AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಭಾರತದಲ್ಲಿ ಕೊರೊನಾ ಸೋಂಕು ಏರಿಕೆ; 17073 ಮಂದಿಗೆ ಹೊಸದಾಗಿ ಸೋಂಕು, ಒಂದೇ ದಿನದಲ್ಲಿ ಶೇ 45ರಷ್ಟು ಹೆಚ್ಚಳ

ಭಾರತದ ವಿವಿಧ ರಾಜ್ಯಗಳಲ್ಲಿ ಸೋಮವಾರ (ಜೂನ್ 27) ಒಟ್ಟು 17,073 ಮಂದಿಯಲ್ಲಿ ಹೊಸದಾಗಿ ಸೋಂಕು (Covid-19 ದೃಢಪಟ್ಟಿದೆ.

Coronavirus: ಭಾರತದಲ್ಲಿ ಕೊರೊನಾ ಸೋಂಕು ಏರಿಕೆ; 17073 ಮಂದಿಗೆ ಹೊಸದಾಗಿ ಸೋಂಕು, ಒಂದೇ ದಿನದಲ್ಲಿ ಶೇ 45ರಷ್ಟು ಹೆಚ್ಚಳ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 27, 2022 | 10:14 AM

Share

ದೆಹಲಿ: ಭಾರತದಲ್ಲಿ ಕೊವಿಡ್-19 (Coronavirus) ಸೋಂಕು ಪ್ರಕರಣಗಳು ಏಕಾಏಕಿ ಹೆಚ್ಚಾಗಿವೆ. ಭಾರತದ ವಿವಿಧ ರಾಜ್ಯಗಳಲ್ಲಿ ಸೋಮವಾರ (ಜೂನ್ 27) ಒಟ್ಟು 17,073 ಮಂದಿಯಲ್ಲಿ ಹೊಸದಾಗಿ ಸೋಂಕು (Covid-19 ದೃಢಪಟ್ಟಿದೆ. ದೇಶದಲ್ಲಿ ಈವರೆಗೆ ಒಟ್ಟು 4,34,07,046 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ 94,420 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಭಾನುವಾರ ಭಾರತದಲ್ಲಿ 11,739 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು.

ದೇಶದ ವಿವಿಧೆಡೆ ಭಾನುವಾರ ಒಟ್ಟು 21 ಮಂದಿ ಕೊವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರ ಒಟ್ಟು ಸಂಖ್ಯೆಯು 5,25,020ಕ್ಕೆ ಏರಿಕೆಯಾಗಿದೆ. ದೇಶದ ಒಟ್ಟು ಚೇತರಿಕೆ ಪ್ರಮಾಣವು ಶೇ 98.57 ಇದೆ. ದೈನಂದಿನ ಪಾಸಿಟಿವಿಟಿ ಸರಾಸರಿಯು ಶೇ 5.62 ಇದೆ. ವಾರದ ಸರಾಸರಿ ಪಾಸಿಟಿವಿಟಿ ಪ್ರಮಾಣವು ಶೇ 3.39 ಇದೆ. ಸೋಂಕಿನಿಂದ ಸಾವನ್ನಪ್ಪುವ ಸಂಖ್ಯೆಯ ಸರಾಸರಿ ಶೇ 1.21 ಇದೆ. ಚೇತರಿಸಿಕೊಂಡಿರುವವರ ಒಟ್ಟು ಸಂಖ್ಯೆಯು 4,27,87,606ಕ್ಕೆ ಮುಟ್ಟಿದೆ. ದೇಶದಲ್ಲಿ ಈವರೆಗೆ 197.11 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

ಕರ್ನಾಟಕದಲ್ಲಿ ಒಮಿಕ್ರಾನ್ ಉಪತಳಿ ಪತ್ತೆ

ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳ (Coronavirus) ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಒಮಿಕ್ರಾನ್ (Omicron)​ ರೂಪಾಂತರಿಯ ಉಪತಳಿ ಎನಿಸಿರುವ BA.3, BA.4, BA.5 ವೈರಾಣುಗಳು ಪತ್ತೆಯಾಗಿವೆ. ಜೂನ್​ 2ರಿಂದ 9ರ ನಡುವೆ ಸಂಗ್ರಹಿಸಿದ್ದ 44 ಮಾದರಿಗಳ ಪೈಕಿ 38ರಲ್ಲಿ BA.5 ಉಪತಳಿ ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ BA.2 ಉಪತಳಿ ಹೆಚ್ಚಾಗಿ ವ್ಯಾಪಿಸುತ್ತಿದ್ದು, ಶೇ 82ರಷ್ಟು ಸೋಂಕು ಇದೇ ಉಪತಳಿಯಿಂದ ಹರಡುತ್ತಿದೆ. ಹೊಸದಾಗಿ ಪತ್ತೆಯಾಗಿರುವ ತಳಿಗಳ ಬಗ್ಗೆ ಆರೋಗ್ಯ ಇಲಾಖೆ ನಿಗಾವಹಿಸಿದೆ. ಈ ಹೊಸತಳಿಗಳಿಂದ ಕೊರೊನಾ 4ನೇ ಅಲೆ ವ್ಯಾಪಿಸಬಹುದು ಎಂಬ ಆತಂಕ ಕಾಣಿಸಿಕೊಂಡಿದೆ.

ಮೇ ಮತ್ತು ಜೂನ್ ತಿಂಗಳಲ್ಲಿ ಪತ್ತೆಯಾದ ಕೊರೊನಾ ರೂಪಾಂತರಗಳ ವಿವರ ಹೀಗಿದೆ… ಡೆಲ್ಟಾ- 3, ಇತರೆ- 14, ಬಿಎ1.1.529- 189, ಬಿಎ1- 1, ಬಿಎ2- 1964, ಬಿಎ3- 2, ಬಿಎ4- 4, ಬಿಎ5- 38, ಒಟ್ಟು ಪರೀಕ್ಷೆಗೆ ಒಳಪಡಿಸಿದ ಸ್ಯಾಂಪಲ್​ಗಳು- 2215.

Published On - 10:14 am, Mon, 27 June 22

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು