AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಲಿದೆ ತಾಪಮಾನ, ಮಾರ್ಚ್- ಮೇ ತಿಂಗಳಿನಿಂದಲೇ ಜಾಸ್ತಿಯಾಗಲಿದೆ ಬಿಸಿಗಾಳಿ

ಎಲ್ ನಿನೋ ಪರಿಸ್ಥಿತಿಗಳು ದುರ್ಬಲಗೊಂಡಿವೆ. ಆದರೆ ಅವು ಇನ್ನೂ ಚಾಲ್ತಿಯಲ್ಲಿವೆ. ಇದು ಮೇ ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಎಲ್ ನಿನೊ ಸಾಮಾನ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಬಿಸಿ ಗಾಳಿಯನ್ನು ಹೊಂದಿರುತ್ತದೆ. ಆದ್ದರಿಂದ, ನಾವು ಉರಿ ಬೇಸಿಗೆಯನ್ನು ನಿರೀಕ್ಷಿಸಬಹುದು. ಆದರೆ ಋತುವಿನ ಮೊದಲ 15 ದಿನಗಳವರೆಗೆ, ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಿರುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದೆ .

ಹೆಚ್ಚಲಿದೆ ತಾಪಮಾನ, ಮಾರ್ಚ್- ಮೇ ತಿಂಗಳಿನಿಂದಲೇ ಜಾಸ್ತಿಯಾಗಲಿದೆ ಬಿಸಿಗಾಳಿ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Mar 01, 2024 | 6:42 PM

ದೆಹಲಿ ಮಾರ್ಚ್ 01: ಎಲ್ ನಿನೊ (El Nino) ಪರಿಸ್ಥಿತಿಗಳು ದುರ್ಬಲಗೊಂಡಿವೆ ಆದರೆ ಅವು ಇನ್ನೂ ಚಾಲ್ತಿಯಲ್ಲಿವೆ. ಇದು ಮೇ ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಇದು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನಕ್ಕೆ ಕಾರಣವಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ. ವಾಯುವ್ಯದ ಕೆಲವು ಪ್ರತ್ಯೇಕ ಪ್ರದೇಶಗಳನ್ನು ಹೊರತುಪಡಿಸಿ ಎಲ್ ನಿನೊ ಪರಿಸ್ಥಿತಿಗಳಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ಮಾರ್ಚ್‌ನಿಂದ ಮೇ ವರೆಗೆ ಸಾಮಾನ್ಯ ಹಗಲು ಮತ್ತು ರಾತ್ರಿ ತಾಪಮಾನವನ್ನು(Heat Wave) ಭಾರತ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿರುವುದರಿಂದ ಈಶಾನ್ಯ, ಮಧ್ಯ ಮತ್ತು ಪರ್ಯಾಯ ದ್ವೀಪ ಪ್ರದೇಶಗಳು ಉರಿ ಬಿಸಿಲು ಅನುಭವಿಸುವ ಸಾಧ್ಯತೆಯಿದೆ.ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ಅಥವಾ ರಾತ್ರಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಐಎಂಡಿ ಶುಕ್ರವಾರ ತಿಳಿಸಿದೆ.

ಪರ್ಯಾಯ ದ್ವೀಪ ಪ್ರದೇಶ, ಈಶಾನ್ಯ, ಪಶ್ಚಿಮ ಮಧ್ಯ ಪ್ರದೇಶ ಮತ್ತು ವಾಯುವ್ಯದ ಹೆಚ್ಚಿನ ಪ್ರದೇಶಗಳಲ್ಲಿ ಮಾರ್ಚ್‌ನಲ್ಲಿ ಮಾಸಿಕ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಪೂರ್ವ ಮತ್ತು ಪೂರ್ವ-ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಕಡಿಮೆ ಗರಿಷ್ಠ ತಾಪಮಾನವು ಮುಂದುವರಿಯುವ ಸಾಧ್ಯತೆಯಿದೆ.

ಹಿಮಾಲಯದ ಕೆಲವು ಪ್ರತ್ಯೇಕ ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ರಾತ್ರಿಯ ಉಷ್ಣತೆಯು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.ಅಲ್ಲಿ ಮಾರ್ಚ್‌ನಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವು ಹೆಚ್ಚಾಗಿ ಇರುತ್ತದೆ ಎಂದು ಐಎಂಡಿ ಹೇಳಿದೆ.

ಈಶಾನ್ಯ ಭಾರತ, ಪಶ್ಚಿಮ ಹಿಮಾಲಯ ಪ್ರದೇಶ, ನೈಋತ್ಯ ಪರ್ಯಾಯ ದ್ವೀಪ ಮತ್ತು ಪಶ್ಚಿಮ ಕರಾವಳಿಯನ್ನು ಹೊರತುಪಡಿಸಿ, ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ದಿನಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮಾರ್ಚ್‌ನಲ್ಲಿ, ಈಶಾನ್ಯ ಪರ್ಯಾಯದ್ವೀಪದ ಭಾರತದ ಹೆಚ್ಚಿನ ಪ್ರದೇಶಗಳು, ಮಹಾರಾಷ್ಟ್ರದ ಹಲವು ಪ್ರದೇಶಗಳು ಮತ್ತು ಒಡಿಶಾದ ಕೆಲವು ಭಾಗಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲು ಇರಬಹುದು.

“ಎಲ್ ನಿನೋ ಪರಿಸ್ಥಿತಿಗಳು ದುರ್ಬಲಗೊಂಡಿವೆ. ಆದರೆ ಅವು ಇನ್ನೂ ಚಾಲ್ತಿಯಲ್ಲಿವೆ. ಇದು ಮೇ ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಎಲ್ ನಿನೊ ಸಾಮಾನ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಬಿಸಿ ಗಾಳಿಯನ್ನು ಹೊಂದಿರುತ್ತದೆ. ಆದ್ದರಿಂದ, ನಾವು ಉರಿ ಬೇಸಿಗೆಯನ್ನು ನಿರೀಕ್ಷಿಸಬಹುದು. ಆದರೆ ಋತುವಿನ ಮೊದಲ 15 ದಿನಗಳವರೆಗೆ, ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಏಕೆಂದರೆ ಸಕ್ರಿಯ ಪಾಶ್ಚಿಮಾತ್ಯ ಅಡಚಣೆಗಳು ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಡೈರೆಕ್ಟರ್ ಜನರಲ್ ಎಂ ಮೊಹಾಪಾತ್ರ ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಂಗಾಳದ ಟಿಎಂಸಿ ಸರ್ಕಾರದ ಅಂತ್ಯಕ್ಕೆ ನಾಂದಿ ಹಾಡಲಿದೆ: ನರೇಂದ್ರ ಮೋದಿ

ಮಾರ್ಚ್ ತಿಂಗಳಲ್ಲಿ ದೇಶದಾದ್ಯಂತ ಸರಾಸರಿ ಮಳೆಯ ಮುನ್ಸೂಚನೆಯು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ದಕ್ಷಿಣ ಪೆನಿನ್ಸುಲಾದ ತೀವ್ರ ಆಗ್ನೇಯ ಪ್ರದೇಶಗಳು ಮತ್ತು ಈಶಾನ್ಯ ಮತ್ತು ತೀವ್ರ ವಾಯುವ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 1 March 24

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ