Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಪತ್ತನಂತಿಟ್ಟದಲ್ಲಿ ಕಾರಿಗೆ ಬೆಂಕಿ ತಗುಲಿ ದಂಪತಿ ಸಾವು; ಆತ್ಮಹತ್ಯೆ ಶಂಕೆ

ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರಿಂದ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು. ಕಾರಿನಿಂದ ಬೆಂಕಿ ಹೊತ್ತಿಕೊಂಡಿರುವುದು ಅವರ ಗಮನಕ್ಕೆ ಬಂದಿದೆ. ಮೊದಲಿಗೆ ಈ ಪ್ರದೇಶದಲ್ಲಿದ್ದ ಕಸದ ರಾಶಿಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ಭಾವಿಸಿದ್ದರು. ಆದಾಗ್ಯೂ, ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ

ಕೇರಳ: ಪತ್ತನಂತಿಟ್ಟದಲ್ಲಿ ಕಾರಿಗೆ ಬೆಂಕಿ ತಗುಲಿ ದಂಪತಿ ಸಾವು; ಆತ್ಮಹತ್ಯೆ ಶಂಕೆ
ಸುಟ್ಟು ಕರಕಲಾದ ಕಾರು
Follow us
ರಶ್ಮಿ ಕಲ್ಲಕಟ್ಟ
|

Updated on: Jul 26, 2024 | 9:02 PM

ಪತ್ತನಂತಿಟ್ಟ ಜುಲೈ  26: ಕೇರಳದ (Kerala) ಪತ್ತನಂತಿಟ್ಟ ಜಿಲ್ಲೆಯ ತಿರುವಲ್ಲಾದ ವೆಂಗಲ್‌ನಲ್ಲಿ ಶುಕ್ರವಾರ ನಿಗೂಢವಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು ಅರವತ್ತರ ಹರೆಯದ ದಂಪತಿಗಳು ಸುಟ್ಟು ಭಸ್ಮವಾಗಿದ್ದಾರೆ. ಮೃತರನ್ನು ತಿರುವಲ್ಲಾದ ತುಕಲಶ್ಶೇರಿ ನಿವಾಸಿಗಳಾದ ರಾಜು ಥಾಮಸ್ (69) ಮತ್ತು ಅವರ ಪತ್ನಿ ಲೈಜಿ ಥಾಮಸ್ (63) ಎಂದು ಗುರುತಿಸಲಾಗಿದೆ. ತುಕಲಶ್ಶೇರಿಯ ಕೌನ್ಸಿಲರ್ ರೀನಾ ವಿಶಾಲ್ ಅವರ ಪ್ರಕಾರ, ಸಾವಿಗೀಡಾದ ದಂಪತಿ ಅರವತ್ತರ ಆಸುಪಾಸಿನವರು. ದಂಪತಿಯ ಏಕೈಕ ಪುತ್ರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೇಹ ಪೂರ್ತಿ ಸುಟ್ಟು ಕರಕಲಾಗಿದ್ದರಿಂದ ಪೊಲೀಸರು ಅವರನ್ನು ಗುರುತಿಸಲು ಕಷ್ಟಪಡುತ್ತಿದ್ದರು. ಆದರೆ ಮಹಿಳೆಯನ್ನು ಆಕತೆ ಧರಿಸಿದ್ದ ಆಭರಣಗಳ ಮೂಲಕ ಗುರುತಿಸಲಾಯಿತು.

ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರಿಂದ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು. ಕಾರಿನಿಂದ ಬೆಂಕಿ ಹೊತ್ತಿಕೊಂಡಿರುವುದು ಅವರ ಗಮನಕ್ಕೆ ಬಂದಿದೆ. ಮೊದಲಿಗೆ ಈ ಪ್ರದೇಶದಲ್ಲಿದ್ದ ಕಸದ ರಾಶಿಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ಭಾವಿಸಿದ್ದರು.  ಆದರೆ ಇದೊಂದು ಆತ್ಮಹತ್ಯೆ ಪ್ರಕರಣ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬರುತ್ತಿದೆ ಎಂದು ತಿರುವಲ್ಲ ಡಿವೈಎಸ್ಪಿ ಅರ್ಷದ್ ತಿಳಿಸಿದ್ದಾರೆ. ಕೌಟುಂಬಿಕ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ ಎಂದು ಅವರು ಹೇಳಿರುವುದಾಗಿ ಮಲಯಾಳಂ ರಿಪೋರ್ಟರ್ ಟಿವಿ ವರದಿ ಮಾಡಿದೆ.

ಆದಾಗ್ಯೂ, ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟುಹೋಗಿದ್ದ ಕಾರಿನೊಳಗೆ ಸಿಲುಕಿಕೊಂಡಿದ್ದ ಇಬ್ಬರ ಜೀವಗಳನ್ನು ಉಳಿಸಲು ಸಾಧ್ಯವಾಗಿಲ್ಲ. ಈ ರಸ್ತೆಯನ್ನು ಸಾಮಾನ್ಯವಾಗಿ ಪ್ರಯಾಣಿಕರು ಬಳಸುವುದಿಲ್ಲ. ನಿರ್ದಿಷ್ಟ ಉದ್ದೇಶಕ್ಕಾಗಿ ಅಥವಾ ಪ್ರಕೃತಿಯನ್ನು ನೋಡುವುದಕ್ಕೆ ಮಾತ್ರ ಕೆಲವರು ಇಲ್ಲಿ ಬರುತ್ತಾರೆ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ.

ಇದನ್ನೂ ಓದಿ: ಎಂಎಸ್‌ಪಿ ಕುರಿತು ಸ್ವಾಮಿನಾಥನ್ ಸಲಹೆಯನ್ನು ಯುಪಿಎ ತಿರಸ್ಕರಿಸಿತ್ತು: ಶಿವರಾಜ್ ಸಿಂಗ್ ಚೌಹಾಣ್

ಇದು ಅಪಘಾತವೋ ಅಥವಾ ಇನ್ನಾವುದೇ ಅಂಶವೋ ಎಂಬುದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದನ್ನು ತಿಳಿಯಲು  ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!