ಆರ್‌ಜಿ ಕರ್ ಮಾಜಿ ಪ್ರಾಂಶುಪಾಲರು ಮತ್ತು ಇತರ 4 ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೆ ನ್ಯಾಯಾಲಯ ಅನುಮತಿ

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಮತ್ತು ಸಂತ್ರಸ್ತೆಯ ಸಹೋದ್ಯೋಗಿಗಳಾಗಿರುವ ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಕೋರ್ಟ್ ಅನುಮತಿ ನೀಡಿದೆ. ಅಪರಾಧದ ರಾತ್ರಿ ಅವರು ವೈದ್ಯೆಯೊಂದಿಗೆ ಇದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ

ಆರ್‌ಜಿ ಕರ್ ಮಾಜಿ ಪ್ರಾಂಶುಪಾಲರು ಮತ್ತು ಇತರ 4 ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೆ ನ್ಯಾಯಾಲಯ ಅನುಮತಿ
ವೈದ್ಯರ ಪ್ರತಿಭಟನೆ
Follow us
|

Updated on:Aug 22, 2024 | 8:07 PM

ಕೋಲ್ಕತ್ತಾ ಆಗಸ್ಟ್ 22: 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯಾದ (Kolkata rape-murder case) ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರ ಪಾಲಿಗ್ರಾಫ್ ಪರೀಕ್ಷೆಯನ್ನು (polygraph test) ನಡೆಸಲು ಕೋಲ್ಕತ್ತಾ ನ್ಯಾಯಾಲಯವು ಸಿಬಿಐಗೆ ಒಪ್ಪಿಗೆ ನೀಡಿದೆ. ಸಂತ್ರಸ್ತೆಯ ಸಹೋದ್ಯೋಗಿಗಳಾಗಿರುವ ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೂ ಅನುಮತಿ ಲಭಿಸಿದೆ. ಅಪರಾಧದ ರಾತ್ರಿ ಅವರು ವೈದ್ಯೆಯೊಂದಿಗೆ ಇದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೋಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕಳೆದ ವಾರ ಕೋಲ್ಕತ್ತಾ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ ಸಿಬಿಐ ಘೋಷ್ ಅವರನ್ನು ಹಲವು ಬಾರಿ ವಿಚಾರಣೆಗೊಳಪಡಿಸಿದೆ. ವಿಚಾರಣೆಯ ಸಮಯದಲ್ಲಿ ಘೋಷ್ ಅವರ ಪ್ರತಿಕ್ರಿಯೆಗಳಲ್ಲಿ ವ್ಯತ್ಯಾಸ ಕಂಡುಬಂದ ಕಾರಣ ಸಿಬಿಐ  ಈಗ ಪಾಲಿಗ್ರಾಫ್ ಪರೀಕ್ಷೆಯನ್ನು ಪರಿಗಣಿಸುತ್ತಿದೆ.

“ನಾವು ಘೋಷ್ ಅವರ ಉತ್ತರಗಳನ್ನು ಮತ್ತಷ್ಟು ಪರಿಶೀಲಿಸಲು ಬಯಸುತ್ತೇವೆ, ಏಕೆಂದರೆ ನಮ್ಮ ಕೆಲವು ಪ್ರಶ್ನೆಗಳಿಗೆ ಉತ್ತರಗಳಲ್ಲಿ ವ್ಯತ್ಯಾಸಗಳಿವೆ. ಆದ್ದರಿಂದ, ನಾವು ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸುವ ಆಯ್ಕೆಯ ಬಗ್ಗೆ ಯೋಚಿಸುತ್ತಿದ್ದೇವೆ” ಎಂದು ಸಿಬಿಐ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಸುಪ್ರೀಂಕೋರ್ಟ್ ನಿರ್ಧಾರಕ್ಕೆ ಮೆಚ್ಚುಗೆ, ಸಿಬಿಐನ್ನು ಟೀಕಿಸಿದ ಟಿಎಂಸಿ

ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆಯನ್ನು ರಾಜಕೀಯಗೊಳಿಸಬೇಡಿ ಎಂಬ ಸುಪ್ರೀಂ ಕೋರ್ಟ್‌ನ ಹೇಳಿಕೆಯನ್ನು ಆಡಳಿತಾರೂಢ ಟಿಎಂಸಿ ಗುರುವಾರ ಸ್ವಾಗತಿಸಿದೆ. ಅದೇ ವೇಳೆ  ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತಪ್ಪುದಾರಿಗೆಳೆಯುವ ಸಂಗತಿಗಳನ್ನು ಪ್ರಸ್ತುತಪಡಿಸುತ್ತಿದೆ ಎಂದು ಆರೋಪಿಸಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರ ಅತ್ಯಾಚಾರ-ಕೊಲೆಯನ್ನು ರಾಜಕೀಯಗೊಳಿಸದಂತೆ ರಾಜಕೀಯ ಪಕ್ಷಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, “ಕಾನೂನು ಅದರ ಕ್ರಮ ಕೈಗೊಳ್ಳುತ್ತದೆ” ಎಂದು ಹೇಳಿದೆ. ವೈದ್ಯರ ಅಸಹಜ ಸಾವನ್ನು ದಾಖಲಿಸುವಲ್ಲಿ ಕೋಲ್ಕತ್ತಾ ಪೊಲೀಸರ ವಿಳಂಬವನ್ನು ನ್ಯಾಯಾಲಯವು “ಅತ್ಯಂತ ಗೊಂದಲದ್ದು ಎಂದು ಹೇಳಿದ್ದು, ಮುಷ್ಕರ ನಿರತ ವೈದ್ಯರು ಕರ್ತವ್ಯಕ್ಕೆ ಮರಳುವಂತೆ ಹೇಳಿದೆ.

ಇದನ್ನೂ ಓದಿ:  Mamata Banerjee: ಅತ್ಯಾಚಾರ ವಿರೋಧಿ ಕಾನೂನನ್ನು ಕಠಿಣಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಪತ್ರ

“ವಿಷಯವು ಉಪ-ನ್ಯಾಯಾಧೀನವಾಗಿರುವುದರಿಂದ ಸುಪ್ರೀಂಕೋರ್ಟ್ ಏನು ಹೇಳಿದೆ ಎಂಬುದರ ಕುರಿತು ನಾವು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ, ರಾಜಕೀಯ ಪಕ್ಷಗಳು ವಿಷಯವನ್ನು ರಾಜಕೀಯಗೊಳಿಸದಂತೆ ಮತ್ತು ಪ್ರತಿಭಟನಾನಿರತ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ಸೂಚಿಸುವ ಸುಪ್ರೀಂ ಕೋರ್ಟ್‌ನ  ಮಾತನ್ನು ನಾವು ಸ್ವಾಗತಿಸುತ್ತೇವೆ. ಕೆಲವು ರಾಜಕೀಯ ಪಕ್ಷಗಳು ಘಟನೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿವೆ ಮತ್ತು ಸಿಬಿಐ ತಿರುಚಿದ ಸಂಗತಿಗಳೊಂದಿಗೆ ಸಾರ್ವಜನಿಕರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ.

ತಮ್ಮ ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಘಟನೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿರುವ ರಾಜಕೀಯ ಪಕ್ಷಗಳು ಈಗ ಪಾಠ ಕಲಿಯಬೇಕು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Thu, 22 August 24