AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Updates: ಭಾರತದಲ್ಲಿ 11,793 ಹೊಸ ಕೊವಿಡ್ ಪ್ರಕರಣ ದಾಖಲು, 27 ಜನ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಕೊವಿಡ್ ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆಯಾಗಿದೆ.

Coronavirus Updates: ಭಾರತದಲ್ಲಿ 11,793 ಹೊಸ ಕೊವಿಡ್ ಪ್ರಕರಣ ದಾಖಲು, 27 ಜನ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 28, 2022 | 10:09 AM

Share

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೊರೊನಾವೈರಸ್ ಪ್ರಕರಣಗಳು (Coronavirus Cases) ದಾಖಲಾಗಿದ್ದು, ಒಟ್ಟು ಕೊವಿಡ್-19 ಪ್ರಕರಣಗಳ ಸಂಖ್ಯೆ 4,34,18,839ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ, ಸಕ್ರಿಯ ಕೊವಿಡ್ (Covid-19) ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ 27 ಜನ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 5,25,047ಕ್ಕೆ ಏರಿದೆ.

ಭಾರತದ ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ ಶೇ. 0.21 ಅನ್ನು ಒಳಗೊಂಡಿವೆ. ಆದರೆ, ರಾಷ್ಟ್ರೀಯ ಕೊವಿಡ್ ಚೇತರಿಕೆ ದರವು ಶೇ. 98.58ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದ ಅಡಿಯಲ್ಲಿ ಇದುವರೆಗೆ 197.31 ಕೋಟಿ ಡೋಸ್​ ಕೊವಿಡ್ ಲಸಿಕೆಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 9,486 ಚೇತರಿಕೆ ಪ್ರಕರಣಗಳು ದಾಖಲಾಗಿದ್ದು, ಒಟ್ಟು 4,27,97,092 ಜನರು ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: India Covid Updates: ಭಾರತದಲ್ಲಿ ಹೊಸದಾಗಿ 15,940 ಮಂದಿಗೆ ಕೊರೊನಾ ಸೋಂಕು, 20 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ 86.14 ಕೋಟಿ ಕೊವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 4,73,717 ಪರೀಕ್ಷೆಗಳನ್ನು ನಡೆಸಲಾಗಿದೆ.

24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ 2,280 ಪ್ರಕರಣಗಳ ಹೆಚ್ಚಳ ದಾಖಲಾಗಿದೆ. ದೈನಂದಿನ ಧನಾತ್ಮಕತೆಯ ದರವು ಶೇ.2.49ರಷ್ಟಿದ್ದರೆ ವಾರದ ಧನಾತ್ಮಕತೆಯ ದರವು ಶೇ.3.36ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ