AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃಂದಾವನದಲ್ಲಿ ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆ ಉದ್ಘಾಟನೆ

ಉತ್ತರಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿ ಬಾಲಕಿಯರ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್​​​​ ಸಿಂಗ್​​​​ ಸೋಮವಾರ ಉದ್ಘಾಟಿಸಿದ್ದಾರೆ. ಇದು ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆಯಾಗಿದೆ. "ಮಹಿಳಾ ಸಬಲೀಕರಣದ ಇತಿಹಾಸದಲ್ಲಿ ಸುವರ್ಣ ಕ್ಷಣ" ಎಂದು ಬಣ್ಣಿಸಿದರು ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.

ವೃಂದಾವನದಲ್ಲಿ ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆ ಉದ್ಘಾಟನೆ
ಅಕ್ಷಯ್​ ಪಲ್ಲಮಜಲು​​
|

Updated on: Jan 03, 2024 | 5:59 PM

Share

ಲಕ್ನೋ, ಜ.3: ಉತ್ತರಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿ (Vrindavan) ಬಾಲಕಿಯರ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್​​​​ ಸಿಂಗ್​​​​ ಸೋಮವಾರ ಉದ್ಘಾಟಿಸಿದ್ದಾರೆ. ಇದು ದೇಶದ ಮೊದಲ ಬಾಲಕಿಯರ ಸೈನಿಕ ಶಾಲೆಯಾಗಿದೆ. “ಮಹಿಳಾ ಸಬಲೀಕರಣದ ಇತಿಹಾಸದಲ್ಲಿ ಸುವರ್ಣ ಕ್ಷಣ” ಎಂದು ಬಣ್ಣಿಸಿದರು ರಾಜನಾಥ್ ಸಿಂಗ್ (Rajnath Singh ) ಬಣ್ಣಿಸಿದ್ದಾರೆ. ಇದು ಬಾಲಕಿಯರಿಗೆ ಬೆಳಕು ನೀಡಲಿದೆ ಎಂದು ಹೇಳಿದ್ದಾರೆ. ತಾಯ್ನಾಡಿಗೆ ಸೇವೆ ಸಲ್ಲಿಸಲು ಸಶಸ್ತ್ರ ಪಡೆಗಳನ್ನು ಸೇರಲು ಇದು ಮಹಿಳೆಯರಿಗೆ ಉತ್ತಮ ಅವಕಾಶ ಎಂದು ಹೇಳಿದ್ದಾರೆ.

ಈ ಶಾಲೆಯಲ್ಲಿ ಸುಮಾರು 870 ವಿದ್ಯಾರ್ಥಿಗಳನ್ನು ಹೊಂದಿದ್ದು, ಇಂತಹ ಬಾಲಕಿಯರ ಸೈನಿಕ ಶಾಲೆಯನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಎನ್‌ಜಿಒಗಳು/ಖಾಸಗಿ/ರಾಜ್ಯ ಸರ್ಕಾರಿ ಶಾಲೆಗಳ ಸಹಭಾಗಿತ್ವದಲ್ಲಿ 100 ಹೊಸ ಸೈನಿಕ ಶಾಲೆಗಳನ್ನು ತೆರೆಯಲಾಗುವುದು ಎಂದು ಹೇಳಿದರು. ಅದರಲ್ಲಿ ಈಗಾಗಲೇ 42 ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಸಿಬಿಎಸ್‌ಇ-ಸಂಯೋಜಿತ ಶಾಲೆಯಲ್ಲಿ ತರಬೇತಿಯನ್ನು ಮಾಜಿ ಸೈನಿಕರಿಂದ ನೀಡಲಾಗುವುದು. ಸಂಸ್ಥೆಯು 120 ಸೀಟುಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದೆ.

ಇನ್ನು ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ರಾಜನಾಥ್​​​ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ , ಸರ್ಕಾರವು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೆ ಸರಿಯಾದ ಸ್ಥಾನವನ್ನು ನೀಡಿದೆ. ಅನೇಕ ವರ್ಷಗಳಿಂದ ಮಹಿಳೆಯರಿಗೆ ಹೆಚ್ಚಿನ ಸ್ಥಾನವನ್ನು ಸೇನೆಯಲ್ಲಿ ನೀಡಿರಲಿಲ್ಲ. ಮಹಿಳೆಯರು ಕೂಡ ದೇಶದ ರಕ್ಷಣೆಯಲ್ಲಿ ಪುರುಷರಂತೆ ಮಹಿಳೆಯರು ಸಮಾನರಾಗಿರುತ್ತಾರೆ. ಈ ಶಾಲೆಯ ಮೂಲಕ ರಕ್ಷಣಾ ವ್ಯವಸ್ಥೆಯಲ್ಲಿ ಹಾಗೂ ಮಹಿಳೆಯರ ಸಬಲೀಕರಣದಲ್ಲಿ ಸುವರ್ಣ ಯುಗ ಎಂದು ಹೇಳಿದ್ದಾರೆ.

ಇದನ್ನೂ ಓದಿ:  08 ಕೌನ್ಸಿಲರ್, ವಾರ್ಡ್ ಬಾಯ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಉದ್ಘಾಟನಾ ಸಮಾರಂಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​​​ ಭಾಗವಹಿಸಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಸಬಲೀಕರಣವಿಲ್ಲದೆ ಸದೃಢ ಸಮಾಜ ಸಾಧ್ಯವಿಲ್ಲ. ಇದಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಸಮಾಜವನ್ನು ಸಂಪ್ರದಾಯವಾದಿ ಮನಸ್ಥಿತಿಯಿಂದ ಹೊರತರಬೇಕು ಎಂದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ