AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಕೇರ್ ಸೆಂಟರ್​ನಲ್ಲಿ ಹಸೆಮಣೆ ಏರಿದ ನವಜೋಡಿ; ಮದುವೆಗೆ ಕೂಡಿಟ್ಟ ಹಣವೂ ದಾನ

ಹಲವಾರು ಮದುವೆ ಸಮಾರಂಭ, ರಜಾ ಪ್ರವಾಸ, ಸಾಮಾಜಿಕ, ಸಾರ್ವಜನಿಕ ಕಾರ್ಯಕ್ರಮಗಳು ನಡೆಸಲಾಗುತ್ತಿಲ್ಲ. ಆದರೆ, ಲಾಕ್​ಡೌನ್, ಸೀಮಿತ ಅತಿಥಿಗಳ ನಿರ್ಬಂಧದ ಮಧ್ಯೆಯೂ ಯುವಜೋಡಿಗಳು ವಿಭಿನ್ನ ರೀತಿಯಲ್ಲಿ ಮದುವೆ ಆಗುತ್ತಿದ್ದಾರೆ.

ಕೊವಿಡ್ ಕೇರ್ ಸೆಂಟರ್​ನಲ್ಲಿ ಹಸೆಮಣೆ ಏರಿದ ನವಜೋಡಿ; ಮದುವೆಗೆ ಕೂಡಿಟ್ಟ ಹಣವೂ ದಾನ
ಪ್ರಾತಿನಿಧಿಕ
TV9 Web
| Edited By: |

Updated on:Jun 08, 2021 | 5:49 PM

Share

ಕೊರೊನಾ ಸೋಂಕು ನಮ್ಮೆಲ್ಲಾ ಯೋಜನೆಗಳನ್ನು ತಲೆಕೆಳಗಾಗಿಸಿ ಬಿಟ್ಟಿದೆ. ಮೊದಲನೇ ಅಲೆಯ ಅಂತ್ಯದ ಬಳಿಕ ಕೊವಿಡ್ ಸಾಂಕ್ರಾಮಿಕದ ಸಮಸ್ಯೆ ಭಾರತದಲ್ಲಿ ಇನ್ನು ಇಲ್ಲ ಎಂದೇ ಅಂದುಕೊಳ್ಳಲಾಗಿತ್ತು. ಆದರೆ, ಈ ವರ್ಷದ ಆರಂಭದಲ್ಲಿ ಮತ್ತೆ ಎರಡನೇ ಅಲೆ, ಲಾಕ್​ಡೌನ್ ಪ್ರಕ್ರಿಯೆ ಆರಂಭವಾಯಿತು. ಮೊದಲ ಅಲೆಯಲ್ಲಿ ಅನುಭವಿಸಿದ ಕೊವಿಡ್-19 ಪ್ರಕರಣಗಳು, ಸಾವು- ನೋವಿಗಿಂತ ಈ ಬಾರಿ ಅಧಿಕ ಸಮಸ್ಯೆ ಎದುರಿಸುವಂತಾಯಿತು. ಈ ಎಲ್ಲಾ ಕಾರಣಗಳಿಂದಾಗಿ ಜನರ ಯೋಜನೆಗಳು ಪ್ಲಾನ್ ಪ್ರಕಾರ ನಡೆಸಲಾಗುತ್ತಿಲ್ಲ.

ಹಲವಾರು ಮದುವೆ ಸಮಾರಂಭ, ರಜಾ ಪ್ರವಾಸ, ಸಾಮಾಜಿಕ, ಸಾರ್ವಜನಿಕ ಕಾರ್ಯಕ್ರಮಗಳು ನಡೆಸಲಾಗುತ್ತಿಲ್ಲ. ಆದರೆ, ಲಾಕ್​ಡೌನ್, ಸೀಮಿತ ಅತಿಥಿಗಳ ನಿರ್ಬಂಧದ ಮಧ್ಯೆಯೂ ಯುವಜೋಡಿಗಳು ವಿಭಿನ್ನ ರೀತಿಯಲ್ಲಿ ಮದುವೆ ಆಗುತ್ತಿದ್ದಾರೆ. ವಿಶಿಷ್ಠವಾಗಿ ಹಸೆಮಣೆ ಏರುತ್ತಿದ್ದಾರೆ.

ಈಗ ಅಂತಹದ್ದೇ ಒಂದು ಘಟನೆ ನಡೆದಿದೆ. ಮಹಾರಾಷ್ಟ್ರ, ಅಹಮದ್​ನಗರ್​ನ ಯುವಜೋಡಿ ಕೊವಿಡ್ ಕೇರ್ ಸೆಂಟರ್​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇತ್ತೀಚೆಗಷ್ಟೇ ವಿವಾಹ ನಡೆಸುವ ಬಗ್ಗೆ ಅಹಮದ್​ನಗರ್ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿತ್ತು. ಆ ಬಳಿಕ ಇದೀಗ, ಯುವಜೋಡಿ ಕೊವಿಡ್ ಸೆಂಟರ್​ನಲ್ಲಿ ಮದುವೆಯಾಗಿದ್ದಾರೆ. ಈ ವಿಶೇಷ ಸ್ಥಳವನ್ನು ಮದುವೆಯಾಗಲು ಬಳಸುವುದರ ಜೊತೆಗೆ, ಮತ್ತೊಂದು ಹೆಮ್ಮೆ ಪಡುವಂಥ ಕೆಲಸವನ್ನೂ ಅವರು ಮಾಡಿದ್ದಾರೆ. ಮದುವೆಗಾಗಿ ಅವರು ಕೂಡಿಟ್ಟಿದ್ದ ಹಣವನ್ನು ಕೊವಿಡ್ ಕೇರ್ ಸೆಂಟರ್​ಗೆ ನೀಡಿದ್ದಾರೆ.

ಎಂಎಲ್​ಎ ನಿಲೇಶ್ ಲಂಕೆ ಶರದ್ ಚಂದ್ರಜೀ ಪವಾರ್ ಆರೋಗ್ಯ ಮಂದಿರ್ ಕೊವಿಡ್ ಸೆಂಟರ್​ನಲ್ಲಿ ಯುವಜೋಡಿ ಹಸೆಮಣೆ ಏರಿದ್ದಾರೆ. ಅನಿಕೇತ್ ವ್ಯವಹಾರೆ ಮತ್ತು ಆರತಿ ಶಿಂಧೆ ಹಾಗೂ ರಾಜಶ್ರೀ ಕಾಳೆ ಮತ್ತು ಜನಾರ್ದನ್ ಕಡಮ್ ತಮ್ಮ ಹೊಸ ಬದುಕನ್ನು ಈ ರೀತಿ ಮದುವೆ ಆಯೋಜಿಸುವ ಮೂಲಕ ಆರಂಭಿಸಲು ಉದ್ದೇಶಿಸಿದ್ದರು. ಆ ಮೂಲಕ, ಕೊರೊನಾದಿಂದ ಕೇರ್ ಸೆಂಟರ್​ನಲ್ಲಿ ಇರುವ ಸ್ಥಳೀಯರಿಗೆ ಶುಭಸುದ್ದಿ ನೀಡಿದ್ದರು.

ಅಷ್ಟೇ ಅಲ್ಲದೆ, ಈ ಎರಡೂ ಜೋಡಿಗಳು ಫೇಸ್ ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರ ಅಗತ್ಯ ವಸ್ತುಗಳನ್ನು ಕೊವಿಡ್ ಸೆಂಟರ್​ಗೆ ನೀಡಿದ್ದಾರೆ. 37 ಸಾವಿರ ರೂಪಾಯಿಯ ಹಣಕಾಸು ಸಹಾಯವನ್ನು ಕೂಡ ಕೇರ್ ಸೆಂಟರ್​ಗೆ ಮಾಡಿದ್ದಾರೆ. ಕೊರೊನಾ ಮಹಾಮಾರಿಯಿಂದ ಜಗತ್ತೇ ತತ್ತರಿಸಿ ಹೋಗಿದೆ. ನಮ್ಮ ಸ್ಥಳೀಯ ಜನರು ಕೂಡ ಕೊವಿಡ್​ಗೆ ತುತ್ತಾಗಿ ಕೇರ್ ಸೆಂಟರ್​​ನಲ್ಲಿ ಇದ್ದಾರೆ. ಈ ಕಷ್ಟದ ಸಮಯದಲ್ಲಿ ಅವರನ್ನು ಚಿಯರ್ ಅಪ್ ಮಾಡಲು ನಾವು ಈ ನಿರ್ಧಾರ ಕೈಗೊಂಡೆವು ಎಂದು ದಂಪತಿ ತಿಳಿಸಿದ್ದಾರೆ.

ಕೊವಿಡ್ ಕೇರ್ ಸೆಂಟರ್​ನಲ್ಲಿ ವಿವಾಹ ಸಮಾರಂಭವನ್ನು ಕೊವಿಡ್-19 ಮಾರ್ಗಸೂಚಿಗಳ ಅನುಸಾರ ನಡೆಸಲಾಗಿದೆ. ನವಜೋಡಿಗಳ ಜೊತೆಗೆ ಕೆಲವೇ ಕುಟುಂಬದ ಸದಸ್ಯರು ಭಾಗಿಯಾಗಿದ್ದಾರೆ. ಶಾಸಕ ನಿಲೇಶ್ ಲಂಕೆ ಕೂಡ ಮದುವೆ ಸಮಾರಂಭದಲ್ಲಿ ಭಾಗವಹಿಸಿ, ನವಜೋಡಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಮದುವೆ ನಡೆಯುತ್ತಿರುವಾಗ ಏಕಾಏಕಿ ಎದ್ದು ವಿಚಿತ್ರವಾಗಿ ಡ್ಯಾನ್ಸ್​ ಮಾಡಿದ ಮದುಮಗ; ವರನ ಕುಣಿತ ನೋಡಿ ವಧು ಕಂಗಾಲು

Shilpa Shetty Birthday: ವಿವಾಹಿತ ಪುರುಷ ರಾಜ್​ ಕುಂದ್ರಾ ಜೊತೆ ಶಿಲ್ಪಾ ಶೆಟ್ಟಿ ಮದುವೆ ಆಗಲು ಒಪ್ಪಿದ್ದೇಕೆ?

Published On - 5:35 pm, Tue, 8 June 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ