AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ದೇಶವನ್ನು ಸರ್ಕಾರಿ ತಾಲಿಬಾನ್​ ಕಮಾಂಡರ್​ಗಳು ಆಕ್ರಮಿಸಿಕೊಳ್ಳುತ್ತಿದ್ದಾರೆ‘-ರಾಕೇಶ್​ ಟಿಕಾಯತ್​

ನಿನ್ನೆ ಬಿಜೆಪಿ ಸಭೆಯನ್ನು, ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​ ಆಗಮನವನ್ನು ವಿರೋಧಿಸಿ ಕರ್ನಾಲ್​ ಹೆದ್ದಾರಿಗಳ ಮೇಲೆ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್​ ನಡೆಸಿದ ಪರಿಣಾಮ ಸುಮಾರು 10 ಮಂದಿ ಗಾಯಗೊಂಡಿದ್ದರು.

‘ನಮ್ಮ ದೇಶವನ್ನು ಸರ್ಕಾರಿ ತಾಲಿಬಾನ್​ ಕಮಾಂಡರ್​ಗಳು ಆಕ್ರಮಿಸಿಕೊಳ್ಳುತ್ತಿದ್ದಾರೆ‘-ರಾಕೇಶ್​ ಟಿಕಾಯತ್​
ರಾಕೇಶ್ ಟಿಕಾಯತ್
TV9 Web
| Edited By: |

Updated on: Aug 29, 2021 | 2:45 PM

Share

ದೆಹಲಿ: ನಿನ್ನೆ ಹರ್ಯಾಣ ಮುಖ್ಯಮಂತ್ರಿ ಬಿಜೆಪಿ ಕಾರ್ಯಕಾರಿಣಿ ಸಭೆ (BJP Meeting) ನಿಮಿತ್ತ ಕರ್ನಾಲ್​ಗೆ ತೆರಳಿದ್ದಾಗ, ಅವರ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ( Police Lathi Charge)​ ಮಾಡಿದ್ದರು. ಇದರಲ್ಲಿ ಹಲವರು ಗಾಯಗೊಂಡಿದ್ದರು. ಇದೀಗ ಪೊಲೀಸರ ಲಾಠಿ ಚಾರ್ಜ್​ ವಿರುದ್ಧ ಭಾರತೀಯ ಕಿಸಾನ್​ ಯೂನಿಯನ್​ (ಬಿಕೆಯು) ನಾಯಕ ರಾಕೇಶ್​ ಟಿಕಾಯತ್​ (Rakesh Tikait) ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ (Central Government)ಮತ್ತು ಹರ್ಯಾಣ ರಾಜ್ಯ ಸರ್ಕಾರ (Haryana Government)ಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಟಿಕಾಯತ್​, ದೇಶವನ್ನು ಸರ್ಕಾರಿ ತಾಲಿಬಾನಿಗಳು ಆಕ್ರಮಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೇಶದಲ್ಲಿ ಸರ್ಕಾರಿ ತಾಲಿಬಾನ್​​ ಕಮಾಂಡರ್​ಗಳು ಇದ್ದಾರೆ. ಆ ಕಮಾಂಡರ್​ಗಳನ್ನು ಮೊದಲು ಗುರುತಿಸಬೇಕು. ಪ್ರತಿಭಟನಾಕಾರರ ತಲೆ ಒಡೆಯಿರಿ ಎಂದು ಹೇಳುವವರೂ ಕೂಡ ಅದೇ ಸರ್ಕಾರಿ ತಾಲಿಬಾನ್​​ನ ಕಮಾಂಡರ್​ಗಳೇ ಆಗಿದ್ದಾರೆ ಎಂದು ಹೇಳಿದ್ದಾರೆ. ನಿನ್ನೆ ಲಾಠಿ ಚಾರ್ಜ್​ ಆದ ಬೆನ್ನಲ್ಲೇ, ಕರ್ನಾಲ್​ನ ಸಬ್​ ಡಿವಿಜಿನಲ್​ ಮ್ಯಾಜಿಸ್ಟ್ರೇಟ್​​​ ಆಯುಶ್​ ಸಿನ್ಹಾ ಅವರ ವಿಡಿಯೋವೊಂದು ವೈರಲ್​ ಆಗಿತ್ತು. ಅವರು ಪೊಲೀಸರ ಬಳಿ, ಪ್ರತಿಭಟನಾಕಾರರ ತಲೆ ಒಡೆಯಿರಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕೇಳುತ್ತಿತ್ತು. ಅದನ್ನೇ ಉಲ್ಲೇಖಿಸಿ, ರಾಕೇಶ್​ ಟಿಕಾಯತ್​ ಆಕ್ರೋಶ ಹೊರಹಾಕಿದ್ದಾರೆ.

ನಿನ್ನೆ ಬಿಜೆಪಿ ಸಭೆಯನ್ನು, ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​ ಆಗಮನವನ್ನು ವಿರೋಧಿಸಿ ಕರ್ನಾಲ್​ ಹೆದ್ದಾರಿಗಳ ಮೇಲೆ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್​ ನಡೆಸಿದ ಪರಿಣಾಮ ಸುಮಾರು 10 ಮಂದಿ ಗಾಯಗೊಂಡಿದ್ದರು. ಈ ಲಾಠಿ ಚಾರ್ಜ್ ವಿರುದ್ಧ ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿ, ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಸೇರಿ ಹಲವು ನಾಯಕರು ತಿರುಗಿಬಿದ್ದಿದ್ದಾರೆ. ಅಷ್ಟೇ ಅಲ್ಲ, ಪೊಲೀಸರ ಕ್ರಮ ವಿರೋಧಿಸಿ, ಇಡೀ ಹರ್ಯಾಣದ ಪ್ರತಿ ಟೋಲ್​ ಪ್ಲಾಜಾ, ಹೆದ್ದಾರಿಗಳನ್ನೂ ರೈತರು ಬಂದ್​ ಮಾಡಿದ್ದರು.

ಇದನ್ನೂ ಓದಿ: ನೀನು ಗಂಡಸಾಗಿರಬಹುದು, ಆದರೆ ನಿನಗಿಂತ ಹೆಚ್ಚು ಪ್ರಬುದ್ಧತೆ ನನಗಿದೆ; ಸಿಟ್ಟಾದ ವೈಷ್ಣವಿ

JioPhone Next: ಜಿಯೋ ಫೋನ್ ನೆಕ್ಸ್ಟ್‌ ಬುಕ್ಕಿಂಗ್​ಗೆ ದಿನಾಂಕ ನಿಗದಿ: ಭಾರತದಲ್ಲಿ ಇದರ ಬೆಲೆ ಎಷ್ಟು?

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ