AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಲಕ್ಷಾಂತರ ಜನರ ಜೀವ ಹೋಗುತ್ತಿರುವುದು ಕೇಂದ್ರ ಸರ್ಕಾರದಿಂದ ನಿರ್ಲಕ್ಷ್ಯದಿಂದ: ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ

ಫೇಸ್​ಬುಕ್ ಪೋಸ್ಟ್ ಮೂಲಕ ಯಾರು ಹೊಣೆ? (Zimmedaar Kaun?) ಎಂಬ ಅಭಿಯಾನ ಶುರು ಮಾಡಿದ ಪ್ರಿಯಾಂಕಾ ಗಾಂಧಿ, ದೇಶದಲ್ಲಿ ಕೊರೊನಾ ಸಂದರ್ಭವನ್ನು ಕೇಂದ್ರ ಸರ್ಕಾರ ನಿಭಾಯಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೀಗೆ ಲಕ್ಷಾಂತರ ಜನರ ಜೀವ ಹೋಗುತ್ತಿರುವುದು ಕೇಂದ್ರ ಸರ್ಕಾರದಿಂದ ನಿರ್ಲಕ್ಷ್ಯದಿಂದ: ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ
ಪ್ರಿಯಾಂಕಾ ಗಾಂಧಿ
Lakshmi Hegde
|

Updated on:May 25, 2021 | 7:59 PM

Share

ದೆಹಲಿ: ಕೊವಿಡ್ 19 ಸೋಂಕಿನ ಎರಡನೇ ಅಲೆಯಲ್ಲಿ ಲೆಕ್ಕವಿಲ್ಲದಷ್ಟು ಜನರ ಪ್ರಾಣ ಹೋಗಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಆರೋಪಿಸಿದ್ದಾರೆ. ಆಡಳಿತದಲ್ಲಿ ಇರುವವರು ತಮ್ಮ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಫೇಸ್​ಬುಕ್ ಪೋಸ್ಟ್ ಮೂಲಕ ಯಾರು ಹೊಣೆ? (Zimmedaar Kaun?) ಎಂಬ ಅಭಿಯಾನ ಶುರು ಮಾಡಿದ ಪ್ರಿಯಾಂಕಾ ಗಾಂಧಿ, ದೇಶದಲ್ಲಿ ಕೊರೊನಾ ಸಂದರ್ಭವನ್ನು ಕೇಂದ್ರ ಸರ್ಕಾರ ನಿಭಾಯಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಈ ಪರಿಸ್ಥಿತಿಗೆ ಯಾರು ಹೊಣೆ? ಎಂಬ ಪ್ರಶ್ನೆಯನ್ನು ನಾನು ಈ ದೇಶದ ಕೋಟ್ಯಂತರ ಜನರ ಪರವಾಗಿ ಕೇಳುತ್ತಿದ್ದೇನೆ ಎಂದೂ ಹೇಳಿದ್ದಾರೆ.

ಹಿಂದಿಯಲ್ಲಿ ಫೇಸ್​​ಬುಕ್​ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕಾ ಗಾಂಧಿ, ಕೊವಿಡ್​ 19 ಸೋಂಕಿನಿಂದಾಗಿ ಜನರು ಪರದಾಡುವಂತಾಗಿದೆ. ಆಸ್ಪತ್ರೆಗಳಲ್ಲಿ ಬೆಡ್​, ಆಕ್ಸಿಜನ್​, ಔಷಧಗಳು, ಲಸಿಕೆಗಳ ಅಲಭ್ಯತೆ ಉಂಟಾಗಿದೆ. ಈಗಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸರ್ಕಾರ ಜನರ ಪ್ರಾಣ ಉಳಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತದೆ ಎಂದು ಜನರು ನಿರೀಕ್ಷಿಸಿದ್ದರು. ಆದರೆ ಸರ್ಕಾರ ಮೌನಕ್ಕೆ ಜಾರಿ, ತನ್ನಪಾಡಿಗೆ ತಾನು ಇದ್ದುಬಿಟ್ಟಿತು. ಇದೊಂದು ತುಂಬ ನೋವಿನ ಸಂಗತಿ ಎಂದಿದ್ದಾರೆ.

ಲಸಿಕೆ ರಫ್ತು, 2020ರಲ್ಲಿ ಆಮ್ಲಜನಕ ರಫ್ತು ಪ್ರಮಾಣವನ್ನು ದ್ವಿಗುಣಗೊಳಿಸಿದ್ದು, ಜನಸಂಖ್ಯೆಗೆ ಅನುಗುಣವಾಗಿ ಲಸಿಕೆಗೆ ಆದೇಶ ನೀಡದೆ ಇರುವುದು.. ಹೀಗೆ ವಿವಿಧ ವಿಚಾರಗಳಲ್ಲಿ ಸರ್ಕಾರ ಎಡವಿದೆ. ಬೇಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಇದನ್ನೂ ಓದಿ: Corona Warriors : ನಿಮ್ಮ ಧ್ವನಿಗೆ ನಮ್ಮ ಧ್ವನಿಯೂ ; ಮಸಣದಲ್ಲಿ ಗಂಡ ಹೆಣ ಬೇಯಿಸುತ್ತಿದ್ದರೆ ಹೆಂಡತಿ ಒಲೆಮೇಲೆ ಕಣ್ಣೀರು ಕುದಿಸಬೇಕೆ?

Karnataka Covid Update: ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ; ಮರಣ ಪ್ರಮಾಣದಲ್ಲಿ ಸುಧಾರಣೆ ಇಲ್ಲ

Published On - 7:58 pm, Tue, 25 May 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ