AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ: ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ

ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ ನೀಡಲಾಗಿದೆ. ಕೋವಿನ್ ಪೋರ್ಟಲ್​ನಲ್ಲಿ ಹೆಸರು ನೋಂದಾಯಿಸಬಹುದಾಗಿದೆ.

ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ: ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ
ಕೊರೊನಾ ಲಸಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Mar 31, 2021 | 5:18 PM

Share

ದೆಹಲಿ: ದೇಶದಲ್ಲಿ ನಾಳೆಯಿಂದ (ಏಪ್ರಿಲ್ 1 ರಿಂದ ) 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಶುರುವಾಗಲಿದೆ. ಭಾರತ ಹಾಗೂ ಜಗತ್ತಿನಲ್ಲಿ ಕೊರೊನಾ ವೈರಸ್​ನ ಎರಡನೇ ಅಲೆ ಶುರುವಾಗುತ್ತಿದೆ. ಹೀಗಾಗಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಲಸಿಕೆ ಪಡೆಯ ಬಯಸುವವರು ಕೋವಿನ್ ಪೋರ್ಟಲ್​ನಲ್ಲಿ ತಮ್ಮ ಹೆಸರು ರಿಜಿಸ್ಟರ್ ಮಾಡಿಕೊಳ್ಳಬೇಕು.

ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ ಭಾರತದಲ್ಲಿ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ಕೊರೊನಾದ ಹೊಡೆತದಿಂದ ತಪ್ಪಿಸಿಕೊಳ್ಳಲು ಕೊರೊನಾ ಲಸಿಕೆಯೇ ರಾಮಬಾಣ. ಆದರೆ, ಲಸಿಕೆ ಲಭ್ಯವಿದ್ದರೂ, ಜನರು ಲಸಿಕೆ ಪಡೆಯಲು ಸ್ವಪ್ರೇರಣೆಯಿಂದ ಮುಂದೆ ಬರುತ್ತಿಲ್ಲ. ಇದುವರೆಗೂ ದೇಶದಲ್ಲಿ 45 ವರ್ಷ ಮೇಲ್ಪಟ್ಟ ಬೇರೆ ಬೇರೆ ರೋಗದಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಮೊದಲನೇ ಹಂತದಲ್ಲಿ, ದೇಶದಲ್ಲಿ ಜನವರಿ 16 ರಿಂದ, ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಬಳಿಕ ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರು, ರೋಗದಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಆದರೂ ಕೂಡ ದೇಶದಲ್ಲಿ ಮಾರ್ಚ್ 30ರ ಸಂಜೆ 7 ಗಂಟೆಯವರೆಗೂ 6.24 ಕೋಟಿ ಜನರು ಮಾತ್ರ ಕೊರೊನಾ ಲಸಿಕೆ ಪಡೆದಿದ್ದಾರೆ.

ದೇಶದಲ್ಲಿ ಹೆಚ್ಚಿನ ಜನರಿಗೆ ಲಸಿಕೆ ನೀಡಿ, ಕೊರೊನಾದಿಂದ ರಕ್ಷಣೆ ನೀಡಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶದಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ನಿರ್ಧರಿಸಿದೆ. ಈ ಬಗ್ಗೆ ಕೇಂದ್ರದ ಕ್ಯಾಬಿನೆಟ್ ಸಭೆಯಲ್ಲಿ ಹದಿನೈದು ದಿನದ ಹಿಂದೆಯೇ ಒಪ್ಪಿಗೆ ನೀಡಲಾಗಿದೆ. ನಾಳೆಯಿಂದ  ದೇಶಾದ್ಯಂತ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ವೈರಸ್ ವಿರುದ್ಧದ ಲಸಿಕೆ ನೀಡಲಾಗುತ್ತದೆ. 45 ವರ್ಷ ಮೇಲ್ಪಟ್ಟಿದ್ದು, ರೋಗಗಳಿಂದ ಬಳಲದೇ ಇದ್ದರೂ ಲಸಿಕೆ ನೀಡಲಾಗುತ್ತೆ. ಜನವರಿ 1, 1977ಕ್ಕಿಂತ ಮುಂಚೆ ಹುಟ್ಟಿದ ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುತ್ತದೆ.

ಕೋವಿನ್ ಪೋರ್ಟಲ್​ನಲ್ಲಿ ಹೆಸರು ನೋಂದಾಯಿಸಿ ಕೊರೊನಾ ಲಸಿಕೆ ಪಡೆಯಲು 45 ವರ್ಷ ಮೇಲ್ಪಟ್ಟವರು ಕೋವಿನ್ ಪೋರ್ಟಲ್​ನಲ್ಲಿ ತಮ್ಮ ಹೆಸರು, ವಿವರ ರಿಜಿಸ್ಟರ್ ಮಾಡಿಕೊಳ್ಳಬೇಕು. ಕೋವಿನ್ ಪೋರ್ಟಲ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಲು ಸಾಧ್ಯವಾಗದಿದ್ದರೆ, ತಮ್ಮ ಹತ್ತಿರದ ಕೊರೊನಾ ಲಸಿಕೆ ನೀಡಿಕೆ ಕೇಂದ್ರಕ್ಕೆ ಮಧ್ಯಾಹ್ನ 3 ಗಂಟೆಯ ನಂತರ ಹೋಗಿ ಸ್ಥಳದಲ್ಲೇ ರಿಜಿಸ್ಟರ್ ಮಾಡಿಸಿಕೊಳ್ಳಬಹುದು ಎಂದು ಕೇಂದ್ರದ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಡಾ. ರಾಜೇಶ್ ಭೂಷಣ್ ಹೇಳಿದ್ದಾರೆ. ಹೆಚ್ಚಿನ ಜನರಿಗೆ ಲಸಿಕೆ ನೀಡುವ ಮೂಲಕ ಕೊರೊನಾ ವೈರಸ್ ವಿರುದ್ಧದ ಸಮರದಲ್ಲಿ ಭಾರತ ಮೇಲುಗೈ ಸಾಧಿಸಬೇಕೆಂಬ ಉದ್ದೇಶದಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಹಣ ನೀಡಬೇಕಾಗಿಲ್ಲ. 10 ಸಾವಿರಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಪ್ರತಿ ಡೋಸ್ ಗೆ 250 ರೂಪಾಯಿ ನೀಡಬೇಕು. ದೇಶದಲ್ಲಿ ಈಗ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಹೆಸರಿನ ಎರಡು ಲಸಿಕೆಗಳನ್ನು ಜನರಿಗೆ ನೀಡಲಾಗುತ್ತಿದೆ. ಎರಡು ಲಸಿಕೆಗಳು ಸುರಕ್ಷಿತ ಹಾಗೂ ಕೊರೊನಾ ವೈರಸ್ ವಿರುದ್ಧ ಪರಿಣಾಮಕಾರಿ ಎಂದು ಕೇಂದ್ರ ಸರ್ಕಾರ ಹೇಳಿದೆ.

ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸಕ್ರಿಯ ಪ್ರಕರಣ ಭಾರತದಲ್ಲಿ ಕೆಲ ದಿನಗಳ ಹಿಂದೆ ಶೇ.97 ರಿಂದ 98 ರಷ್ಟು ಜನ ಕೊರೊನಾದಿಂದ ಗುಣಮುಖರಾಗಿದ್ದರು. ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದೂವರೆ ಲಕ್ಷದಷ್ಟಿತ್ತು. ಆದರೆ ಈಗ ದೇಶದಲ್ಲಿ 5,52,566 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಶೇ. 4.55 ರಷ್ಟು ಕೊರೊನಾ ಸಕ್ರಿಯ ಕೇಸ್​ಗಳಿವೆ. ಕೊರೊನಾದ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾದಂತೆ, ಕೊರೊನಾದಿಂದ ಗುಣಮುಖರಾದವರ ಪ್ರಮಾಣ ಕುಸಿಯುತ್ತಿದೆ. ಕೊರೊನಾದಿಂದ ಶೇ.97 ರಷ್ಟು ಗುಣಮುಖರಾಗಿದ್ದ ಭಾರತದಲ್ಲಿ ಈಗ ಗುಣಮುಖರಾದವರ ಪ್ರಮಾಣ ಶೇ.94.11 ರಷ್ಟಿಗೆ ಕುಸಿದಿದೆ.

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ಆಸ್ಪತ್ರೆಯಲ್ಲಿ ಬೆಡ್​ಗಳು ಸಿಗದ ಸ್ಥಿತಿ ನಿರ್ಮಾಣವಾಗಿದೆ. ಒಂದೇ ಬೆಡ್​ನಲ್ಲಿ ಇಬ್ಬರು ರೋಗಿಗಳು ಚಿಕಿತ್ಸೆ ಪಡೆಯುತ್ತಿರೋದು ಪರಿಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಕಳೆದ ವರ್ಷ ಕೂಡ ಮಹಾರಾಷ್ಟ್ರದಲ್ಲಿ ಇದೇ ರೀತಿಯಾದ ಪರಿಸ್ಥಿತಿ ಇತ್ತು. ಈಗಲೂ ದೇಶದಲ್ಲಿ ಅತಿ ಹೆಚ್ಚು ಹೊಸ ಕೊರೊನಾ ಕೇಸ್ ಪತ್ತೆಯಾಗುತ್ತಿರುವುದು ಕೂಡ ಮಹಾರಾಷ್ಟ್ರ ರಾಜ್ಯದಲ್ಲೇ ಎನ್ನುವುದು ವಿಶೇಷ. ದೇಶದಲ್ಲಿ ಈಗ ಅತಿ ಹೆಚ್ಚು ಕೊರೊನಾ ಸಕ್ರಿಯ ಕೇಸ್​ಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ಕೇರಳವನ್ನು ಹಿಂದಿಕ್ಕಿ ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಮಾರ್ಚ್ 30ರ ಸಂಜೆಯವರೆಗೂ 25,541 ಕೊರೊನಾ ಸಕ್ರಿಯ ಕೇಸ್ ಗಳಿವೆ. ಕರ್ನಾಟಕದಲ್ಲಿ ನಿತ್ಯ ಸರಾಸರಿ 2 ರಿಂದ 3ಸಾವಿರ ಹೊಸ ಕೇಸ್ ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ: ನಿಮ್ಮ ಆಯ್ಕೆಯ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದ ಪ್ರಧಾನಿ ಮೋದಿ

ಹೆಚ್ಚಿದ ಕೊರೊನಾ ಪ್ರಕರಣ; ಅಹಮದಾಬಾದ್​ನಲ್ಲಿ ಮಾಲ್​, ಚಿತ್ರಮಂದಿರಗಳು ಬಂದ್​

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ