AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಆತಂಕ; ಅಮರಾವತಿ ಜಿಲ್ಲೆಯಲ್ಲಿ ಲಾಕ್​ಡೌನ್, ಅಕೋಲದಲ್ಲಿ ನಿರ್ಬಂಧ

ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಉದಾಸೀನ ತೋರಿದರೆ ಮತ್ತೊಮ್ಮೆ ಲಾಕ್​ಡೌನ್ ಹೇರಬೇಕಾಗಬಹುದು ಎಂಬ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಹೊರಬಿದ್ದ ಬೆನ್ನಿಗೇ ಅಮರಾವತಿ ಲಾಕ್​ಡೌನ್​ ಆದೇಶವೂ ಪ್ರಕಟವಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಆತಂಕ; ಅಮರಾವತಿ ಜಿಲ್ಲೆಯಲ್ಲಿ ಲಾಕ್​ಡೌನ್, ಅಕೋಲದಲ್ಲಿ ನಿರ್ಬಂಧ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on:Feb 18, 2021 | 8:31 PM

Share

ನಾಗಪುರ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾದ ಕಾರಣ ಫೆ.20ರ ರಾತ್ರಿ 8ರಿಂದ ಫೆ.22ರ ಬೆಳಿಗ್ಗೆ 7 ಗಂಟೆಯವರೆಗೂ ಕಟ್ಟುನಿಟ್ಟಿನ ಲಾಕ್​ಡೌನ್ ಘೋಷಿಸಲಾಗಿದೆ. ಶನಿವಾರ ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ಮಾರುಕಟ್ಟೆಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ದಿಲೀಪ್ ರಾನ್​ಮಲೆ ಹೇಳಿದ್ದಾರೆ.

ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಉದಾಸೀನ ತೋರಿದರೆ ಮತ್ತೊಮ್ಮೆ ಲಾಕ್​ಡೌನ್ ಹೇರಬೇಕಾಗಬಹುದು ಎಂಬ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಹೊರಬಿದ್ದ ಬೆನ್ನಿಗೇ ಅಮರಾವತಿ ಲಾಕ್​ಡೌನ್​ ಆದೇಶವೂ ಪ್ರಕಟವಾಗಿದೆ. ಮಹಾರಾಷ್ಟ್ರದ ಅಮರಾವತಿ, ಯವತ್ಮಾಳ, ಅಕೋಲ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣ ಕಳೆದ ಕೆಲದಿನಗಳಿಂದ ಹೆಚ್ಚಾಗುತ್ತಿದೆ. ಅಮರಾವತಿಯಲ್ಲಿ ಸೋಂಕು ಹರಡುತ್ತಿರುವ ವೇಗ ಅಧಿಕಾರಿಗಳಲ್ಲಿ ಆತಂಕ ಉಂಟುಮಾಡಿದೆ.

ಎರಡು ದಿನಗಳ ಹಿಂದಷ್ಟೇ ಅಮರಾವತಿಯಲ್ಲಿ ಜಿಲ್ಲಾಡಳಿತ ರಾತ್ರಿ ಕರ್ಫ್ಯೂ ವಿಧಿಸಿತ್ತು. ಅಕೋಲಾದಲ್ಲಿ ತಪಾಸಣೆ ಮಾಡಿದ ಶೇ 40ರಷ್ಟು ಮಾದರಿಗಳು ಪಾಸಿಟಿವ್ ಬಂದಿವೆ. ಹೀಗಾಗಿ ಅಲ್ಲಿಯೂ ಫೆಬ್ರುವರಿ 28ರವರೆಗೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಅಕೋಲದಲ್ಲಿ ನಿರ್ಬಂಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ. ಧಾರ್ಮಿಕ ಮೆರವಣಿಗೆಗಳು, ಹಬ್ಬ, ಸಾರ್ವಜನಿಕ ಸಮಾರಂಭ ಮತ್ತು ಮದುವೆಗಳಲ್ಲಿ ಕೇವಲ 50 ಜನರು ಪಾಲ್ಗೊಳ್ಳಬಹುದು ಎಂದು ಸೂಚಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಕೋಚಿಂಗ್​ ಕೇಂದ್ರಗಳನ್ನು ತೆರೆಯದಂತೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಕೊವಿಡ್​-19 ಸೋಂಕು ಪತ್ತೆ ಹಚ್ಚಲು ನಾಯಿಗಳಿಗೆ ತರಬೇತಿ ನೀಡಿದ ಭಾರತೀಯ ಸೇನೆ

ಇದನ್ನೂ ಓದಿ: ಬೆಂಗಳೂರಿನ ವಸತಿ ಸಮುಚ್ಛಯದಲ್ಲಿ ಪಾರ್ಟಿ ನಡೆದ ನಂತರ 100ಕ್ಕಿಂತಲೂ ಹೆಚ್ಚು ಮಂದಿಗೆ ಕೊವಿಡ್

Published On - 7:54 pm, Thu, 18 February 21

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ