ವಂಚನೆ ಪ್ರಕರಣ: ಕಿರಣ್ ಗೋಸಾವಿ ನ.8ರವರೆಗೆ ಪೊಲೀಸ್ ಕಸ್ಟಡಿಗೆ

ಕಿರಣ್ ಗೋಸಾವಿ ಅವರು ಕೆಪಿಜಿ ಡ್ರೀಮ್ಜ್ ಸೊಲ್ಯೂಷನ್ಸ್ ಎಂಬ ಕಂಪನಿಯನ್ನು ನಡೆಸುತ್ತಿದ್ದರು, ಇದು ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳಿಗೆ ವಿದೇಶದಲ್ಲಿ ಉದ್ಯೋಗದ ಭರವಸೆ ನೀಡಿತು. ಕಂಪನಿಯು ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿಕೊಂಡಿತು.

ವಂಚನೆ ಪ್ರಕರಣ: ಕಿರಣ್ ಗೋಸಾವಿ ನ.8ರವರೆಗೆ ಪೊಲೀಸ್ ಕಸ್ಟಡಿಗೆ
ಕಿರಣ್ ಗೋಸಾವಿ, ಆರ್ಯನ್ ಖಾನ್
Follow us
| Updated By: ರಶ್ಮಿ ಕಲ್ಲಕಟ್ಟ

Updated on: Nov 05, 2021 | 4:49 PM

ಮುಂಬೈ: 2018ರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ ಗೋಸಾವಿಯ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯ ಶುಕ್ರವಾರ ಮೂರು ದಿನಗಳ ಕಾಲ ವಿಸ್ತರಿಸಿದೆ. ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಗೋಸಾವಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಸ್ವತಂತ್ರ ಸಾಕ್ಷಿಯೂ ಆಗಿದ್ದರು. ವಂಚನೆ ಪ್ರಕರಣದಲ್ಲಿ ಪುಣೆ ಪೊಲೀಸರು ಆತನನ್ನು ಈ ಹಿಂದೆ ಬಂಧಿಸಿದ್ದರು ಮತ್ತು ನವೆಂಬರ್ 5 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಯಿತು. ಶುಕ್ರವಾರ, ನ್ಯಾಯಾಲಯವು ಗೋಸಾವಿಯ ಪೊಲೀಸ್ ಕಸ್ಟಡಿಯನ್ನು ಮೂರು ದಿನಗಳ ಕಾಲ ವಿಸ್ತರಿಸಿತು. ಕಳೆದ ವಾರ ಪುಣೆ ಪೊಲೀಸರು 2018 ರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ ಗೋಸಾವಿಯ ಬಂಧನವನ್ನು ದೃಢಪಡಿಸಿದರು. ಇದೇ ಪ್ರಕರಣದಲ್ಲಿ ಪುಣೆ ಪೊಲೀಸರು ಆತನ ವಿರುದ್ಧ ಲುಕೌಟ್ ಸುತ್ತೋಲೆ ಹೊರಡಿಸಿದಾಗಿನಿಂದ ಆತ ತಲೆಮರೆಸಿಕೊಂಡಿದ್ದ. 2018 ರ ವಂಚನೆ ಪ್ರಕರಣದಲ್ಲಿ ಗೋಸಾವಿಯನ್ನು ಪುಣೆಯ ಕಟ್ರಾಜ್ ಪ್ರದೇಶದ ಲಾಡ್ಜ್‌ನಿಂದ ಮುಂಜಾನೆ 3 ಗಂಟೆಗೆ ಬಂಧಿಸಿದ್ದೇವೆ ಎಂದು ಪುಣೆ ಪೊಲೀಸ್ ಕಮಿಷನರ್ ಅಮಿತಾಭ್ ಗುಪ್ತಾ ಹೇಳಿದ್ದಾರೆ.

ಏನಿದು ಪ್ರಕರಣ? ಕಿರಣ್ ಗೋಸಾವಿ ಅವರು ಕೆಪಿಜಿ ಡ್ರೀಮ್ಜ್ ಸೊಲ್ಯೂಷನ್ಸ್ ಎಂಬ ಕಂಪನಿಯನ್ನು ನಡೆಸುತ್ತಿದ್ದರು, ಇದು ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳಿಗೆ ವಿದೇಶದಲ್ಲಿ ಉದ್ಯೋಗದ ಭರವಸೆ ನೀಡಿತು. ಕಂಪನಿಯು ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿಕೊಂಡಿತು. ಮಲೇಷ್ಯಾದ ಹೋಟೆಲ್‌ನಲ್ಲಿ ಕೆಲಸದ ನೆಪದಲ್ಲಿ ಗೋಸಾವಿ ತನಗೆ 3.09 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ಅಂತಹ ಆಕಾಂಕ್ಷಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಮಲೇಷ್ಯಾಕ್ಕೆ ಬಂದ ಮೇಲೆ ಆಕಾಂಕ್ಷಿಗೆ ಕಿರಣ್ ಗೋಸಾವಿಯಿಂದ ಮೋಸ ಹೋಗಿರುವುದು ಗೊತ್ತಾಯಿತು. ಪುಣೆ ನಗರದ ಫರಸ್ಖಾನಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಗೋಸಾವಿ ಪ್ರಮುಖ ಆರೋಪಿಯಾಗಿದ್ದು, 2019ರಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಿರಣ್ ಗೋಸಾವಿ ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ಸಾಕ್ಷಿಯಾಗಿದ್ದರು. ಇದರಲ್ಲಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ 20 ಜನರನ್ನು ಬಂಧಿಸಲಾಯಿತು. ಈ ತಿಂಗಳ ಆರಂಭದಲ್ಲಿ ಎನ್‌ಸಿಬಿ ದಾಳಿಯ ನಂತರ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿಯಲ್ಲಿ ಕಾಣಿಸಿಕೊಂಡ ನಂತರ ಕಿರಣ್ ಗೋಸಾವಿ ಸುದ್ದಿಯಾಗಿದ್ದರು.

ಇದನ್ನೂ ಓದಿ: ಎನ್​​ಸಿಬಿ ಸಾಕ್ಷಿ ಕಿರಣ್ ಗೋಸಾವಿ ವಿರುದ್ಧ ಪುಣೆಯಲ್ಲಿ  ಮೂರನೇ ಎಫ್ಐಆರ್ ದಾಖಲು 

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್