AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಕೋರ್ಟ್ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ ಕಾಡಾನೆ

ಅಧಿಕಾರಿಗಳು ಅಸಾಮಾನ್ಯ ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಿದರು. ಆನೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಯನ್ನು ಹೆದರಿಸಿ ರಾಜಾಜಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಆನೆಯನ್ನು ಓಡಿಸಿದ್ದಾರೆ.

ಉತ್ತರಾಖಂಡ ಕೋರ್ಟ್ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ ಕಾಡಾನೆ
ಆನೆ
ರಶ್ಮಿ ಕಲ್ಲಕಟ್ಟ
|

Updated on:Dec 28, 2023 | 1:52 PM

Share

ದೆಹಲಿ ಡಿಸೆಂಬರ್ 28: ಉತ್ತರಾಖಂಡದ (Uttarakhand Court) ಹರಿದ್ವಾರದ (Haridwar)ನ್ಯಾಯಾಲಯವೊಂದರಲ್ಲಿ ಬುಧವಾರ ಆನೆಯೊಂದು ಗೇಟ್ ನಿಂದ ಕೆಳಗಿಳಿದು ಆವರಣದೊಳಗೆ ನುಗ್ಗಿದ ಘಟನೆ ನಡೆದಿದೆ. ಹರಿದ್ವಾರದ ರೋಶನಾಬಾದ್ ಪ್ರದೇಶದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ಹತ್ತಿರದ ರಾಜಾಜಿ ರಕ್ಷಿತಾರಣ್ಯದಿಂದ ಹೊರಬಂದಿದೆ ಎಂದು ನಂಬಲಾದ ಆನೆ (Elephant) ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಮತ್ತು ನ್ಯಾಯಾಲಯದ ಆವರಣದಲ್ಲಿ ಸಂಚರಿಸುತ್ತಿದ್ದಂತೆ ಗೊಂದಲವನ್ನು ಸೃಷ್ಟಿಸಿತು. ಆನೆ ಗೇಟ್ ಗಳನ್ನು ಮುರಿದು ಗೋಡೆಯನ್ನು ಹಾನಿಗೊಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಘಟನೆಯ ವಿಡಿಯೊಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆನೆಯು ನ್ಯಾಯಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಮುಖ್ಯ ದ್ವಾರದಿಂದ ಕೆಳಗಿಳಿದು ತಿರುಗಾಡುವುದನ್ನು ತೋರಿಸುತ್ತದೆ.

ಅಧಿಕಾರಿಗಳು ಅಸಾಮಾನ್ಯ ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಿದರು. ಆನೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಯನ್ನು ಹೆದರಿಸಿ ರಾಜಾಜಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಆನೆಯನ್ನು ಓಡಿಸಿದ್ದಾರೆ.

ಇದನ್ನೂ ಓದಿ:ರಾಮನಗರ: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆಗೆ ಬಲಿ 

ಉತ್ತರಾಖಂಡದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿಎಂ ಧಾಕಾಟೆ ಅವರ ಪ್ರಕಾರ, ಸಿಬ್ಬಂದಿ ಅಂತಿಮವಾಗಿ ಪ್ರಾಣಿಯನ್ನು ಹೆದರಿಸಿ ರಾಜಾಜಿ ಹುಲಿ ರಕ್ಷಿತಾರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಯಶಸ್ವಿಯಾದರು. “ಕಾಡಿನ ಪಕ್ಕದ ಪ್ರದೇಶಗಳಲ್ಲಿ, ಆನೆ ಹರಿದ್ವಾರಕ್ಕೆ ಪ್ರವೇಶಿಸಿದ ಅನೇಕ ಘಟನೆಗಳು ನಡೆದಿವೆ, ಈ ಸಂದರ್ಭದಲ್ಲಿ ಅದು ಜಿಲ್ಲಾಧಿಕಾರಿ ಕಚೇರಿ, ಆನೆ ಜಿಲ್ಲಾ ನ್ಯಾಯಾಲಯದ ನ್ಯಾಯಾಂಗದ ಮುಖ್ಯ ಗೇಟ್ ಕಡೆಗೆ ಮುಂದುವರಿಯಿತು ಮತ್ತು ಮುಚ್ಚಿದ ಗೇಟ್ ಅನ್ನು ಬಲವಂತವಾಗಿ ತೆರೆಯಿತು. ಸಾಂಪ್ರದಾಯಿಕ ಮಾರ್ಗಗಳಲ್ಲಿ ಆನೆ ಬಂದಿರುವುದನ್ನು ಗಮನಿಸಬೇಕು. ಹೆಚ್ಚಿನ ಪ್ರಯತ್ನದ ನಂತರ, ಉತ್ತರಾಖಂಡ ಅರಣ್ಯ ಇಲಾಖೆಯ ತಂಡವು ಆನೆಯನ್ನು ಅದರ ನೈಸರ್ಗಿಕ ಆವಾಸಸ್ಥಾನಕ್ಕೆ ಓಡಿಸಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Thu, 28 December 23

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್