Coronavirus India Update: ಕಳೆದ 24 ಗಂಟೆಗಳಲ್ಲಿ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಕೊವಿಡ್ ಪ್ರಕರಣಗಳು ಪತ್ತೆ, 1,038 ಮಂದಿ ಸಾವು

Covid 19 in India: ಬುಧವಾರ ಭಾರತದಲ್ಲಿ ಪತ್ತೆಯಾದ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 2,00,739 ಆಗಿದ್ದು, 1,038 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಒಟ್ಟು ಸೋಂಕಿತರ ಸಂಖ್ಯೆ 1,40,74,564 (1.4 ಕೋಟಿಗೆ) ತಲುಪಿದ್ದು ಈವರೆಗೆ ಸಾವಿಗೀಡಾದವ ಸಂಖ್ಯೆ 1,73,123 ಆಗಿದೆ.

Coronavirus India Update: ಕಳೆದ 24 ಗಂಟೆಗಳಲ್ಲಿ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಕೊವಿಡ್ ಪ್ರಕರಣಗಳು ಪತ್ತೆ, 1,038 ಮಂದಿ ಸಾವು
ಕೊಲ್ಕತ್ತಾದಲ್ಲಿ ಮಾಸ್ಕ್ ಧರಿಸದವರಿಗೆ ಮಾಸ್ಕ್ ಧರಿಸಲು ಆದೇಶಿಸುತ್ತಿರುವ ಪೊಲೀಸ್
Follow us
|

Updated on:Apr 15, 2021 | 10:58 AM

ದೆಹಲಿ: ದೇಶದಲ್ಲಿ ಕೊವಿಡ್ ಎರಡನೇ ಅಲೆ ಪರಿಣಾಮ ಪ್ರತಿದಿನ ಕೊವಿಡ್ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಒಂದು ವಾರಗಳಿಂದ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕಿಂತ ಏರಿಕೆ ಆಗುತ್ತಲೆ ಇದ್ದು, ಕಳೆದ 24 ಗಂಟೆಗಳಲ್ಲಿ ಇದು ಎರಡು ಲಕ್ಷ ದಾಟಿದೆ. ಬುಧವಾರ ದೇಶದಲ್ಲಿ ಪತ್ತೆಯಾದ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 2,00,739 ಆಗಿದ್ದು, 1,038 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಒಟ್ಟು ಸೋಂಕಿತರ ಸಂಖ್ಯೆ 1,40,74,564 (1.4 ಕೋಟಿಗೆ) ತಲುಪಿದ್ದು ಈವರೆಗೆ ಸಾವಿಗೀಡಾದವ ಸಂಖ್ಯೆ 1,73,123 ಆಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,71,877 ಆಗಿದ್ದು, 1,24,29,564 ಮಂದಿ ಚೇತರಿಸಿಕೊಂಡಿದ್ದಾರೆ. 11,44,93,238 ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಜಗತ್ತಿನಲ್ಲಿ ಅತೀ ಹೆಚ್ಚು ಕೊವಿಡ್ ಸೋಂಕಿತರಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಏಪ್ರಿಲ್ 2ರ ನಂತರ ದೇಶದಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು ಸೋಂಕು ನಿಯಂತ್ರಣಕ್ಕಾಗಿ ವಿವಿಧ ರಾಜ್ಯಗಳು ಕಠಿಣ ನಿರ್ಬಂಧ ಕೈಗೊಂಡಿವೆ. ಆದಾಗ್ಯೂ ಶಿಕ್ಷಣ ಸಚಿವಾಲ.ವು ಬುಧವಾರ ಸಿಬಿಎಸ್ಇ 12 ತರಗತಿ ಪರೀಕ್ಷೆಯನ್ನು ಮುಂದೂಡಿದ್ದು 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ. ದೇಶದಲ್ಲಿನ ಪರಿಸ್ಥಿತಿ ಪರಿಶೀಲಿಸಿದ ನಂತರ 12 ತರಗತಿ ಪರೀಕ್ಷೆ ಬಗ್ಗೆ ಜೂನ್ 1ರಂದು ಪರೀಕ್ಷೆ ದಿನಾಂಕಗಳನ್ನು ಘೋಷಿಸಲಿದೆ. ದೇಶದಾದ್ಯಂತ 21.5 ಲಕ್ಷ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆಯಲಿದ್ದು, 12 ತರಗತಿ ಪರೀಕ್ಷೆ ಬರೆಯುವ 14 ಲಕ್ಷ ವಿದ್ಯಾರ್ಥಿಗಳಿದ್ದಾರೆ.

ಕುಂಭ ಮೇಳದಲ್ಲಿ ಶಾಹಿ ಸ್ನಾನ ಮಾಡಿದ್ದು 13.5 ಲಕ್ಷ ದೇಶದಾದ್ಯಂತ ಕೊವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿರುವಾಗಲೇ ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬುಧವಾರ 13.5 ಲಕ್ಷ ಭಕ್ತರು ಗಂಗಾ ನದಿ ಘಾಟ್ ನಲ್ಲಿ ಶಾಹಿ ಸ್ನಾನ ಮಾಡಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. ಕುಂಭ ಮೇಳದಲ್ಲಿ ಭಾಗವಹಿಸುವವರಿಗೆ ನೆಗೆಟಿವ್ ಆರ್​ಟಿಪಿಸಿಆರ್ ಸರ್ಟಿಫಿಕೇಟ್ ಕಡ್ಡಾಯ ಮಾಡಿದ್ದು ಅಗತ್ಯ ಸುರಕ್ಷಾ ಕ್ರಮಗಳನ್ನು ಸ್ವೀಕರಿಸಿದ್ದೇವೆ ಎಂದು ಕುಂಭ ಮೇಳದ ಆಯೋಜಕರು ಹೇಳುತ್ತಾರೆ. ಆದರೆ ಅಲ್ಲಿ ಮಾಸ್ಕ್ , ಥರ್ಮಲ್ ಸ್ಕ್ರೀನಿಂಗ್, ಸಾಮಾಜಿಕ ಅಂತರ ಯಾವುದೂ ಕಂಡು ಬರಲಿಲ್ಲ. ಇಷ್ಟೊಂದು ಜನರು ಸೇರಿರುವಾಗ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ ಎಂದು ಪೊಲೀಸರು ಹೇಳಿದ್ದರು. 12 ವರ್ಷಕ್ಕೊಮ್ಮೆ ಕುಂಭ ಮೇಳ ನಡೆಯುತ್ತದೆ, ಹಾಗಾಗಿ ಇದರಲ್ಲಿ ಭಾಗವಹಿಸಲು ಲಕ್ಷೋಪಲಕ್ಷ ಜನರು ಆಗಮಿಸಿದ್ದಾರೆ.

ನಂಬಿಕೆ ಎಲ್ಲದಕ್ಕಿಂತಲೂ ದೊಡ್ಡದು, ನಾನು ದೇವರನ್ನು ನಂಬುತ್ತೇನೆ. ಶುಭದಿನದಂದು ಪವಿತ್ರ ಸ್ನಾನ ಮಾಡುವ ಅವಕಾಶವನ್ನು ನಾನು ಯಾಕೆ ಕಳೆದುಕೊಳ್ಳಲಿ ಎಂದು ಹರಿದ್ವಾರಕ್ಕೆ ಬಂದ ವಿಕಿ ತ್ಯಾಗಿ ಎಂಬ ಭಕ್ತರೊಬ್ಬರು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ರಾಜಸ್ಥಾನದಲ್ಲಿ ಕರ್ಫ್ಯೂ ಕೊವಿಡ್ ನಿಯಂತ್ರಣಕ್ಕಾಗಿ ರಾಜಸ್ಥಾನದಲ್ಲಿ ಸಂಜೆ 6ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಕಳೆದ ವಾರ ನಗರದ 10 ಜಿಲ್ಲೆಗಳಲ್ಲಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ವರೆಗೆ, ಉದಯ್ ಪುರ್ ನಲ್ಲಿ ಸಂಜೆ 6ರಿಂದ ಬೆಳಗ್ಗೆ 6 ವರೆಗೆ ಕರ್ಫ್ಯೂ ಘೋಷಿಸಲಾಗಿತ್ತು. ಬುಧವಾರ ಈ ನಿಯಮವನ್ನು ಪರಿಷ್ಕರಿಸಿದ ಸರ್ಕಾರ ಎಲ್ಲ ಜಿಲ್ಲೆಗಳಲ್ಲಿಯೂ ಸಂಜೆ 6ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ ಎಂದು ಹೇಳಿದೆ.

ಇದನ್ನೂ ಓದಿ: Corona 2nd Wave ಕೊರೊನಾ 2ನೇ ಅಲೆ ಅಬ್ಬರ.. ಒಂದೇ ದಿನದಲ್ಲಿ 1 ಲಕ್ಷ 99 ಸಾವಿರ ಕೇಸ್ ಪತ್ತೆ

ಕೊವಿಡ್ ಕಾಲದಲ್ಲಿ ಕುಂಭ ಮೇಳ: ಈ ಹಿಂದೆಯೂ ಸೋಂಕು ಹರಡುವಿಕೆಗೆ ಕಾರಣವಾಗಿತ್ತು ಧಾರ್ಮಿಕ ಆಚರಣೆ

(Coronavirus India reports over 2 lakh fresh Covid19 cases 1038 deaths in 24 hours)

Published On - 10:41 am, Thu, 15 April 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್