AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವವನ್ನೇ ತೆಗೆದ ಕನಸು; ಯೂಟ್ಯೂಬ್​ನಲ್ಲಿ ಮಂತ್ರ ಕಲಿತು 12 ವರ್ಷದ ಬಾಲಕಿಯ ಜೀವ ಬಲಿ ನೀಡಿದ ದಂಪತಿ

ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನರ ಬಲಿಯ ಘಟನೆಯೊಂದು ತೀವ್ರ ಆಘಾತ ಸೃಷ್ಟಿಸಿದೆ. ದಂಪತಿಗೆ ಕನಸಿನಲ್ಲಿ ಈ ಬಗ್ಗೆ ಆದೇಶ ಸಿಕ್ಕಿತು. ಬಳಿಕ ಯೂಟ್ಯೂಬ್‌ನಲ್ಲಿ ಮಂತ್ರವನ್ನು ಕಲಿತು ತನ್ನ ಮಗನ ರೋಗವನ್ನು ಗುಣಪಡಿಸಲು ಅವರು ತಮ್ಮ ಅಣ್ಣನ ಮಗಳನ್ನೇ ಬಲಿಕೊಟ್ಟಿದ್ದಾರೆ.

ಜೀವವನ್ನೇ ತೆಗೆದ ಕನಸು; ಯೂಟ್ಯೂಬ್​ನಲ್ಲಿ ಮಂತ್ರ ಕಲಿತು 12 ವರ್ಷದ ಬಾಲಕಿಯ ಜೀವ ಬಲಿ ನೀಡಿದ ದಂಪತಿ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Dec 02, 2024 | 8:24 PM

ಡಿಯೋರಿಯಾ: ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಮದುವೆ ಸಮಾರಂಭಕ್ಕೆ ಬಂದಿದ್ದ ದಂಪತಿ ತಮ್ಮ ಅಣ್ಣನ ಮಗಳ (ಸೋದರ ಸೊಸೆ) ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಆರೋಪಿ ದಂಪತಿಯನ್ನು ಪೊಲೀಸರು ಹಿಡಿದಾಗ, ಕನಸಿನಲ್ಲಿ ದೇವಿಯು ಈ ರೀತಿ ಮಾಡಲು ತಮಗೆ ಆದೇಶಿಸಿದ್ದಾಳೆ ಎಂದು ಹೇಳಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಉತ್ತರಪ್ರದೇಶದ ಡಿಯೋರಿಯಾದಲ್ಲಿ 12 ವರ್ಷದ ಅಮಾಯಕ ಬಾಲಕಿಯ ಕೊಲೆ ನಡೆದಿರುವುದು ಸಂಚಲನ ಮೂಡಿಸಿದೆ. ಈ ಹುಡುಗಿಯನ್ನು ಮಾಟ ಮತ್ತು ಕುರುಡು ನಂಬಿಕೆಯ ಪ್ರಭಾವದಿಂದ ಆಕೆಯ ತಂದೆಯ ತಂಗಿ- ಭಾವ ಕೊಲೆ ಮಾಡಿದ್ದಾರೆ. ದೇವಿಗೆ ಬಲಿ ಕೊಡಲು ದಂಪತಿ ಈ ಕೃತ್ಯ ಎಸಗಿದ್ದಾರೆ. ಡಿಯೋರಿಯಾದ ಭಟ್ನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ನವೆಂಬರ್ 26ರ ರಾತ್ರಿ ನಡೆದ ಈ ಆಘಾತಕಾರಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿ ಹಲವು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಯುವತಿಯ ಕೊಲೆ ಮಾಡಿ ಮತ್ತೆ ವಾಪಾಸ್ ಬಂದು ಹೆಣದ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ ಸೀರಿಯಲ್ ಕಿಲ್ಲರ್!

ನವೆಂಬರ್ 27ರ ಬೆಳಿಗ್ಗೆ ಬಾಲಕಿಯ ಶವ ಪತ್ತೆಯಾಗಿತ್ತು. ಈ ಬಾಲಕಿಯನ್ನು ಭಟ್ನಿಯ ಭರ್ಹೆ ಚೌರಾಹ ನಿವಾಸಿ ಅವಧೇಶ್ ಯಾದವ್ ಅವರ 12 ವರ್ಷದ ಮಗಳು ಎಂದು ಗುರುತಿಸಲಾಗಿದೆ. ಅವಧೇಶ್ ಯಾದವ್ ತಮ್ಮ ಸಂಬಂಧಿಕರ ಮದುವೆಗೆಂದು ಇಲ್ಲಿಗೆ ಬಂದಿದ್ದರು. ಉತ್ತರಾಖಂಡದಿಂದ ಬಂದಿದ್ದ ಆರೋಪಿ ಶೇಷನಾಥ ಯಾದವ್ ಮತ್ತು ಆತನ ಪತ್ನಿ ಸಬಿತಾ ಕೂಡ ಇದೇ ಕಾರ್ಯಕ್ರಮಕ್ಕೆ ಬಂದಿದ್ದರು. ಡಿಯೋರಿಯಾ ಎಸ್ಪಿ ಪ್ರಕಾರ, ಆ ಸಮಯದಲ್ಲಿ ಈ ಪ್ರಕರಣವನ್ನು ಅಸಾಮಾನ್ಯ ಸಾವು ಎಂದು ದಾಖಲಿಸಲಾಗಿತ್ತು. ಆದರೆ ಪೊಲೀಸರು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದಾಗ, ಈ ಘಟನೆಯ ಪದರಗಳು ಬಿಚ್ಚಿಕೊಳ್ಳಲಾರಂಭಿಸಿದವು.

ಇದನ್ನೂ ಓದಿ: ಲವರ್​ನ ಕೊಂದು ಆತ್ಮಹತ್ಯೆಗೆ ಆನ್​ಲೈನ್​ನಲ್ಲಿ ಹಗ್ಗ ಆರ್ಡರ್​: ಪ್ರೀತಿ ಕೊಂದ ಕೊಲೆಗಾರನ ಸ್ಫೋಟಕ ಅಂಶ ಬೆಳಕಿಗೆ

ಕೊನೆಗೆ ಆರೋಪಿ ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ನವರಾತ್ರಿ ವೇಳೆ ಆರೋಪಿ ಶೇಷನಾಥನ ಪತ್ನಿ ಸವಿತಾ ಅವರ ಕನಸಿನಲ್ಲಿ ದೇವಿ ಬಂದಿರುವುದು ಪತ್ತೆಯಾಗಿದೆ. ಸವಿತಾ ತನ್ನ ಮಗನಿಗೆ 22 ವರ್ಷ ವಯಸ್ಸಾಗಿದ್ದು, ಮಾನಸಿಕವಾಗಿ ಅಸ್ವಸ್ಥನಾಗಿದ್ದ. ಕನಸಿನಲ್ಲಿ ದೇವಿಯು ಕನ್ಯೆಯ ಹುಡುಗಿಯನ್ನು ಬಲಿಕೊಟ್ಟರೆ ಆಕೆಯ ಮಗ ಗುಣಮುಖನಾಗುತ್ತಾನೆ ಎಂದು ಆಕೆಗೆ ಆದೇಶಿಸಿದ್ದಳು. ಇದಾದ ನಂತರ ಆರೋಪಿ ಶೇಷನಾಥ್ ಯೂಟ್ಯೂಬ್​ನಲ್ಲಿ ದೇವಿಗೆ ಬಲಿ ಕೊಡುವ ಮಂತ್ರ ಕಲಿತು ಈ ಮದುವೆಗೆ ಭಟ್ನಿಗೆ ಬಂದಾಗ ಇಲ್ಲಿದ್ದ ಹುಡುಗಿಯನ್ನು ನೋಡಿ ಬಲಿ ಕೊಡಲು ಪ್ಲಾನ್ ಮಾಡಿದ್ದ.

ಮನೆಯವರೆಲ್ಲಾ ಮದುವೆ ಸಮಾರಂಭದಲ್ಲಿ ನಿರತರಾಗಿದ್ದಾಗ, ಈ ವೇಳೆ ಆರೋಪಿಗಳು ಬಾಲಕಿಗೆ ಆಮಿಷ ಒಡ್ಡಿ ಆಕೆಯನ್ನು ತಡೆದು, ಅವಕಾಶ ಸಿಕ್ಕಾಗ ಬಲಿ ಕೊಟ್ಟಿದ್ದಾರೆ. ಈ ಘಟನೆಯ ನಂತರ ಆರೋಪಿಗಳು ಬಾಲಕಿಯ ಶವವನ್ನು ಶಾಲಿನಲ್ಲಿ ಸುತ್ತಿ ಮನೆಯಿಂದ ಸ್ವಲ್ಪ ದೂರ ಎಸೆದಿದ್ದಾರೆ. ಮರುದಿನ ಬಾಲಕಿಯ ಶವ ಪತ್ತೆಯಾದಾಗ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್