5 State Election Result: ಪಂಚ ರಾಜ್ಯಗಳಲ್ಲಿ ಪ್ರಾರಂಭವಾದ ವಿಧಾನಸಭಾ ಚುನಾವಣೆ ಮತ ಎಣಿಕೆ; ಯಾವ ರಾಜ್ಯದ ಗದ್ದುಗೆ ಯಾರಿಗೆ?

ರಾಜ್ಯದ ಒಟ್ಟು 1200 ಮತ ಎಣಿಕಾ ಕೇಂದ್ರಗಳಿಂದ 50 ಸಾವಿರಕ್ಕೂ ಅಧಿಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 750 ಕೇಂದ್ರಗಳು ಮತ್ತು ಪಂಜಾಬ್​ನಲ್ಲಿ 200 ಮತ ಎಣಿಕಾ ಕೇಂದ್ರಗಳಿವೆ. 

5 State Election Result: ಪಂಚ ರಾಜ್ಯಗಳಲ್ಲಿ ಪ್ರಾರಂಭವಾದ ವಿಧಾನಸಭಾ ಚುನಾವಣೆ ಮತ ಎಣಿಕೆ; ಯಾವ ರಾಜ್ಯದ ಗದ್ದುಗೆ ಯಾರಿಗೆ?
ಪ್ರಾತಿನಿಧಿಕ ಚಿತ್ರ
Follow us
| Updated By: Lakshmi Hegde

Updated on:Mar 10, 2022 | 8:06 AM

ಇನ್ನೇನು ಕೆಲವೇ ಹೊತ್ತಲ್ಲಿ ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡ್​, ಮಣಿಪುರ, ಪಂಜಾಬ್​, ಗೋವಾಗಳಲ್ಲಿ ಯಾವ ಪಕ್ಷ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಸಹಜವಾಗಿಯೇ ದೇಶಾದ್ಯಂತ ಮೂಡಿದೆ. ಈ ಬಾರಿ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಉತ್ತರ ಪ್ರದೇಶ ಮತ್ತು ಮಣಿಪುರಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದ್ದು, ಉತ್ತರಾಖಂಡ್​​ನಲ್ಲಿ ಕಾಂಗ್ರೆಸ್​ ಸರ್ಕಾರ ರಚಿಸುವ ಸಾಧ್ಯತೆ ಇದೆ. ಪಂಜಾಬ್​​ನಲ್ಲಿ ಅರವಿಂದ್​ ಕ್ರೇಜಿವಾಲ್​ ನೇತೃತ್ವದ ಆಮ್​ ಆದ್ಮಿ ಪಕ್ಷ ಆಡಳಿತಕ್ಕೆ ಬರಲಿದೆ ಎಂದು ಹೇಳಲಾಗಿದೆ. ಅದೇನೇ ಇದ್ದರೂ ಮತ ಎಣಿಕೆ ಮುಗಿದ ಬಳಿಕವೇ ಯಾವ ರಾಜ್ಯದಲ್ಲಿ, ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬ ವಿಚಾರ ಸ್ಪಷ್ಟವಾಗುವುದು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ.

ಕೊವಿಡ್​ 19 ನಿಯಂತ್ರಣ ಶಿಷ್ಟಾಚಾರ ಪಾಲನೆಯೊಂದಿಗೆ ಐದೂ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಪ್ರಾರಂಭವಾದ ಒಂದೆರಡು ಗಂಟೆಗಳಲ್ಲಿ  ರಾಜ್ಯದಲ್ಲಿ ಆರಂಭಿಕ ಟ್ರೆಂಡ್​ ಗೊತ್ತಾಗಲಿದೆ. ಆದರೆ ಗೋವಾದಲ್ಲಿ ಸ್ವಲ್ಪ ಕಷ್ಟವಾಗಬಹುದು. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ರಚಿತಗೊಳ್ಳಲಿದೆ ಎಂದೇ ಹೇಳಿವೆ. ಇನ್ನು ರಾಜ್ಯದ ಒಟ್ಟು 1200 ಮತ ಎಣಿಕಾ ಕೇಂದ್ರಗಳಿಂದ 50 ಸಾವಿರಕ್ಕೂ ಅಧಿಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 750 ಕೇಂದ್ರಗಳು ಮತ್ತು ಪಂಜಾಬ್​ನಲ್ಲಿ 200 ಮತ ಎಣಿಕಾ ಕೇಂದ್ರಗಳಿವೆ.  ಉತ್ತರಪ್ರದೇಶದ ಪ್ರಯಾಗ್​ ರಾಜ್​ ಸೇರಿ ಹಲವು ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಮುಂಡೇರಾ ಮಂಡಿ ಎಂಬಲ್ಲಿ ಒಟ್ಟು 12 ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದ್ದು, ಅಲ್ಲಿ ನಾಲ್ಕು ಲೇಯರ್​ಗಳ ಭದ್ರತೆ ಕಲ್ಪಿಸಲಾಗಿದೆ.

ಚುನಾವಣೋತ್ತರ ಸಮೀಕ್ಷೆಯಲ್ಲಿ ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂದು ಹೊರಬಿದ್ದಿದ್ದೇ ಅಲ್ಲಿ ಸಿಎಂ ಅಭ್ಯರ್ಥಿ ಭಗವಂತ್ ಮನ್​ ಮುಖದಲ್ಲಿ ಮಂದಹಾಸ ಮೂಡಿದೆ. ಆಪ್​ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಉತ್ತರಾಖಂಡ್​ನಲ್ಲಿ ಕಾಂಗ್ರೆಸ್​ ಬಗ್ಗೆ ಸಮೀಕ್ಷೆಗಳು ಒಲವು ತೋರಿದ್ದರೂ ಬಿಜೆಪಿ ಮಾತ್ರ ಅದನ್ನು ಒಪ್ಪಿಕೊಂಡಿಲ್ಲ. ಈ ಬಾರಿಯೂ ಉತ್ತರ ಪ್ರದೇಶ, ಉತ್ತರಾಖಂಡ್​ ಮತ್ತು ಮಣಿಪುರಗಳು ನಮಗೇ ಎಂಬ ಆತ್ಮವಿಶ್ವಾಸದಲ್ಲಿ ಇದೆ. ಗೋವಾದಲ್ಲಿ ಅತಂತ್ರ ವಿಧಾನಸಭೆ ಬರುವ ಸಾಧ್ಯತೆಯನ್ನು ಯಾರೂ ಅಲ್ಲಗಳೆಯುವಂತಿಲ್ಲ. ಚುನಾವಣಾ ಮತ ಎಣಿಕೆ ಸಂಬಂಧ ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ: Mental stress: ಮಾನಸಿಕ ಒತ್ತಡ ಕಡೆಮೆ ಮಾಡುವುದು ಹೇಗೆ..! ಇಲ್ಲಿದೆ ಸರಳ ಟಿಪ್ಸ್

Published On - 7:46 am, Thu, 10 March 22

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್