AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಪ್ರಕರಣ: ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಇಡಿ ದಾಳಿ

ಕೇಂದ್ರೀಯ ಸಂಸ್ಥೆ ಈ ತಿಂಗಳ ಆರಂಭದಲ್ಲಿ ನಗರದ ಕೈಗಾರಿಕಾ ಪ್ರದೇಶದಲ್ಲಿ ಶೋಧ ನಡೆಸಿದ್ದು, ವಿವಿಧ ಉದ್ಯಮಿಗಳಿಂದ 250 ರಿಂದ 300 ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದು ಪತ್ತೆಯಾಗಿದೆ.

ಭ್ರಷ್ಟಾಚಾರ ಪ್ರಕರಣ: ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಇಡಿ ದಾಳಿ
ಇಡಿ
TV9 Web
| Edited By: |

Updated on: Jan 31, 2023 | 4:21 PM

Share

ಭ್ರಷ್ಟಾಚಾರ ಪ್ರಕರಣಕ್ಕೆ (Corruption case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಂಗಳವಾರ ಕೋಲ್ಕತ್ತಾದಲ್ಲಿ ಕನಿಷ್ಠ ಹನ್ನೆರಡು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಟಿವಿ9 ಭಾರತ್​​ವರ್ಷ್ ವರದಿ ಮಾಡಿದೆ.ಕೋಲ್ಕತ್ತಾದ ಆನಂದ್‌ಪುರ, ತೆಂಗ್ರಾ, ಅಲಿಪೋರ್, ನ್ಯೂ ಅಲಿಪೋರ್, ಹೇಸ್ಟಿಂಗ್ಸ್, ಬಜ್‌ಬುಜ್ ಮತ್ತು ಮಹೇಶ್ತಾಲಾ ಪ್ರದೇಶಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ ಕಾರ್ಯಾಚರಣೆಗಳು ಬೆಳಿಗ್ಗೆ 6.30 ರ ಸುಮಾರಿಗೆ ಪ್ರಾರಂಭವಾಗಿದ್ದು, ಅಧಿಕಾರಿಗಳ ತಂಡವು ತೆಂಗ್ರಾದಲ್ಲಿನ ಕಚೇರಿಯೊಂದರ ಮೇಲೆ ದಾಳಿ ನಡೆಸಿತು. ದಕ್ಷಿಣ ಕೋಲ್ಕತ್ತಾದ ಅಲಿಪೋರ್ ರಸ್ತೆಯಲ್ಲಿರುವ ಅತಿಥಿ ಗೃಹ ಮತ್ತು ವಸತಿ ಫ್ಲಾಟ್ ಮೇಲೆ ನಾಲ್ಕೈದು ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿವೆ.

ಆದರೆ, ಈ ದಾಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಕೇಂದ್ರೀಯ ಸಂಸ್ಥೆ ಈ ತಿಂಗಳ ಆರಂಭದಲ್ಲಿ ನಗರದ ಕೈಗಾರಿಕಾ ಪ್ರದೇಶದಲ್ಲಿ ಶೋಧ ನಡೆಸಿದ್ದು, ವಿವಿಧ ಉದ್ಯಮಿಗಳಿಂದ 250 ರಿಂದ 300 ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದು ಪತ್ತೆಯಾಗಿದೆ.

ವಿವಿಧ ಶೆಲ್ ಕಂಪನಿಗಳ ಮೂಲಕ ವಂಚನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಜಾರಿ ನಿರ್ದೇಶನಾಲಯದ ಇತ್ತೀಚಿನ ದಾಳಿಯು ಈ ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ