AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ GHMC ಫಲಿತಾಂಶ: ಯಾರಿಗೊಲಿಯುವಳು ‘ಭಾಗ್ಯ’ದೇವತೆ?

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ. ಹೈದರಾಬಾದ್, ಹೈದರಾಬಾದ್ ಆಗೇ ಉಳಿಯುತ್ತಾ ಅಥವಾ ಭಾಗ್ಯನಗರವಾಗುತ್ತಾ ಎಂಬ ಕುತೂಹಲದ ಪ್ರಶ್ನೆಗೆ ನಾಳೆ ಉತ್ತರ ದೊರಕಲಿದೆ.

ನಾಳೆ GHMC ಫಲಿತಾಂಶ: ಯಾರಿಗೊಲಿಯುವಳು ‘ಭಾಗ್ಯ’ದೇವತೆ?
GHMC ಚುನಾವಣೆ: ಬಿಜೆಪಿಯ ಭಾಗ್ಯ ನಗರ vs ಟಿಎರ್​ಎಸ್​-ಎಐಎಂ​ಐಎಂ ನ ಹೈದರಾಬಾದ್ ನಡುವೆ ಯುದ್ಧ
guruganesh bhat
| Edited By: |

Updated on: Dec 03, 2020 | 4:35 PM

Share

ಹೈದರಾಬಾದ್: ನಾಳೆ ಬಹು ನಿರೀಕ್ಷಿತ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ನಡೆಯಲಿದೆ . ನಾಳೆ ಸಂಜೆಯ ವೇಳೆಗೆ ಭಾಗ್ಯ ನಗರದ ಭಾಗ್ಯ ದೇವತೆ ಯಾರಿಗೆ ಒಲಿಯುತ್ತಾಳೆ ಎಂಬುದು ಸ್ಪಷ್ಟವಾಗಲಿದೆ.

ಬಿಜೆಪಿ, ಟಿಆರ್​ಎಸ್ ಮತ್ತು ಎಐಎಂಐಎಂಗಳ ಅದ್ದೂರಿ ಪ್ರಚಾರದ ನಂತರವೂ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕೇವಲ ಶೇ. 45.7 ಮತಗಳಷ್ಟೇ ಚಲಾವಣೆಯಾಗಿದೆ. ಅರ್ಧಕ್ಕಿಂತ ಕಡಿಮೆ ಮತದಾನ ಆಗಿರುವುದು ತಮ್ಮ ಪಾಲಿಗೆ ವರದಾಯಕವೆಂದೇ ಪ್ರಾದೇಶಿಕ ಪಕ್ಷಗಳು ಬಿಂಬಿಸಿಕೊಂಡಿವೆ. ಸಾಂಪ್ರದಾಯಿಕ ಮತಗಳಷ್ಟೇ ಚಲಾವಣೆಯಾಗಿರುವ ಸಂದೇಹವಿರುವುದರಿಂದ ಪ್ರಾದೇಶಿಕ ಪಕ್ಷಗಳಿಗೆ ಲಾಭವಾಗಲಿದೆ. ಕಡಿಮೆ ಮತದಾನದ ಲಾಭವನ್ನು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್​ಎಸ್ ಗಳಿಸಿರುವ ಸಾಧ್ಯತೆ ಹೆಚ್ಚಿದೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಣೆಗಳು ಹರಿದಾಡುತ್ತಿವೆ.

ಡಿಮೆ ಮತದಾನಕ್ಕೆ ಕಾರಣವೇನು? ಇತ್ತೀಚಿಗಷ್ಟೇ ಹೈದರಾಬಾದ್​ನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಈ ಭಾಗದ ನಾಗರಿಕರು ಮತದಾನಕ್ಕೆ ಹಿಂದೇಟು ಹಾಕಿದ್ದಾರೆ. ಅಲ್ಲದೇ, ವೋಟಿಂಗ್ ಸ್ಲಿಪ್​ಗಳ ವಿತರಣೆಯಲ್ಲೂ ಅಡಚಣೆ ಕಂಡುಬಂದಿದೆ. ಕೊರೊನಾ ಸೋಂಕಿನ ಭಯವೂ ಮತದಾನ ಕಡಿಮೆಯಾಗಲು ಕಾರಣವಾಗಿದೆ ಎಂಬ ಅಭಿಪ್ರಾಯ ತೆಲಂಗಾಣದ ರಾಜಕೀಯ ಪಡಸಾಲೆಯಲ್ಲಿ ಕೇಳಿಬಂದಿದೆ.

ಪ್ರಾದೇಶಿಕ ಪಕ್ಷಗಳಿಗೆ ವರದಾನವೇ ಚುನಾವಣೆಯ ನಂತರ ಪಕ್ಷದ ಆಂತರಿಕ ಸಭೆ ಕರೆದಿದ್ದ ಕೆ. ಸಿ ರಾವ್ 75 ಸ್ಥಾನಗಳಲ್ಲಿ ಗೆಲ್ಲುವ ಖಚಿತ ವಿಶ್ವಾಸ ವ್ಯಕ್ತಪಡಿಸಿದ್ದರು. ಇದುವರೆಗೆ ಕಡಿಮೆ ಮತದಾನವಾದಾಗೆಲ್ಲ ಟಿಆರ್​ಎಸ್​ ಗೆದ್ದಿರುವುದರಿಂದ ಕೆ ಸಿ ರಾವ್ ಈ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಸಹ ಹಿಂದಿನ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲುವ ಉಮೇದಿನಲ್ಲಿದೆ. ಬಿಜೆಪಿ ತನ್ನ ಬಳಿಯಿದ್ದ 4 ಸ್ಥಾನಗಳಿಂದ ಮಾಡುವ ಉದ್ದೇಶದಿಂದ ಭಾರೀ ಪ್ರಚಾರ ಮಾಡಿದ್ದರೂ, ಕಡಿಮೆ ಮತದಾನ ಪ್ರಮಾಣ ಈ ಗುರಿಗೆ ಮಾರಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮತ ಎಣಿಕೆಯೂ ವಿಳಂಬವಾಗಲಿದೆಯೇ..? GHMC ಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಬ್ಯಾಲೆಟ್ ಪೇಪರ್​ನಲ್ಲಿ ಮತದಾನ ನಡೆಸಲಾಗಿದೆ. ಹೀಗಾಗಿ ಮತ ಎಣಿಕೆ ನಿಧಾನವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ