AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಆತಂಕ; ಅಮರಾವತಿ ಜಿಲ್ಲೆಯಲ್ಲಿ ಲಾಕ್​ಡೌನ್, ಅಕೋಲದಲ್ಲಿ ನಿರ್ಬಂಧ

ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಉದಾಸೀನ ತೋರಿದರೆ ಮತ್ತೊಮ್ಮೆ ಲಾಕ್​ಡೌನ್ ಹೇರಬೇಕಾಗಬಹುದು ಎಂಬ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಹೊರಬಿದ್ದ ಬೆನ್ನಿಗೇ ಅಮರಾವತಿ ಲಾಕ್​ಡೌನ್​ ಆದೇಶವೂ ಪ್ರಕಟವಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಆತಂಕ; ಅಮರಾವತಿ ಜಿಲ್ಲೆಯಲ್ಲಿ ಲಾಕ್​ಡೌನ್, ಅಕೋಲದಲ್ಲಿ ನಿರ್ಬಂಧ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Feb 18, 2021 | 8:31 PM

ನಾಗಪುರ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾದ ಕಾರಣ ಫೆ.20ರ ರಾತ್ರಿ 8ರಿಂದ ಫೆ.22ರ ಬೆಳಿಗ್ಗೆ 7 ಗಂಟೆಯವರೆಗೂ ಕಟ್ಟುನಿಟ್ಟಿನ ಲಾಕ್​ಡೌನ್ ಘೋಷಿಸಲಾಗಿದೆ. ಶನಿವಾರ ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ಮಾರುಕಟ್ಟೆಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ದಿಲೀಪ್ ರಾನ್​ಮಲೆ ಹೇಳಿದ್ದಾರೆ.

ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಉದಾಸೀನ ತೋರಿದರೆ ಮತ್ತೊಮ್ಮೆ ಲಾಕ್​ಡೌನ್ ಹೇರಬೇಕಾಗಬಹುದು ಎಂಬ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಹೊರಬಿದ್ದ ಬೆನ್ನಿಗೇ ಅಮರಾವತಿ ಲಾಕ್​ಡೌನ್​ ಆದೇಶವೂ ಪ್ರಕಟವಾಗಿದೆ. ಮಹಾರಾಷ್ಟ್ರದ ಅಮರಾವತಿ, ಯವತ್ಮಾಳ, ಅಕೋಲ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣ ಕಳೆದ ಕೆಲದಿನಗಳಿಂದ ಹೆಚ್ಚಾಗುತ್ತಿದೆ. ಅಮರಾವತಿಯಲ್ಲಿ ಸೋಂಕು ಹರಡುತ್ತಿರುವ ವೇಗ ಅಧಿಕಾರಿಗಳಲ್ಲಿ ಆತಂಕ ಉಂಟುಮಾಡಿದೆ.

ಎರಡು ದಿನಗಳ ಹಿಂದಷ್ಟೇ ಅಮರಾವತಿಯಲ್ಲಿ ಜಿಲ್ಲಾಡಳಿತ ರಾತ್ರಿ ಕರ್ಫ್ಯೂ ವಿಧಿಸಿತ್ತು. ಅಕೋಲಾದಲ್ಲಿ ತಪಾಸಣೆ ಮಾಡಿದ ಶೇ 40ರಷ್ಟು ಮಾದರಿಗಳು ಪಾಸಿಟಿವ್ ಬಂದಿವೆ. ಹೀಗಾಗಿ ಅಲ್ಲಿಯೂ ಫೆಬ್ರುವರಿ 28ರವರೆಗೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಅಕೋಲದಲ್ಲಿ ನಿರ್ಬಂಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ. ಧಾರ್ಮಿಕ ಮೆರವಣಿಗೆಗಳು, ಹಬ್ಬ, ಸಾರ್ವಜನಿಕ ಸಮಾರಂಭ ಮತ್ತು ಮದುವೆಗಳಲ್ಲಿ ಕೇವಲ 50 ಜನರು ಪಾಲ್ಗೊಳ್ಳಬಹುದು ಎಂದು ಸೂಚಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಕೋಚಿಂಗ್​ ಕೇಂದ್ರಗಳನ್ನು ತೆರೆಯದಂತೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಕೊವಿಡ್​-19 ಸೋಂಕು ಪತ್ತೆ ಹಚ್ಚಲು ನಾಯಿಗಳಿಗೆ ತರಬೇತಿ ನೀಡಿದ ಭಾರತೀಯ ಸೇನೆ

ಇದನ್ನೂ ಓದಿ: ಬೆಂಗಳೂರಿನ ವಸತಿ ಸಮುಚ್ಛಯದಲ್ಲಿ ಪಾರ್ಟಿ ನಡೆದ ನಂತರ 100ಕ್ಕಿಂತಲೂ ಹೆಚ್ಚು ಮಂದಿಗೆ ಕೊವಿಡ್

Published On - 7:54 pm, Thu, 18 February 21

ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್