೊವಿಡ್ ರೋಗಿಗಳ ಒಟ್ಟು ಸಂಖ್ಯೆ 2.02 ಕೋಟಿ. ಸಕ್ರಿಯ ಪ್ರಕರಣಗಳ ಸಂಖ್ಯೆ 34 ಲಕ್ಷ ಆಗಿದ್ದು 1.66 ಕೋಟಿ ಮಂದಿ ಚೇತರಿಸಿಕೊಂಡಿದ್ದಾರೆ.

Coronavirus India Update: ಭಾರತದಲ್ಲಿ ಒಂದೇ ದಿನ 3.57 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ, 3,449 ಮಂದಿ ಸಾವು
ಕೊವಿಡ್ 19 ರೋಗಿಯ ಅಂತ್ಯ ಸಂಸ್ಕಾರದ ಹೊತ್ತಲ್ಲಿ ಪ್ರಾರ್ಥಿಸುತ್ತಿರುವ ಕುಟುಂಬ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 04, 2021 | 11:04 AM

Share

ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಪತ್ತೆಯಾಗಿದ್ದು 3.57 ಲಕ್ಷಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣಗಳು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಮಾಹಿತಿ ಪ್ರಕಾರ ಇದೀಗ ದೇಶದಲ್ಲಿರುವ ಕೊವಿಡ್ ರೋಗಿಗಳ ಒಟ್ಟು ಸಂಖ್ಯೆ 2.02 ಕೋಟಿ. ಸಕ್ರಿಯ ಪ್ರಕರಣಗಳ ಸಂಖ್ಯೆ 34 ಲಕ್ಷ ಆಗಿದ್ದು 1.66 ಕೋಟಿ ಮಂದಿ ಚೇತರಿಸಿಕೊಂಡಿದ್ದಾರೆ. ಒಂದೇ ದಿನ 3, 449 ಮಂದಿ ಸಾವಿಗೀಡಾಗಿದ್ದು, ಸಾವಿಗೀಡಾದವರ ಸಂಖ್ಯೆ 2.22ಲಕ್ಷಕ್ಕೇರಿದೆ.

ಕಳೆದ 30 ದಿನಗಳಲ್ಲಿ ಇದೇ ಮೊದಲ ಬಾರಿ ಮಹಾರಾಷ್ಟ್ರದಲ್ಲಿ ದಿನವೊಂದಕ್ಕೆ ಪತ್ತೆಯಾದ ಕೊವಿಡ್ ಪ್ರಕರಣಗಳ ಸಂಖ್ಯೆ 50,000ದಿಂದ ಕೆಳಗಿಳಿದಿದೆ. ಸೋಮವಾರ 48,621 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣಗಳಸಂಖ್ಯೆ 47,71,022 ಆಗಿದೆ.567 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 70,851 ಆಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆ ಹೇಳಿದೆ. ಏಪ್ರಿಲ್ 3ರಂದು ರಾಜ್ಯದಲ್ಲಿ 49,447 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಏಪ್ರಿಲ್ 1ರಂದು 43,183 ಮತ್ತು ಏಪ್ರಿಲ್2ರಂದು 47,827 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಏಪ್ರಿಲ್ ತಿಂಗಳಲ್ಲಿ ಸರಾಸರಿ 60,000 ಪ್ರಕರಣಗಳು ಪತ್ತೆಯಾಗಿವೆ.

ತೆಲಂಗಾಣ

ಜಮ್ಮು ಕಾಶ್ಮೀರದಲ್ಲಿ ಕೊರೊನಾ ಕರ್ಫ್ಯೂ ಹೇರಲಾಗಿದೆ . ಮೇ 6 ರವರೆಗೆ ಶ್ರೀನಗರ,ಬಾರಮುಲ್ಲಾ,  ಜಮ್ಮು ಮತ್ತು ಬುದ್ಗಾಂನಲ್ಲಿ ಲಾಕ್​ಡೌನ್ ಇದೆ.

ಕೇರಳದಲ್ಲಿ ಸೋಮವಾರ 26,011 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 16,64,789ಕ್ಕೇರಿದೆ. 45 ಸಾವು ವರದಿ ಆಗಿದ್ದು ಸಾವಿಗೀಡಾದವರ ಸಂಖ್ಯೆ5,450 ಆಗಿದೆ. ಮಿಜೊರಾಂನಲ್ಲಿ 198 ಹೊಸಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,427 ಆಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 18,043 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು20,293 ಚೇತರಿಸಿಕೊಂಡಿದ್ದಾರೆ. 448 ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳು: 89,592, ಸಾವಿನ ಸಂಖ್ಯೆ : 17,414.

ಅಸ್ಸಾಂನಲ್ಲಿ 4,489 ಹೊಸ ಪ್ರಕರಣಗಳು ಪತ್ತೆಯಾಗಿದ್ದು 2,534 ಮಂದಿ ಚೇತರಿಸಿಕೊಂಡಿದ್ದಾರೆ 29 ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳು: 26,477. ಸಾವಿನ ಸಂಖ್ಯೆ- 1,347. ಛತ್ತೀಸಗಡದಲ್ಲಿ 15,274 ಹೊಸ ಪ್ರಕರಣಗಳು ಪತ್ತೆಯಾಗಿದ್ದು , 1,088 ಮಂದಿ ಚೇತರಿಸಿಕೊಂಡಿದ್ದಾರೆ 266 ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳು: 1,20,977, ಸಾವಿನ ಸಂಖ್ಯೆ: 9,275.  ಹರ್ಯಾಣದಲ್ಲಿ 12,885 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 13,293 ಮಂದಿ ಚೇತರಿಸಿಕೊಂಡಿದ್ದಾರೆ, 140 ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳು: 1,04,722, ಚೇತರಿಕೆ: 4,18,425. ಸಾವಿನ ಸಂಖ್ಯೆ 4,626 ಆಗಿದೆ.

ಮಧ್ಯಪ್ರದೇಶದಲ್ಲಿ 12062 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 13408 ಮಂದಿ ಚೇತರಿಸಿಕೊಂಡಿದ್ದಾರೆ, 93 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಪ್ರಕರಣ: 6,00,430 ಸಾವಿನ ಸಂಖ್ಯೆ : 5,905 ಸಕ್ರಿಯ ಪ್ರಕರಣ : 85,750

ಪಂಜಾಬ್ ನಲ್ಲಿ 6,798 ಹೊಸ ಪ್ರಕರಣಗಳು ಪತ್ತೆಯಾಗಿದ್ದು,, 6,016 ಚೇತರಿಸಿದ್ದಾರೆ 157 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು : 60,709 ಚೇತರಿಸಿಕೊಂಡವರು: 3,21,861 ಸಾವಿನ ಸಂಖ್ಯೆ: 9,472

ಹಿಮಾಚಲ ಪ್ರದೇಶದಲ್ಲಿ 2630 ಹೊಸ ಪ್ರಕರಣಗಳು ಪತ್ತೆಯಾಗಿದ್ದು 1526 ಮಂದಿ ಚೇತರಿಸಿಕೊಂಡಿದ್ದಾರೆ. 43 ಮಂದಿ ಸಾವಿಗೀಡಾಗಿದ್ದಾರೆ .

ಇದನ್ನೂ ಓದಿ: Explainer: ಏನಿದು ವೈದ್ಯಕೀಯ ಆಮ್ಲಜನಕ? ಇದನ್ನು ಉತ್ಪಾದಿಸುವುದು ಹೇಗೆ?

Published On - 10:37 am, Tue, 4 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್