AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃಂದಾವನದಲ್ಲಿ ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆ ಉದ್ಘಾಟನೆ

ಉತ್ತರಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿ ಬಾಲಕಿಯರ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್​​​​ ಸಿಂಗ್​​​​ ಸೋಮವಾರ ಉದ್ಘಾಟಿಸಿದ್ದಾರೆ. ಇದು ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆಯಾಗಿದೆ. "ಮಹಿಳಾ ಸಬಲೀಕರಣದ ಇತಿಹಾಸದಲ್ಲಿ ಸುವರ್ಣ ಕ್ಷಣ" ಎಂದು ಬಣ್ಣಿಸಿದರು ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.

ವೃಂದಾವನದಲ್ಲಿ ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆ ಉದ್ಘಾಟನೆ
ಅಕ್ಷಯ್​ ಪಲ್ಲಮಜಲು​​
|

Updated on: Jan 03, 2024 | 5:59 PM

Share

ಲಕ್ನೋ, ಜ.3: ಉತ್ತರಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿ (Vrindavan) ಬಾಲಕಿಯರ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್​​​​ ಸಿಂಗ್​​​​ ಸೋಮವಾರ ಉದ್ಘಾಟಿಸಿದ್ದಾರೆ. ಇದು ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆಯಾಗಿದೆ. “ಮಹಿಳಾ ಸಬಲೀಕರಣದ ಇತಿಹಾಸದಲ್ಲಿ ಸುವರ್ಣ ಕ್ಷಣ” ಎಂದು ಬಣ್ಣಿಸಿದರು ರಾಜನಾಥ್ ಸಿಂಗ್ (Rajnath Singh ) ಬಣ್ಣಿಸಿದ್ದಾರೆ. ಇದು ಬಾಲಕಿಯರಿಗೆ ಬೆಳಕು ನೀಡಲಿದೆ ಎಂದು ಹೇಳಿದ್ದಾರೆ. ತಾಯ್ನಾಡಿಗೆ ಸೇವೆ ಸಲ್ಲಿಸಲು ಸಶಸ್ತ್ರ ಪಡೆಗಳನ್ನು ಸೇರಲು ಇದು ಮಹಿಳೆಯರಿಗೆ ಉತ್ತಮ ಅವಕಾಶ ಎಂದು ಹೇಳಿದ್ದಾರೆ.

ಈ ಶಾಲೆಯಲ್ಲಿ ಸುಮಾರು 870 ವಿದ್ಯಾರ್ಥಿಗಳನ್ನು ಹೊಂದಿದ್ದು, ಇಂತಹ ಬಾಲಕಿಯರ ಸೈನಿಕ ಶಾಲೆಯನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಎನ್‌ಜಿಒಗಳು/ಖಾಸಗಿ/ರಾಜ್ಯ ಸರ್ಕಾರಿ ಶಾಲೆಗಳ ಸಹಭಾಗಿತ್ವದಲ್ಲಿ 100 ಹೊಸ ಸೈನಿಕ ಶಾಲೆಗಳನ್ನು ತೆರೆಯಲಾಗುವುದು ಎಂದು ಹೇಳಿದರು. ಅದರಲ್ಲಿ ಈಗಾಗಲೇ 42 ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಸಿಬಿಎಸ್‌ಇ-ಸಂಯೋಜಿತ ಶಾಲೆಯಲ್ಲಿ ತರಬೇತಿಯನ್ನು ಮಾಜಿ ಸೈನಿಕರಿಂದ ನೀಡಲಾಗುವುದು. ಸಂಸ್ಥೆಯು 120 ಸೀಟುಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದೆ.

ಇನ್ನು ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ರಾಜನಾಥ್​​​ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ , ಸರ್ಕಾರವು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೆ ಸರಿಯಾದ ಸ್ಥಾನವನ್ನು ನೀಡಿದೆ. ಅನೇಕ ವರ್ಷಗಳಿಂದ ಮಹಿಳೆಯರಿಗೆ ಹೆಚ್ಚಿನ ಸ್ಥಾನವನ್ನು ಸೇನೆಯಲ್ಲಿ ನೀಡಿರಲಿಲ್ಲ. ಮಹಿಳೆಯರು ಕೂಡ ದೇಶದ ರಕ್ಷಣೆಯಲ್ಲಿ ಪುರುಷರಂತೆ ಮಹಿಳೆಯರು ಸಮಾನರಾಗಿರುತ್ತಾರೆ. ಈ ಶಾಲೆಯ ಮೂಲಕ ರಕ್ಷಣಾ ವ್ಯವಸ್ಥೆಯಲ್ಲಿ ಹಾಗೂ ಮಹಿಳೆಯರ ಸಬಲೀಕರಣದಲ್ಲಿ ಸುವರ್ಣ ಯುಗ ಎಂದು ಹೇಳಿದ್ದಾರೆ.

ಇದನ್ನೂ ಓದಿ:  08 ಕೌನ್ಸಿಲರ್, ವಾರ್ಡ್ ಬಾಯ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಉದ್ಘಾಟನಾ ಸಮಾರಂಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​​​ ಭಾಗವಹಿಸಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಸಬಲೀಕರಣವಿಲ್ಲದೆ ಸದೃಢ ಸಮಾಜ ಸಾಧ್ಯವಿಲ್ಲ. ಇದಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಸಮಾಜವನ್ನು ಸಂಪ್ರದಾಯವಾದಿ ಮನಸ್ಥಿತಿಯಿಂದ ಹೊರತರಬೇಕು ಎಂದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್