AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣ: ಕಿರಣ್ ಗೋಸಾವಿ ನ.8ರವರೆಗೆ ಪೊಲೀಸ್ ಕಸ್ಟಡಿಗೆ

ಕಿರಣ್ ಗೋಸಾವಿ ಅವರು ಕೆಪಿಜಿ ಡ್ರೀಮ್ಜ್ ಸೊಲ್ಯೂಷನ್ಸ್ ಎಂಬ ಕಂಪನಿಯನ್ನು ನಡೆಸುತ್ತಿದ್ದರು, ಇದು ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳಿಗೆ ವಿದೇಶದಲ್ಲಿ ಉದ್ಯೋಗದ ಭರವಸೆ ನೀಡಿತು. ಕಂಪನಿಯು ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿಕೊಂಡಿತು.

ವಂಚನೆ ಪ್ರಕರಣ: ಕಿರಣ್ ಗೋಸಾವಿ ನ.8ರವರೆಗೆ ಪೊಲೀಸ್ ಕಸ್ಟಡಿಗೆ
ಕಿರಣ್ ಗೋಸಾವಿ, ಆರ್ಯನ್ ಖಾನ್
TV9 Web
| Edited By: |

Updated on: Nov 05, 2021 | 4:49 PM

Share

ಮುಂಬೈ: 2018ರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ ಗೋಸಾವಿಯ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯ ಶುಕ್ರವಾರ ಮೂರು ದಿನಗಳ ಕಾಲ ವಿಸ್ತರಿಸಿದೆ. ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಗೋಸಾವಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಸ್ವತಂತ್ರ ಸಾಕ್ಷಿಯೂ ಆಗಿದ್ದರು. ವಂಚನೆ ಪ್ರಕರಣದಲ್ಲಿ ಪುಣೆ ಪೊಲೀಸರು ಆತನನ್ನು ಈ ಹಿಂದೆ ಬಂಧಿಸಿದ್ದರು ಮತ್ತು ನವೆಂಬರ್ 5 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಯಿತು. ಶುಕ್ರವಾರ, ನ್ಯಾಯಾಲಯವು ಗೋಸಾವಿಯ ಪೊಲೀಸ್ ಕಸ್ಟಡಿಯನ್ನು ಮೂರು ದಿನಗಳ ಕಾಲ ವಿಸ್ತರಿಸಿತು. ಕಳೆದ ವಾರ ಪುಣೆ ಪೊಲೀಸರು 2018 ರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ ಗೋಸಾವಿಯ ಬಂಧನವನ್ನು ದೃಢಪಡಿಸಿದರು. ಇದೇ ಪ್ರಕರಣದಲ್ಲಿ ಪುಣೆ ಪೊಲೀಸರು ಆತನ ವಿರುದ್ಧ ಲುಕೌಟ್ ಸುತ್ತೋಲೆ ಹೊರಡಿಸಿದಾಗಿನಿಂದ ಆತ ತಲೆಮರೆಸಿಕೊಂಡಿದ್ದ. 2018 ರ ವಂಚನೆ ಪ್ರಕರಣದಲ್ಲಿ ಗೋಸಾವಿಯನ್ನು ಪುಣೆಯ ಕಟ್ರಾಜ್ ಪ್ರದೇಶದ ಲಾಡ್ಜ್‌ನಿಂದ ಮುಂಜಾನೆ 3 ಗಂಟೆಗೆ ಬಂಧಿಸಿದ್ದೇವೆ ಎಂದು ಪುಣೆ ಪೊಲೀಸ್ ಕಮಿಷನರ್ ಅಮಿತಾಭ್ ಗುಪ್ತಾ ಹೇಳಿದ್ದಾರೆ.

ಏನಿದು ಪ್ರಕರಣ? ಕಿರಣ್ ಗೋಸಾವಿ ಅವರು ಕೆಪಿಜಿ ಡ್ರೀಮ್ಜ್ ಸೊಲ್ಯೂಷನ್ಸ್ ಎಂಬ ಕಂಪನಿಯನ್ನು ನಡೆಸುತ್ತಿದ್ದರು, ಇದು ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳಿಗೆ ವಿದೇಶದಲ್ಲಿ ಉದ್ಯೋಗದ ಭರವಸೆ ನೀಡಿತು. ಕಂಪನಿಯು ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿಕೊಂಡಿತು. ಮಲೇಷ್ಯಾದ ಹೋಟೆಲ್‌ನಲ್ಲಿ ಕೆಲಸದ ನೆಪದಲ್ಲಿ ಗೋಸಾವಿ ತನಗೆ 3.09 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ಅಂತಹ ಆಕಾಂಕ್ಷಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಮಲೇಷ್ಯಾಕ್ಕೆ ಬಂದ ಮೇಲೆ ಆಕಾಂಕ್ಷಿಗೆ ಕಿರಣ್ ಗೋಸಾವಿಯಿಂದ ಮೋಸ ಹೋಗಿರುವುದು ಗೊತ್ತಾಯಿತು. ಪುಣೆ ನಗರದ ಫರಸ್ಖಾನಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಗೋಸಾವಿ ಪ್ರಮುಖ ಆರೋಪಿಯಾಗಿದ್ದು, 2019ರಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಿರಣ್ ಗೋಸಾವಿ ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ಸಾಕ್ಷಿಯಾಗಿದ್ದರು. ಇದರಲ್ಲಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ 20 ಜನರನ್ನು ಬಂಧಿಸಲಾಯಿತು. ಈ ತಿಂಗಳ ಆರಂಭದಲ್ಲಿ ಎನ್‌ಸಿಬಿ ದಾಳಿಯ ನಂತರ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿಯಲ್ಲಿ ಕಾಣಿಸಿಕೊಂಡ ನಂತರ ಕಿರಣ್ ಗೋಸಾವಿ ಸುದ್ದಿಯಾಗಿದ್ದರು.

ಇದನ್ನೂ ಓದಿ: ಎನ್​​ಸಿಬಿ ಸಾಕ್ಷಿ ಕಿರಣ್ ಗೋಸಾವಿ ವಿರುದ್ಧ ಪುಣೆಯಲ್ಲಿ  ಮೂರನೇ ಎಫ್ಐಆರ್ ದಾಖಲು 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!