AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Elections 2021: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರ‍್ಯಾಲಿಗಳಿಂದ ಕೊರೊನಾ ಪಾಸಿಟಿವ್ ದರ ಹೆಚ್ಚಳ!

ಪಶ್ಚಿಮ ಬಂಗಾಳದಲ್ಲಿ ಯಾವುದೇ ರ‍್ಯಾಲಿ, ಪಾದಯಾತ್ರೆ ಅಥವಾ ರೋಡ್​ ಶೋಗಳು ನಡೆಯುವಂತಿಲ್ಲ ಎಂದು ಚುನಾವಣಾ ಆಯೋಗವು ಏಪ್ರಿಲ್ 22ಕ್ಕೆ ಸಂಜೆ ಘೋಷಿಸಿದೆ. ಕೊರೊನಾ ವಿಚಾರದಲ್ಲಿ ಚುನಾವಣಾ ಆಯೋಗದ ವರ್ತನೆಯನ್ನು ಕಲ್ಕತ್ತಾ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ತರುವಾಯ ಆಯೋಗ ಈ ಆದೇಶ ಹೊರಡಿಸಿತ್ತು.

West Bengal Elections 2021: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರ‍್ಯಾಲಿಗಳಿಂದ ಕೊರೊನಾ ಪಾಸಿಟಿವ್ ದರ ಹೆಚ್ಚಳ!
ಪ್ರಾತಿನಿಧಿಕ ಚಿತ್ರ
sandhya thejappa
|

Updated on:Apr 24, 2021 | 7:59 AM

Share

ಕೋಲ್ಕತ್ತಾ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭಾ ಚುನಾವಣಾ ರ‍್ಯಾಲಿಗಳಿಂದ ಕೊರೊನಾ ಪಾಸಿಟಿವ್ ದರ ಹೆಚ್ಚಳವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್ 23 ರಂದು ಕೊರೊನಾ ಪಾಸಿಟಿವ್ ದರ ಶೇ.25ಕ್ಕೆ ಏರಿದೆ. ಬಹುತೇಕ 75 ಸಾವಿರಕ್ಕೆ ಕೊರೊನಾ ಸಕ್ರಿಯ ಪ್ರಕರಣಗಳು ಏರಿಕೆಯಾಗಿದೆ.

ಚುನಾವಣಾ ಆಯೋಗದ ಘೋಷಣೆ ಪಶ್ಚಿಮ ಬಂಗಾಳದಲ್ಲಿ ಯಾವುದೇ ರ‍್ಯಾಲಿ, ಪಾದಯಾತ್ರೆ ಅಥವಾ ರೋಡ್​ ಶೋಗಳು ನಡೆಯುವಂತಿಲ್ಲ ಎಂದು ಚುನಾವಣಾ ಆಯೋಗವು ಏಪ್ರಿಲ್ 22ಕ್ಕೆ ಸಂಜೆ ಘೋಷಿಸಿದೆ. ಕೊರೊನಾ ವಿಚಾರದಲ್ಲಿ ಚುನಾವಣಾ ಆಯೋಗದ ವರ್ತನೆಯನ್ನು ಕಲ್ಕತ್ತಾ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ತರುವಾಯ ಆಯೋಗ ಈ ಆದೇಶ ಹೊರಡಿಸಿತ್ತು. ರ‍್ಯಾಲಿ ಮತ್ತು ಪಾದಯಾತ್ರೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಈ ಹಿಂದೆ ನೀಡಿದ್ದ ಎಲ್ಲ ಆದೇಶ, ಅನುಮತಿಗಳು ಇದೀಗ ರದ್ದಾಗಲಿವೆ. ಯಾವುದೇ ಸಭೆಯಲ್ಲಿ 500 ಜನರಿಗಿಂತಲೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.

ಚುನಾವಣಾ ರ‍್ಯಾಲಿಗಳು ಕೊರೊನಾ ಸೋಂಕು ವೇಗವಾಗಿ ಹರಡಲು ಸೂಪರ್ ಸ್ಪ್ರೆಡರ್​ಗಳಾಗಿ ಕೆಲಸ ಮಾಡಬಲ್ಲವು ಎಂಬ ಆತಂಕ ವ್ಯಕ್ತವಾದ ಹಿನ್ನಲೆಯಲ್ಲಿ ಈ ಸಂಬಂಧ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಚುನಾವಣಾ ಪ್ರಚಾರದಿಂದ ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ಚುನಾವಣಾ ಆಯೋಗ ತೆಗೆದುಕೊಂಡ ಕ್ರಮಗಳನ್ನು ನಾಳೆಯೊಳಗೆ (ಏಪ್ರಿಲ್ 23) ತಿಳಿಸಬೇಕೆಂದು, ಕಾರ್ಯಪಾಲನಾ ವರದಿ ಸಲ್ಲಿಸಬೇಕೆಂದು ಸೂಚಿಸಿತ್ತು. ಒಂದು ವೇಳೆ ಚುನಾವಣಾ ಆಯೋಗವು ಈ ಸಂಬಂಧ ಕ್ರಮ ತೆಗೆದುಕೊಳ್ಳಲು ವಿಫಲವಾದರೆ, ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದು ನ್ಯಾಯಮೂರ್ತಿಗಳು ಕಟುನುಡಿಗಳಲ್ಲಿ ಹೇಳಿದ್ದರು.

ಇದನ್ನೂ ಓದಿ

ಕೊವಿಡ್-19 ಪಿಡುಗಿನ ಎರಡನೇ ಅಲೆ ಕೊನೆಗೊಂಡ ನಂತರ ಮೂರನೇ ಅಲೆ ಎದುರಿಸಲು ಸಿದ್ಧರಾಗಿರಬೇಕು: ಡಾ ವಿವೇಕ್ ಜವಳಿ

ರೆಮ್​ಡೆಸಿವಿರ್ ಇಂಜೆಕ್ಷನ್​ 25 ಸಾವಿರಕ್ಕೆ ಮಾರುತ್ತಿದ್ದ ಮೂವರ ಬಂಧನ

Coronavirus positive cases increased in West Bengal from election rally

Published On - 7:56 am, Sat, 24 April 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ