AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಕೋರ್ಟ್ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ ಕಾಡಾನೆ

ಅಧಿಕಾರಿಗಳು ಅಸಾಮಾನ್ಯ ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಿದರು. ಆನೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಯನ್ನು ಹೆದರಿಸಿ ರಾಜಾಜಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಆನೆಯನ್ನು ಓಡಿಸಿದ್ದಾರೆ.

ಉತ್ತರಾಖಂಡ ಕೋರ್ಟ್ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ ಕಾಡಾನೆ
ಆನೆ
ರಶ್ಮಿ ಕಲ್ಲಕಟ್ಟ
|

Updated on:Dec 28, 2023 | 1:52 PM

Share

ದೆಹಲಿ ಡಿಸೆಂಬರ್ 28: ಉತ್ತರಾಖಂಡದ (Uttarakhand Court) ಹರಿದ್ವಾರದ (Haridwar)ನ್ಯಾಯಾಲಯವೊಂದರಲ್ಲಿ ಬುಧವಾರ ಆನೆಯೊಂದು ಗೇಟ್ ನಿಂದ ಕೆಳಗಿಳಿದು ಆವರಣದೊಳಗೆ ನುಗ್ಗಿದ ಘಟನೆ ನಡೆದಿದೆ. ಹರಿದ್ವಾರದ ರೋಶನಾಬಾದ್ ಪ್ರದೇಶದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ಹತ್ತಿರದ ರಾಜಾಜಿ ರಕ್ಷಿತಾರಣ್ಯದಿಂದ ಹೊರಬಂದಿದೆ ಎಂದು ನಂಬಲಾದ ಆನೆ (Elephant) ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಮತ್ತು ನ್ಯಾಯಾಲಯದ ಆವರಣದಲ್ಲಿ ಸಂಚರಿಸುತ್ತಿದ್ದಂತೆ ಗೊಂದಲವನ್ನು ಸೃಷ್ಟಿಸಿತು. ಆನೆ ಗೇಟ್ ಗಳನ್ನು ಮುರಿದು ಗೋಡೆಯನ್ನು ಹಾನಿಗೊಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಘಟನೆಯ ವಿಡಿಯೊಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆನೆಯು ನ್ಯಾಯಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಮುಖ್ಯ ದ್ವಾರದಿಂದ ಕೆಳಗಿಳಿದು ತಿರುಗಾಡುವುದನ್ನು ತೋರಿಸುತ್ತದೆ.

ಅಧಿಕಾರಿಗಳು ಅಸಾಮಾನ್ಯ ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಿದರು. ಆನೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಯನ್ನು ಹೆದರಿಸಿ ರಾಜಾಜಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಆನೆಯನ್ನು ಓಡಿಸಿದ್ದಾರೆ.

ಇದನ್ನೂ ಓದಿ:ರಾಮನಗರ: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆಗೆ ಬಲಿ 

ಉತ್ತರಾಖಂಡದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿಎಂ ಧಾಕಾಟೆ ಅವರ ಪ್ರಕಾರ, ಸಿಬ್ಬಂದಿ ಅಂತಿಮವಾಗಿ ಪ್ರಾಣಿಯನ್ನು ಹೆದರಿಸಿ ರಾಜಾಜಿ ಹುಲಿ ರಕ್ಷಿತಾರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಯಶಸ್ವಿಯಾದರು. “ಕಾಡಿನ ಪಕ್ಕದ ಪ್ರದೇಶಗಳಲ್ಲಿ, ಆನೆ ಹರಿದ್ವಾರಕ್ಕೆ ಪ್ರವೇಶಿಸಿದ ಅನೇಕ ಘಟನೆಗಳು ನಡೆದಿವೆ, ಈ ಸಂದರ್ಭದಲ್ಲಿ ಅದು ಜಿಲ್ಲಾಧಿಕಾರಿ ಕಚೇರಿ, ಆನೆ ಜಿಲ್ಲಾ ನ್ಯಾಯಾಲಯದ ನ್ಯಾಯಾಂಗದ ಮುಖ್ಯ ಗೇಟ್ ಕಡೆಗೆ ಮುಂದುವರಿಯಿತು ಮತ್ತು ಮುಚ್ಚಿದ ಗೇಟ್ ಅನ್ನು ಬಲವಂತವಾಗಿ ತೆರೆಯಿತು. ಸಾಂಪ್ರದಾಯಿಕ ಮಾರ್ಗಗಳಲ್ಲಿ ಆನೆ ಬಂದಿರುವುದನ್ನು ಗಮನಿಸಬೇಕು. ಹೆಚ್ಚಿನ ಪ್ರಯತ್ನದ ನಂತರ, ಉತ್ತರಾಖಂಡ ಅರಣ್ಯ ಇಲಾಖೆಯ ತಂಡವು ಆನೆಯನ್ನು ಅದರ ನೈಸರ್ಗಿಕ ಆವಾಸಸ್ಥಾನಕ್ಕೆ ಓಡಿಸಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Thu, 28 December 23

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ