AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಆಯ್ತು, ಈಗ ಕರ್ನಾಟಕ ತಮಿಳುನಾಡಿನಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳು; ದಕ್ಷಿಣ ಕನ್ನಡಕ್ಕೆ ಆತಂಕ

Coronavirus: ಕರ್ನಾಟಕದಲ್ಲಿಯೂ ಸುಮಾರು 19 ದಿನಗಳ ನಂತರ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ 2 ಸಾವಿರದ ಗಡಿ ದಾಟಿದ್ದು, ಗುರುವಾರ 2,052ಸೋಂಕಿತರು ಪತ್ತೆಯಾಗಿದ್ದಾರೆ. ಬುಧವಾರದಂದು 1,531ರಷ್ಟಿದ್ದ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ 500ರಷ್ಟು ಹೆಚ್ಚಳ ಕಂಡಿದೆ.

ಕೇರಳ ಆಯ್ತು, ಈಗ ಕರ್ನಾಟಕ ತಮಿಳುನಾಡಿನಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳು; ದಕ್ಷಿಣ ಕನ್ನಡಕ್ಕೆ ಆತಂಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 30, 2021 | 10:59 AM

Share

ಬೆಂಗಳೂರು: ಕರ್ನಾಟಕದ ಪಕ್ಕದ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣಗಳು (Corona Cases) ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಪ್ರತಿನಿತ್ಯ ಸುಮಾರು 22 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದು, ದೇಶದಲ್ಲಿ ಒಟ್ಟಾರೆಯಾಗಿ ಕಾಣಸಿಗುತ್ತಿರುವ ಕೊರೊನಾ ಪ್ರಕರಣಗಳ ಅರ್ಧ ಪಾಲನ್ನು ಕೇರಳ (Kerala) ಭರಿಸುತ್ತಿದೆ ಎನ್ನುವುದು ಆತಂಕಕಾರಿಯಾಗಿ. ಹೊಸದಾಗಿ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವುದು ಮೂರನೇ ಅಲೆಗೆ (Covid 19 Third Wave) ನಾಂದಿಯೇ ಎನ್ನುವ ಅನುಮಾನವೂ ದಟ್ಟವಾಗಿದ್ದು, ಕೇರಳದ ಬೆನ್ನಲ್ಲೇ ನೆರೆಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲೂ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದೆ.

ಭಾರತದಲ್ಲಿ ಗುರುವಾರ (ಜುಲೈ 28ರಂದು) ಸುಮಾರು 45 ಸಾವಿರ ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದು, ಬರೋಬ್ಬರಿ 22 ದಿನಗಳ ನಂತರ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿರುವುದು ಮತ್ತೆ ಆತಂಕಕ್ಕೆ ಕಾರಣವಾಗಿದೆ. ಗುರುವಾರದಂದು 44,681 ಪ್ರಕರಣ ಹೊಸದಾಗಿ ದಾಖಲಾಗಿದ್ದು, ಜುಲೈ 7 ರ ನಂತರ ಇದೇ ಅತ್ಯಧಿಕವಾಗಿದೆ. ಹೀಗಾಗಿ ಸಂಭವನೀಯ ಮೂರನೇ ಅಲೆ ಆತಂಕ ಮೂಡಲಾರಂಭಿಸಿದ್ದು, ಮತ್ತೊಂದು ಅನಾಹುತ ದೇಶವನ್ನು ಕಾಡಲಿದೆಯಾ ಎಂದೆನಿಸುತ್ತಿದೆ.

ಕೇರಳ, ಕರ್ನಾಟಕ, ತಮಿಳುನಾಡು ರಾಜ್ಯಗಳ ಜತೆಗೆ ಮಹಾರಾಷ್ಟ್ರದಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಗುರುವಾರ 7,242 ಜನ ಸೋಂಕಿತರು ಪತ್ತೆಯಾಗುವ ಮೂಲಕ ಭಯ ಮೂಡಿಸಿದೆ. ಇತ್ತ ಕೇರಳದಲ್ಲಿ ಅದೇ ದಿನ 22,064 ಪ್ರಕರಣಗಳು ಹೊಸದಾಗಿ ಕಾಣಸಿಕ್ಕಿವೆ. ಹಾಗೆ ನೋಡಿದರೆ ಕಳೆದ ಮೂರು ದಿನಗಳಿಂದ ಇಡೀ ದೇಶದಲ್ಲಿ ಪತ್ತೆಯಾಗುವ ಕೊರೊನಾ ಪ್ರಕರಣಗಳ ಪಾಲಿನಲ್ಲಿ ಶೇ.50ಕ್ಕೂ ಅಧಿಕ ಸೋಂಕಿತರನ್ನು ದಾಖಲಿಸುತ್ತಿದ್ದ ಕೇರಳದಲ್ಲಿ ಗುರುವಾರ ಆ ಪ್ರಮಾಣ ಕೊಂಚ ಇಳಿಮುಖ ಕಂಡಿದೆ.

ಕರ್ನಾಟಕದಲ್ಲಿಯೂ ಸುಮಾರು 19 ದಿನಗಳ ನಂತರ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ 2 ಸಾವಿರದ ಗಡಿ ದಾಟಿದ್ದು, ಗುರುವಾರ 2,052ಸೋಂಕಿತರು ಪತ್ತೆಯಾಗಿದ್ದಾರೆ. ಬುಧವಾರದಂದು 1,531ರಷ್ಟಿದ್ದ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ 500ರಷ್ಟು ಹೆಚ್ಚಳ ಕಂಡಿದೆ. ಕೇರಳಕ್ಕೆ ಹೊಂದಿಕೊಂಡಂತಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಪಾಸಿಟಿವಿಟಿ ಪ್ರಮಾಣ ಏರುಗತಿಯಲ್ಲಿ ಸಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯನ್ನು ರೆಡ್​ ಜೋನ್​ ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದೆ. ಬೆಂಗಳೂರಿನಲ್ಲಿ ಬುಧವಾರ 376 ಪ್ರಕರಣಗಳು ಪತ್ತೆಯಾಗಿದ್ದು, ಗುರುವಾರದಂದು 505ಕ್ಕೆ ಏರಿಕೆಯಾಗಿದ್ದರೆ ದಕ್ಷಿಣ ಕನ್ನಡದಲ್ಲಿ 396 ಪ್ರಕರಣಗಳು ಹೊಸದಾಗಿ ಕಾಣಸಿಕ್ಕಿವೆ.

ತಮಿಳುನಾಡಿನಲ್ಲಿ ಬರೋಬ್ಬರಿ 69 ದಿನಗಳ ನಂತರ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಬುಧವಾರ 1,756ರಷ್ಟಿದ್ದ ಪ್ರಕರಣಗಳು ಗುರುವಾರದಂದು 1,859ಕ್ಕೆ ಏರಿಕೆಯಾಗಿವೆ. ಈಶಾನ್ಯ ರಾಜ್ಯಗಳಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವಂತೆ ಕಾಣುತ್ತಿದ್ದು ಮಿಜೋರಾಂನಲ್ಲಿ 1,100, ಮಣಿಪುರದಲ್ಲಿ 1,000 ಹಾಗೂ ಮೇಘಾಲಯದಲ್ಲಿ 731 ಪ್ರಕರಣಗಳು ಕಂಡುಬಂದಿವೆ. ಭಾರತದಲ್ಲಿ ಗುರುವಾರದಂದು ಒಟ್ಟು 557 ಕೊರೊನಾ ಸೋಂಕಿತರು ಮೃತರಾಗಿದ್ದು ಮಹಾರಾಷ್ಟ್ರದಲ್ಲಿ 190, ಕೇರಳದಲ್ಲಿ 128 ಸಾವು ದಾಖಲಾಗಿದೆ.

ಇದನ್ನೂ ಓದಿ: Kerala Lockdown: ಕೇರಳದಲ್ಲಿ ಕೊರೊನಾ ಮತ್ತೆ ಹೆಚ್ಚಳ; ವಾರಾಂತ್ಯದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಿದ ರಾಜ್ಯ ಸರ್ಕಾರ 

Explainer ಐಸಿಎಂಆರ್‌ ಸೆರೊ ಸಮೀಕ್ಷೆ: ಕೊರೊನಾವೈರಸ್ ವಿರುದ್ಧದ ಪ್ರತಿಕಾಯಗಳ ಬೆಳವಣಿಗೆ ಯಾವ ರಾಜ್ಯದ ಜನರಲ್ಲಿ ಎಷ್ಟೆಷ್ಟು?

(Coronavirus Third Wave fear After Kerala Covid 19 spike in Karnataka and Tamil Nadu)

Published On - 10:57 am, Fri, 30 July 21

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ