AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಪ್ರಕರಣ: ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಇಡಿ ದಾಳಿ

ಕೇಂದ್ರೀಯ ಸಂಸ್ಥೆ ಈ ತಿಂಗಳ ಆರಂಭದಲ್ಲಿ ನಗರದ ಕೈಗಾರಿಕಾ ಪ್ರದೇಶದಲ್ಲಿ ಶೋಧ ನಡೆಸಿದ್ದು, ವಿವಿಧ ಉದ್ಯಮಿಗಳಿಂದ 250 ರಿಂದ 300 ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದು ಪತ್ತೆಯಾಗಿದೆ.

ಭ್ರಷ್ಟಾಚಾರ ಪ್ರಕರಣ: ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಇಡಿ ದಾಳಿ
ಇಡಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 31, 2023 | 4:21 PM

Share

ಭ್ರಷ್ಟಾಚಾರ ಪ್ರಕರಣಕ್ಕೆ (Corruption case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಂಗಳವಾರ ಕೋಲ್ಕತ್ತಾದಲ್ಲಿ ಕನಿಷ್ಠ ಹನ್ನೆರಡು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಟಿವಿ9 ಭಾರತ್​​ವರ್ಷ್ ವರದಿ ಮಾಡಿದೆ.ಕೋಲ್ಕತ್ತಾದ ಆನಂದ್‌ಪುರ, ತೆಂಗ್ರಾ, ಅಲಿಪೋರ್, ನ್ಯೂ ಅಲಿಪೋರ್, ಹೇಸ್ಟಿಂಗ್ಸ್, ಬಜ್‌ಬುಜ್ ಮತ್ತು ಮಹೇಶ್ತಾಲಾ ಪ್ರದೇಶಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ ಕಾರ್ಯಾಚರಣೆಗಳು ಬೆಳಿಗ್ಗೆ 6.30 ರ ಸುಮಾರಿಗೆ ಪ್ರಾರಂಭವಾಗಿದ್ದು, ಅಧಿಕಾರಿಗಳ ತಂಡವು ತೆಂಗ್ರಾದಲ್ಲಿನ ಕಚೇರಿಯೊಂದರ ಮೇಲೆ ದಾಳಿ ನಡೆಸಿತು. ದಕ್ಷಿಣ ಕೋಲ್ಕತ್ತಾದ ಅಲಿಪೋರ್ ರಸ್ತೆಯಲ್ಲಿರುವ ಅತಿಥಿ ಗೃಹ ಮತ್ತು ವಸತಿ ಫ್ಲಾಟ್ ಮೇಲೆ ನಾಲ್ಕೈದು ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿವೆ.

ಆದರೆ, ಈ ದಾಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಕೇಂದ್ರೀಯ ಸಂಸ್ಥೆ ಈ ತಿಂಗಳ ಆರಂಭದಲ್ಲಿ ನಗರದ ಕೈಗಾರಿಕಾ ಪ್ರದೇಶದಲ್ಲಿ ಶೋಧ ನಡೆಸಿದ್ದು, ವಿವಿಧ ಉದ್ಯಮಿಗಳಿಂದ 250 ರಿಂದ 300 ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದು ಪತ್ತೆಯಾಗಿದೆ.

ವಿವಿಧ ಶೆಲ್ ಕಂಪನಿಗಳ ಮೂಲಕ ವಂಚನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಜಾರಿ ನಿರ್ದೇಶನಾಲಯದ ಇತ್ತೀಚಿನ ದಾಳಿಯು ಈ ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’