AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಭಾರತದಲ್ಲಿ ಕೊರೊನಾ ಸೋಂಕು ಏರಿಕೆ; 17073 ಮಂದಿಗೆ ಹೊಸದಾಗಿ ಸೋಂಕು, ಒಂದೇ ದಿನದಲ್ಲಿ ಶೇ 45ರಷ್ಟು ಹೆಚ್ಚಳ

ಭಾರತದ ವಿವಿಧ ರಾಜ್ಯಗಳಲ್ಲಿ ಸೋಮವಾರ (ಜೂನ್ 27) ಒಟ್ಟು 17,073 ಮಂದಿಯಲ್ಲಿ ಹೊಸದಾಗಿ ಸೋಂಕು (Covid-19 ದೃಢಪಟ್ಟಿದೆ.

Coronavirus: ಭಾರತದಲ್ಲಿ ಕೊರೊನಾ ಸೋಂಕು ಏರಿಕೆ; 17073 ಮಂದಿಗೆ ಹೊಸದಾಗಿ ಸೋಂಕು, ಒಂದೇ ದಿನದಲ್ಲಿ ಶೇ 45ರಷ್ಟು ಹೆಚ್ಚಳ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 27, 2022 | 10:14 AM

ದೆಹಲಿ: ಭಾರತದಲ್ಲಿ ಕೊವಿಡ್-19 (Coronavirus) ಸೋಂಕು ಪ್ರಕರಣಗಳು ಏಕಾಏಕಿ ಹೆಚ್ಚಾಗಿವೆ. ಭಾರತದ ವಿವಿಧ ರಾಜ್ಯಗಳಲ್ಲಿ ಸೋಮವಾರ (ಜೂನ್ 27) ಒಟ್ಟು 17,073 ಮಂದಿಯಲ್ಲಿ ಹೊಸದಾಗಿ ಸೋಂಕು (Covid-19 ದೃಢಪಟ್ಟಿದೆ. ದೇಶದಲ್ಲಿ ಈವರೆಗೆ ಒಟ್ಟು 4,34,07,046 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ 94,420 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಭಾನುವಾರ ಭಾರತದಲ್ಲಿ 11,739 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು.

ದೇಶದ ವಿವಿಧೆಡೆ ಭಾನುವಾರ ಒಟ್ಟು 21 ಮಂದಿ ಕೊವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರ ಒಟ್ಟು ಸಂಖ್ಯೆಯು 5,25,020ಕ್ಕೆ ಏರಿಕೆಯಾಗಿದೆ. ದೇಶದ ಒಟ್ಟು ಚೇತರಿಕೆ ಪ್ರಮಾಣವು ಶೇ 98.57 ಇದೆ. ದೈನಂದಿನ ಪಾಸಿಟಿವಿಟಿ ಸರಾಸರಿಯು ಶೇ 5.62 ಇದೆ. ವಾರದ ಸರಾಸರಿ ಪಾಸಿಟಿವಿಟಿ ಪ್ರಮಾಣವು ಶೇ 3.39 ಇದೆ. ಸೋಂಕಿನಿಂದ ಸಾವನ್ನಪ್ಪುವ ಸಂಖ್ಯೆಯ ಸರಾಸರಿ ಶೇ 1.21 ಇದೆ. ಚೇತರಿಸಿಕೊಂಡಿರುವವರ ಒಟ್ಟು ಸಂಖ್ಯೆಯು 4,27,87,606ಕ್ಕೆ ಮುಟ್ಟಿದೆ. ದೇಶದಲ್ಲಿ ಈವರೆಗೆ 197.11 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

ಕರ್ನಾಟಕದಲ್ಲಿ ಒಮಿಕ್ರಾನ್ ಉಪತಳಿ ಪತ್ತೆ

ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳ (Coronavirus) ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಒಮಿಕ್ರಾನ್ (Omicron)​ ರೂಪಾಂತರಿಯ ಉಪತಳಿ ಎನಿಸಿರುವ BA.3, BA.4, BA.5 ವೈರಾಣುಗಳು ಪತ್ತೆಯಾಗಿವೆ. ಜೂನ್​ 2ರಿಂದ 9ರ ನಡುವೆ ಸಂಗ್ರಹಿಸಿದ್ದ 44 ಮಾದರಿಗಳ ಪೈಕಿ 38ರಲ್ಲಿ BA.5 ಉಪತಳಿ ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ BA.2 ಉಪತಳಿ ಹೆಚ್ಚಾಗಿ ವ್ಯಾಪಿಸುತ್ತಿದ್ದು, ಶೇ 82ರಷ್ಟು ಸೋಂಕು ಇದೇ ಉಪತಳಿಯಿಂದ ಹರಡುತ್ತಿದೆ. ಹೊಸದಾಗಿ ಪತ್ತೆಯಾಗಿರುವ ತಳಿಗಳ ಬಗ್ಗೆ ಆರೋಗ್ಯ ಇಲಾಖೆ ನಿಗಾವಹಿಸಿದೆ. ಈ ಹೊಸತಳಿಗಳಿಂದ ಕೊರೊನಾ 4ನೇ ಅಲೆ ವ್ಯಾಪಿಸಬಹುದು ಎಂಬ ಆತಂಕ ಕಾಣಿಸಿಕೊಂಡಿದೆ.

ಮೇ ಮತ್ತು ಜೂನ್ ತಿಂಗಳಲ್ಲಿ ಪತ್ತೆಯಾದ ಕೊರೊನಾ ರೂಪಾಂತರಗಳ ವಿವರ ಹೀಗಿದೆ… ಡೆಲ್ಟಾ- 3, ಇತರೆ- 14, ಬಿಎ1.1.529- 189, ಬಿಎ1- 1, ಬಿಎ2- 1964, ಬಿಎ3- 2, ಬಿಎ4- 4, ಬಿಎ5- 38, ಒಟ್ಟು ಪರೀಕ್ಷೆಗೆ ಒಳಪಡಿಸಿದ ಸ್ಯಾಂಪಲ್​ಗಳು- 2215.

Published On - 10:14 am, Mon, 27 June 22

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ