AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬಂದಿರುವುದು ದುರದೃಷ್ಟಕರ: ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್

ಬಿಹಾರದ ಬಕ್ಸಾರ್ ಪ್ರದೇಶದಲ್ಲಿ ಗಂಗಾ ನದಿಯಲ್ಲಿ ಶವಗಳು ತೇಲಿ ಬಂದ ಘಟನೆ ದುರದೃಷ್ಟಕರ. ಇದು ಖಂಡಿತವಾಗಿಯೂ ತನಿಖೆಯ ವಿಷಯವಾಗಿದೆ. ಮೋದಿ ಸರ್ಕಾರ 'ತಾಯಿ' ಗಂಗೆಯ ಸ್ವಚ್ಛತೆಗೆ ಬದ್ಧವಾಗಿದೆ ಎಂದು ಶೆಖಾವತ್ ಟ್ವೀಟ್ ಮಾಡಿದ್ದಾರೆ.

ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬಂದಿರುವುದು ದುರದೃಷ್ಟಕರ: ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್
ಗಂಗಾನದಿ
Follow us
ರಶ್ಮಿ ಕಲ್ಲಕಟ್ಟ
|

Updated on: May 11, 2021 | 3:07 PM

ದೆಹಲಿ: ಬಿಹಾರದ ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬಂದಿರುವುದು ದುರದೃಷ್ಟಕರ ಎಂದು ಹೇಳಿದ ಜಲಶಕ್ತಿ ಸಚಿವಾಲಯದ ಕೇಂದ್ರ ಸಚಿವ ಗಜೇಂದ್ರಸಿಂಗ್ ಶೆಖಾವತ್, ಇದಕ್ಕೆ ಸಂಬಂಧಪಟ್ಟ ರಾಜ್ಯಗಳು ಗಮನ ಹರಿಸಬೇಕು ಎಂದು ಹೇಳಿದ್ದಾರೆ. ಬಿಹಾರದ ಬಕ್ಸಾರ್ ಪ್ರದೇಶದಲ್ಲಿ ಗಂಗಾ ನದಿಯಲ್ಲಿ ಶವಗಳು ತೇಲಿ ಬಂದ ಘಟನೆ ದುರದೃಷ್ಟಕರ. ಇದು ಖಂಡಿತವಾಗಿಯೂ ತನಿಖೆಯ ವಿಷಯವಾಗಿದೆ. ಮೋದಿ ಸರ್ಕಾರ ‘ತಾಯಿ’ ಗಂಗೆಯ ಸ್ವಚ್ಛತೆಗೆ ಬದ್ಧವಾಗಿದೆ. ಈ ಘಟನೆ ಅನಿರೀಕ್ಷಿತವಾಗಿದೆ. ಸಂಬಂಧಪಟ್ಟ ರಾಜ್ಯಗಳು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಶೆಖಾವತ್ ಟ್ವೀಟ್ ಮಾಡಿದ್ದಾರೆ. ಬಿಹಾರದ ಬಕ್ಸಾರ್‌ನ ಗಂಗಾ ನದಿಯಲ್ಲಿ ಸೋಮವಾರ ಸುಮಾರು ಒಂದು ಡಜನ್ ಶವಗಳು ಪತ್ತೆಯಾಗಿವೆ. ಗಂಗಾದಲ್ಲಿ ಕಾಣಿಸಿಕೊಂಡ 10 ರಿಂದ 12 ಶವಗಳು ದೂರದಿಂದ ತೇಲಿ ಬಂದಿವೆ. ಈ ಶವಗಳು ಕಳೆದ ಐದರಿಂದ ಏಳು ದಿನಗಳಿಂದ ತೇಲುತ್ತಿದ್ದವು ಎಂದು ತೋರುತ್ತದೆ. ಮೃತದೇಹಗಳನ್ನು ನದಿಗಳಿಗೆ ಬಿಸಾಡುವ ಸಂಪ್ರದಾಯ ನಮ್ಮಲ್ಲಿ ಇಲ್ಲ ಈ ಶವಗಳನ್ನು ಅಂತ್ಯಸಂಸ್ಕಾರ ಮಾಡಲು ನಾವು ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಬಕ್ಸಾರ್ ಉಪ ವಿಭಾಗೀಯ ಅಧಿಕಾರಿ (ಎಸ್‌ಡಿಒ) ಕೆ.ಕೆ.ಉಪಾಧ್ಯಾಯ್ ಹೇಳಿದರು.

ಈ ಶವಗಳು ವಾರಣಾಸಿ, ಅಲಹಾಬಾದ್ ಅಥವಾ ಇನ್ನಾವುದೇ ಸ್ಥಳದಿಂದ ಬಂದಿದೆಯೆ ಎಂದು ಪತ್ತೆಹಚ್ಚಬೇಕಿದೆ ಎಂದಿದ್ದಾರೆ ಉಪಾಧ್ಯಾಯ್.

ಬಿಹಾರದ ಬಕ್ಸರ್ ನಗರದ ಬಳಿಯ ಗಂಗಾ ನದಿಯಲ್ಲಿ ಸೋಮವಾರ ಸುಮಾರು ನೂರಕ್ಕೂ ಹೆಚ್ಚು ಕೊಳೆತ ಮತ್ತು ಉಬ್ಬಿದ ಸ್ಥಿತಿಯಲ್ಲಿರುವ ಮೃತದೇಹಗಳು ಪತ್ತೆಯಾಗಿವೆ. ಕೊವಿಡ್​ನಿಂದ ಮೃತಪಟ್ಟವರ ದೇಹವನ್ನು ಅಂತ್ಯಸಂಸ್ಕಾರ ನಡೆಸದೇ ಗಂಗಾ ನದಿಯಲ್ಲಿ ತೇಲಿಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಶಂಕೆ ವ್ಯಕ್ತವಾಗಿದೆ. ಗಂಗಾ ನದಿಯಲ್ಲಿ ನೆರೆ ರಾಜ್ಯ ಉತ್ತರ ಪ್ರದೇಶದಿಂದ ಕೊವಿಡ್​ನಿಂದ ಮೃತಪಟ್ಟವರ ಮೃತದೇಹಗಳನ್ನು ತೇಲಿಬಿಡಲಾಗಿದೆ ಎಂದು ಸ್ಥಳಿಯ ಆಡಳಿತ ಅಭಿಪ್ರಾಯಪಟ್ಟಿದೆ.

ಸುಮಾರು 40ರಿಂದ 45 ಮೃತದೇಹಗಳು ನದಿಯಲ್ಲಿ ತೇಲುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಚೌಸಾ ಜಿಲ್ಲಾಡಳಿತದ ಅಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ಇನ್ನು ಕೆಲವರ ಪ್ರಕಾರ ನೂರಕ್ಕೆ ಹೆಚ್ಚು ಮೃತದೇಹಗಳು ಗಂಗಾ ನದಿಯಲ್ಲಿ ತೇಲುತ್ತಿವೆ. ಯಾರೋ ದುಷ್ಕರ್ಮಿಗಳು ಈ ಮೃತದೇಹಗಳನ್ನು ನದಿಗೆ ಎಸೆದಿರುವ ಶಂಕೆಯಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಮೃತದೇಹವೊಂದಕ್ಕೆ ತಲಾ ₹ 500 ನೀಡಿ ಅಂತ್ಯಸಂಸ್ಕಾರ ನಡೆಸಲಾಗುತ್ತಿದ್ದು ಸುಮಾರು ಐದರಿಂದ ಏಳು ದಿನಗಳಿಂದಲೂ ಮೃತದೇಹಗಳು ನೀರಿನಲ್ಲಿರುವ ಶಂಕೆ ವ್ಯಕ್ತವಾಗಿದೆ.

ಬಿಹಾರದ ಈ ಭಾಗದಲ್ಲಿ ಮೃತದೇಹಗಳನ್ನು ನದಿಗೆ ಎಸೆಯುವ ಪದ್ಧತಿ ಇಲ್ಲ. ಹೀಗಾಗಿ ಈ ಮೃತದೇಹಗಳು ಉತ್ತರ ಪ್ರದೇಶದಿಂದಲೆ ಬಂದಿವೆ. ಆದರೆ ಉತ್ತರ ಪ್ರದೇಶದ ಯಾವ ಭಾಗದಿಂದ ತೇಲಿಬಂದಿವೆ ಎಂಬುದನ್ನು ತನಿಖೆ ಮಾಡಬೇಕಿದೆ ಎಂದು ಎನ್​ಡಿಟಿವಿಗೆ ಸ್ಥಳೀಯ ಆಡಳಿತದ ಅಧಿಕಾರಿಯೋರ್ವರು ತಿಳಿಸಿದ್ದಾರೆ. ವಾರಣಾಸಿ, ಅಲಹಾಬಾದ್ ಅಥವಾ ಬಹ್ರೇಚ್​ ಭಾಗಗಳಿಂದ ಈ ಮೃತದೇಹಗಳನ್ನು ಗಂಗಾ ನದಿಯಲ್ಲಿ ತೇಲಿಬಿಡಲಾಗಿದೆ ಎಂದು ಹಲವರು ಅಭಿಪ್ರಾಯಪಡುತ್ತಾರೆ.

ಇದನ್ನೂ  ಓದಿ:  ಗಂಗಾ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿರುವ ಮೃತದೇಹಗಳು ಪತ್ತೆ; ಕೊವಿಡ್ ಸೋಂಕಿನಿಂದ ಮೃತಪಟ್ಟ ಶಂಕೆ

(Corpses found floating in Ganga river in Bihar is unfortunate says Jal Shakti minister Gajendra Singh Shekhawat)

ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!