5 State Election Result: ಪಂಚ ರಾಜ್ಯಗಳಲ್ಲಿ ಪ್ರಾರಂಭವಾದ ವಿಧಾನಸಭಾ ಚುನಾವಣೆ ಮತ ಎಣಿಕೆ; ಯಾವ ರಾಜ್ಯದ ಗದ್ದುಗೆ ಯಾರಿಗೆ?

ರಾಜ್ಯದ ಒಟ್ಟು 1200 ಮತ ಎಣಿಕಾ ಕೇಂದ್ರಗಳಿಂದ 50 ಸಾವಿರಕ್ಕೂ ಅಧಿಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 750 ಕೇಂದ್ರಗಳು ಮತ್ತು ಪಂಜಾಬ್​ನಲ್ಲಿ 200 ಮತ ಎಣಿಕಾ ಕೇಂದ್ರಗಳಿವೆ. 

5 State Election Result: ಪಂಚ ರಾಜ್ಯಗಳಲ್ಲಿ ಪ್ರಾರಂಭವಾದ ವಿಧಾನಸಭಾ ಚುನಾವಣೆ ಮತ ಎಣಿಕೆ; ಯಾವ ರಾಜ್ಯದ ಗದ್ದುಗೆ ಯಾರಿಗೆ?
ಪ್ರಾತಿನಿಧಿಕ ಚಿತ್ರ
Follow us
| Updated By: Lakshmi Hegde

Updated on:Mar 10, 2022 | 8:06 AM

ಇನ್ನೇನು ಕೆಲವೇ ಹೊತ್ತಲ್ಲಿ ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡ್​, ಮಣಿಪುರ, ಪಂಜಾಬ್​, ಗೋವಾಗಳಲ್ಲಿ ಯಾವ ಪಕ್ಷ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಸಹಜವಾಗಿಯೇ ದೇಶಾದ್ಯಂತ ಮೂಡಿದೆ. ಈ ಬಾರಿ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಉತ್ತರ ಪ್ರದೇಶ ಮತ್ತು ಮಣಿಪುರಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದ್ದು, ಉತ್ತರಾಖಂಡ್​​ನಲ್ಲಿ ಕಾಂಗ್ರೆಸ್​ ಸರ್ಕಾರ ರಚಿಸುವ ಸಾಧ್ಯತೆ ಇದೆ. ಪಂಜಾಬ್​​ನಲ್ಲಿ ಅರವಿಂದ್​ ಕ್ರೇಜಿವಾಲ್​ ನೇತೃತ್ವದ ಆಮ್​ ಆದ್ಮಿ ಪಕ್ಷ ಆಡಳಿತಕ್ಕೆ ಬರಲಿದೆ ಎಂದು ಹೇಳಲಾಗಿದೆ. ಅದೇನೇ ಇದ್ದರೂ ಮತ ಎಣಿಕೆ ಮುಗಿದ ಬಳಿಕವೇ ಯಾವ ರಾಜ್ಯದಲ್ಲಿ, ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬ ವಿಚಾರ ಸ್ಪಷ್ಟವಾಗುವುದು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ.

ಕೊವಿಡ್​ 19 ನಿಯಂತ್ರಣ ಶಿಷ್ಟಾಚಾರ ಪಾಲನೆಯೊಂದಿಗೆ ಐದೂ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಪ್ರಾರಂಭವಾದ ಒಂದೆರಡು ಗಂಟೆಗಳಲ್ಲಿ  ರಾಜ್ಯದಲ್ಲಿ ಆರಂಭಿಕ ಟ್ರೆಂಡ್​ ಗೊತ್ತಾಗಲಿದೆ. ಆದರೆ ಗೋವಾದಲ್ಲಿ ಸ್ವಲ್ಪ ಕಷ್ಟವಾಗಬಹುದು. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ರಚಿತಗೊಳ್ಳಲಿದೆ ಎಂದೇ ಹೇಳಿವೆ. ಇನ್ನು ರಾಜ್ಯದ ಒಟ್ಟು 1200 ಮತ ಎಣಿಕಾ ಕೇಂದ್ರಗಳಿಂದ 50 ಸಾವಿರಕ್ಕೂ ಅಧಿಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 750 ಕೇಂದ್ರಗಳು ಮತ್ತು ಪಂಜಾಬ್​ನಲ್ಲಿ 200 ಮತ ಎಣಿಕಾ ಕೇಂದ್ರಗಳಿವೆ.  ಉತ್ತರಪ್ರದೇಶದ ಪ್ರಯಾಗ್​ ರಾಜ್​ ಸೇರಿ ಹಲವು ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಮುಂಡೇರಾ ಮಂಡಿ ಎಂಬಲ್ಲಿ ಒಟ್ಟು 12 ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದ್ದು, ಅಲ್ಲಿ ನಾಲ್ಕು ಲೇಯರ್​ಗಳ ಭದ್ರತೆ ಕಲ್ಪಿಸಲಾಗಿದೆ.

ಚುನಾವಣೋತ್ತರ ಸಮೀಕ್ಷೆಯಲ್ಲಿ ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂದು ಹೊರಬಿದ್ದಿದ್ದೇ ಅಲ್ಲಿ ಸಿಎಂ ಅಭ್ಯರ್ಥಿ ಭಗವಂತ್ ಮನ್​ ಮುಖದಲ್ಲಿ ಮಂದಹಾಸ ಮೂಡಿದೆ. ಆಪ್​ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಉತ್ತರಾಖಂಡ್​ನಲ್ಲಿ ಕಾಂಗ್ರೆಸ್​ ಬಗ್ಗೆ ಸಮೀಕ್ಷೆಗಳು ಒಲವು ತೋರಿದ್ದರೂ ಬಿಜೆಪಿ ಮಾತ್ರ ಅದನ್ನು ಒಪ್ಪಿಕೊಂಡಿಲ್ಲ. ಈ ಬಾರಿಯೂ ಉತ್ತರ ಪ್ರದೇಶ, ಉತ್ತರಾಖಂಡ್​ ಮತ್ತು ಮಣಿಪುರಗಳು ನಮಗೇ ಎಂಬ ಆತ್ಮವಿಶ್ವಾಸದಲ್ಲಿ ಇದೆ. ಗೋವಾದಲ್ಲಿ ಅತಂತ್ರ ವಿಧಾನಸಭೆ ಬರುವ ಸಾಧ್ಯತೆಯನ್ನು ಯಾರೂ ಅಲ್ಲಗಳೆಯುವಂತಿಲ್ಲ. ಚುನಾವಣಾ ಮತ ಎಣಿಕೆ ಸಂಬಂಧ ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ: Mental stress: ಮಾನಸಿಕ ಒತ್ತಡ ಕಡೆಮೆ ಮಾಡುವುದು ಹೇಗೆ..! ಇಲ್ಲಿದೆ ಸರಳ ಟಿಪ್ಸ್

Published On - 7:46 am, Thu, 10 March 22

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್