AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cough Syrup: ಕೆಮ್ಮಿನ ಸಿರಪ್ ರಫ್ತುದಾರರು ಜೂನ್ 1ರಿಂದ ಸರ್ಕಾರಿ ಲ್ಯಾಬ್‌ಗಳಲ್ಲಿ ತಮ್ಮ ಉತ್ಪನ್ನಗಳ ಪರೀಕ್ಷೆ ಮಾಡಿಸಲೇಬೇಕು

ಕೆಮ್ಮಿನ ಸಿರಪ್(Cough Syrup) ರಫ್ತುದಾರರು ಜೂನ್​ 1 ರಿಂದ ಸರ್ಕಾರಿ ಲ್ಯಾಬ್​ಗಳಲ್ಲಿ ಉತ್ಪನ್ನಗಳ ಪರೀಕ್ಷೆ ಮಾಡಿಸಲೇಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ಗ್ಯಾಂಬಿಯಾದಲ್ಲಿ ಕೆಮ್ಮಿನ ಸಿರಪ್ ಕುಡಿದು 60 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತೀಯ ಕೆಮ್ಮಿನ ಸಿರಪ್ ಅಪಾಯದ ಬಗ್ಗೆ WHO ಎಚ್ಚರಿಕೆ ನೀಡಿತ್ತು

Cough Syrup: ಕೆಮ್ಮಿನ ಸಿರಪ್ ರಫ್ತುದಾರರು ಜೂನ್ 1ರಿಂದ ಸರ್ಕಾರಿ ಲ್ಯಾಬ್‌ಗಳಲ್ಲಿ ತಮ್ಮ ಉತ್ಪನ್ನಗಳ ಪರೀಕ್ಷೆ ಮಾಡಿಸಲೇಬೇಕು
ಕೆಮ್ಮಿನ ಸಿರಪ್
ನಯನಾ ರಾಜೀವ್
|

Updated on:May 23, 2023 | 10:58 AM

Share

ಕೆಮ್ಮಿನ ಸಿರಪ್(Cough Syrup) ರಫ್ತುದಾರರು ಜೂನ್​ 1 ರಿಂದ ಸರ್ಕಾರಿ ಲ್ಯಾಬ್​ಗಳಲ್ಲಿ ಉತ್ಪನ್ನಗಳ ಪರೀಕ್ಷೆ ಮಾಡಿಸಲೇಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ಗ್ಯಾಂಬಿಯಾದಲ್ಲಿ ಕೆಮ್ಮಿನ ಸಿರಪ್ ಕುಡಿದು 60 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತೀಯ ಕೆಮ್ಮಿನ ಸಿರಪ್ ಅಪಾಯದ ಬಗ್ಗೆ WHO ಎಚ್ಚರಿಕೆ ನೀಡಿತ್ತು. ಇದೀಗ ಇಂತಹ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅದರ ಅಡಿಯಲ್ಲಿ ಯಾವುದೇ ಕಂಪನಿಯ ಔಷಧಿಗಳು ಮತ್ತು ವಿಶೇಷವಾಗಿ ಕೆಮ್ಮಿನ ಸಿರಪ್ ಅನ್ನು ವಿದೇಶಕ್ಕೆ ಕಳುಹಿಸುವ ಮೊದಲು ಸರ್ಕಾರಿ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗುತ್ತದೆ ಎಂದು ತಿಳಿಸಿದೆ.

ಕೆಮ್ಮು ಸಿರಪ್ ರಫ್ತುದಾರರು ಜೂನ್ 1 ರಿಂದ ರಫ್ತಿಗೆ ಅನುಮತಿ ಪಡೆಯುವ ಮೊದಲು ನಿರ್ದಿಷ್ಟ ಸರ್ಕಾರಿ ಪ್ರಯೋಗಾಲಯಗಳಲ್ಲಿ ತಮ್ಮ ಉತ್ಪನ್ನಗಳ ಪರೀಕ್ಷೆಯನ್ನು ಕೈಗೊಳ್ಳಬೇಕಾಗುತ್ತದೆ. ಭಾರತೀಯ ಸಂಸ್ಥೆಗಳು ರಫ್ತು ಮಾಡುವ ಕೆಮ್ಮು ಸಿರಪ್‌ಗಳಿಗೆ ಜಾಗತಿಕವಾಗಿ ಗುಣಮಟ್ಟದ ಕಾಳಜಿಯನ್ನು ವ್ಯಕ್ತಪಡಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಿದೇಶಕ್ಕೆ ರಫ್ತಾಗುವ ಉತ್ಪನ್ನಗಳ ಮಾದರಿಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿದ ನಂತರವೇ ಕೆಮ್ಮಿನ ಸಿರಪ್ ಅನ್ನು ರಫ್ತು ಮಾಡಲು ಅನುಮತಿಸಲಾಗುವುದು ಎಂದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ (ಡಿಜಿಎಫ್‌ಟಿ) ಅಧಿಸೂಚನೆಯಲ್ಲಿ ತಿಳಿಸಿದೆ. ಈ ಹೊಸ ವ್ಯವಸ್ಥೆ ಜೂನ್ 1 ರಿಂದ ಜಾರಿಗೆ ಬರಲಿದೆ. ಈ ಬಗ್ಗೆ ಎಲ್ಲ ಔಷಧ ಕಂಪನಿಗಳಿಗೆ ಸೂಚನೆ ನೀಡಲಾಗಿದೆ.

ದೇಶದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್‌ನ ಗುಣಮಟ್ಟದ ಬಗ್ಗೆ ವಿಶ್ವದಾದ್ಯಂತ ಎದ್ದಿರುವ ಪ್ರಶ್ನೆಗಳ ನಂತರ ಭಾರತ ಸರ್ಕಾರ ಈ ಕ್ರಮ ಕೈಗೊಂಡಿದೆ. ಕಳೆದ ವರ್ಷ ಗ್ಯಾಂಬಿಯಾ ಮತ್ತು ಉಜ್ಬೇಕಿಸ್ತಾನ್‌ನಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ನಂತರ ಕ್ರಮವಾಗಿ 66 ಮತ್ತು 18 ಮಕ್ಕಳ ಸಾವಿಗೆ ಭಾರತ ನಿರ್ಮಿತ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: Cough Syrup: ಭಾರತದಲ್ಲಿ ತಯಾರಾದ ಶೀತ-ಕೆಮ್ಮಿನ ಔಷಧಿ ಸೇವಿಸಿ ಆಫ್ರಿಕಾದಲ್ಲಿ 66 ಮಕ್ಕಳ ಸಾವು

ಬಳಿಕ ಕೇಂದ್ರ ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಈಗ, ಸರ್ಕಾರಿ ಲ್ಯಾಬ್‌ಗಳಲ್ಲಿ ಕಡ್ಡಾಯ ಪರೀಕ್ಷೆಯ ನಂತರ, ಕಳಪೆ ಗುಣಮಟ್ಟದ ಔಷಧಗಳು ಮತ್ತು ಕೆಮ್ಮು ಸಿರಪ್‌ಗಳನ್ನು ಸಹ ಗುರುತಿಸಲಾಗುತ್ತದೆ, ಉತ್ಪನ್ನವು ಪರೀಕ್ಷೆಯಲ್ಲಿ ಯಾವುದೇ ಗುಣಮಟ್ಟವನ್ನು ಹೊಂದಿಲ್ಲದಿದ್ದರೆ, ಅದನ್ನು ವಿದೇಶಕ್ಕೆ ಕಳುಹಿಸಲು ಸಾಧ್ಯವಾಗುವುದಿಲ್ಲ, ಹಾಗೆಯೇ ಅದರ ಉತ್ಪಾದನೆಯನ್ನು ನಿಲ್ಲಿಸಬಹುದಾಗಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, 2021-22 ರ ಆರ್ಥಿಕ ವರ್ಷದಲ್ಲಿ 17 ಬಿಲಿಯನ್ ಡಾಲರ್​ ಮೌಲ್ಯದ ಕೆಮ್ಮಿನ ಸಿರಪ್ ಅನ್ನು ಭಾರತದಿಂದ ರಫ್ತು ಮಾಡಲಾಗಿದೆ ಮತ್ತು 2022-23 ರಲ್ಲಿ ಈ ಮೊತ್ತವು 17.6 ಶತಕೋಟಿ ಡಾಲರ್​ಗೆ ಏರಿದೆ. ಭಾರತದಿಂದ ರಫ್ತಾಗುವ ವೈದ್ಯಕೀಯ ಉತ್ಪನ್ನಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು, ರಫ್ತು ಮಾಡುವ ಮೊದಲು ಕೆಮ್ಮಿನ ಸಿರಪ್‌ನ ಗುಣಮಟ್ಟವನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪರೀಕ್ಷೆಯನ್ನು ಭಾರತೀಯ ಔಷಧ ಸಂಹಿತೆ ಆಯೋಗ, ಪ್ರಾದೇಶಿಕ ಔಷಧ ಪರೀಕ್ಷಾ ಪ್ರಯೋಗಾಲಯಗಳು ಮತ್ತು NABL ಮಾನ್ಯತೆ ಪಡೆದ ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಮಾಡಬಹುದಾಗಿದೆ.

ನಿರ್ದಿಷ್ಟಪಡಿಸಿದ ಕೇಂದ್ರ ಸರ್ಕಾರದ ಪ್ರಯೋಗಾಲಯಗಳಲ್ಲಿ ಭಾರತೀಯ ಫಾರ್ಮಾಕೊಪೊಯಿಯಾ ಆಯೋಗ, ಪ್ರಾದೇಶಿಕ ಔಷಧ ಪರೀಕ್ಷಾ ಪ್ರಯೋಗಾಲಯ (RDTL – ಚಂಡೀಗಢ), ಕೇಂದ್ರ ಔಷಧ ಪ್ರಯೋಗಾಲಯ (CDL – ಕೋಲ್ಕತ್ತಾ), ಕೇಂದ್ರೀಯ ಔಷಧ ಪರೀಕ್ಷಾ ಪ್ರಯೋಗಾಲಯ (CDTL – ಚೆನ್ನೈ ಹೈದರಾಬಾದ್, ಮುಂಬೈ), RDTL (ಗುವಾಹಟಿ)] ಮತ್ತು NABL ಸೇರಿವೆ. (ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಟೆಸ್ಟಿಂಗ್ ಅಂಡ್ ಕ್ಯಾಲಿಬ್ರೇಶನ್ ಲ್ಯಾಬೊರೇಟರೀಸ್) ರಾಜ್ಯ ಸರ್ಕಾರಗಳ ಮಾನ್ಯತೆ ಪಡೆದ ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಮಾಡಬಹುದು.

ಭಾರತವು ಜಾಗತಿಕವಾಗಿ ಜೆನೆರಿಕ್ ಔಷಧಗಳ ಅತಿ ದೊಡ್ಡ ಪೂರೈಕೆದಾರರಾಗಿದ್ದು, ವಿವಿಧ ಲಸಿಕೆಗಳಿಗೆ ಜಾಗತಿಕ ಬೇಡಿಕೆಯ 50 ಪ್ರತಿಶತಕ್ಕೂ ಹೆಚ್ಚು ಪೂರೈಕೆಯನ್ನು ಮಾಡುತ್ತದೆ, US ನಲ್ಲಿ ಸುಮಾರು 40 ಪ್ರತಿಶತದಷ್ಟು ಜೆನೆರಿಕ್ ಬೇಡಿಕೆ ಮತ್ತು UK ಯಲ್ಲಿ ಎಲ್ಲಾ ಔಷಧಿಗಳ ಸುಮಾರು 25 ಪ್ರತಿಶತವನ್ನು ಪೂರೈಸುತ್ತದೆ. ಜಾಗತಿಕವಾಗಿ, ಭಾರತವು ಔಷಧೀಯ ಉತ್ಪಾದನೆಯಲ್ಲಿ ಪರಿಮಾಣದಲ್ಲಿ ಮೂರನೇ ಸ್ಥಾನದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:58 am, Tue, 23 May 23

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ